AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣದಲ್ಲಿ ಎರಡು ಪ್ರತ್ಯೇಕ ಅಪಘಾತ, 9 ಮಂದಿ ಸಾವು

ಅದಿಲಾಬಾದ್ ಮತ್ತು ನಲ್ಗೊಂಡ ಜಿಲ್ಲೆಗಳ ರಸ್ತೆಗಳು ರಕ್ತಸಿಕ್ತವಾಗಿವೆ, ಸೋಮವಾರ ಮಧ್ಯರಾತ್ರಿ ಎರಡು ಪ್ರತ್ಯೇಕ ಅಪಘಾತಗಳಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ.  ಆದಿಲಾಬಾದ್ ಜಿಲ್ಲೆಯ ಗುಡಿಹತ್ನೂರು ಮಂಡಲದ ಮೇಕಲಗಂಡಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ತೆಲಂಗಾಣದಲ್ಲಿ ಎರಡು ಪ್ರತ್ಯೇಕ ಅಪಘಾತ, 9 ಮಂದಿ ಸಾವು
ಸಾವುImage Credit source: Etv Bharat
ನಯನಾ ರಾಜೀವ್
|

Updated on: Oct 01, 2024 | 8:50 AM

Share

ಅದಿಲಾಬಾದ್ ಮತ್ತು ನಲ್ಗೊಂಡ ಜಿಲ್ಲೆಗಳ ರಸ್ತೆಗಳು ರಕ್ತಸಿಕ್ತವಾಗಿವೆ, ಸೋಮವಾರ ಮಧ್ಯರಾತ್ರಿ ಎರಡು ಪ್ರತ್ಯೇಕ ಅಪಘಾತಗಳಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ.  ಆದಿಲಾಬಾದ್ ಜಿಲ್ಲೆಯ ಗುಡಿಹತ್ನೂರು ಮಂಡಲದ ಮೇಕಲಗಂಡಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆದಿಲಾಬಾದ್ ಮೂಲದ ಮೊಯಿಜ್ (60), ಅಲಿ (8), ಖಾಜಾ ಮೊಯಿನುದ್ದೀನ್ (40) ಮತ್ತು ಮೊಹಮ್ಮದ್ ಉಸ್ಮಾನುದ್ದೀನ್ (10) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ರಿಮ್ಸ್‌ಗೆ ಕರೆದೊಯ್ಯಲಾಗಿದೆ. ಮತ್ತೋರ್ವ ವ್ಯಕ್ತಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ಆದಿಲಾಬಾದ್ ಟೀಚರ್ಸ್ ಕಾಲೋನಿಗೆ ಸೇರಿದವರು ಎಂದು ಗುರುತಿಸಲಾಗಿದೆ. ಭೈಂಸಾದಿಂದ ಆದಿಲಾಬಾದ್‌ಗೆ ಬರುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಘಟನೆಯ ಕುರಿತು ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿಯಬೇಕಿದೆ.

ನಲ್ಗೊಂಡದಲ್ಲಿ ರಸ್ತೆ ಅಪಘಾತ:ಮತ್ತೊಂದು ಘಟನೆಯಲ್ಲಿ ನಲ್ಗೊಂಡ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ತ್ರಿಪುರಾರಂ ಮಂಡಲದ ಗುಂಟಿಪಲ್ಲಿ ಅಣ್ಣಾರಾಮ್ ಗ್ರಾಮದ ಮಲ್ಲಿಕಾಂತಿ ದಿನೇಶ್ (22) ತನ್ನ ಸ್ನೇಹಿತರಾದ ವೇಮುಲಪಲ್ಲಿ ಮಂಡಲದ ಮೊಳಕಪಟ್ಟಣ ಗ್ರಾಮದ ವಲಪುದಾಸು ವಂಶಿ (22) ಮತ್ತು ಮದ್ಗುಲಪಲ್ಲಿ ಮಂಡಲದ ಅಗಮೋತ್ಕೂರು ಗ್ರಾಮದ ಅಭಿರಲ್ಲ ಶ್ರೀಕಾಂತ್ (21) ಅವರೊಂದಿಗೆ ಸೂರ್ಯಪೇಟ್ ಜಿಲ್ಲೆಯ ಕೊಡದ ಪಟ್ಟಣಕ್ಕೆ ಹೊಸ ಕಾರು ಖರೀದಿಸಲು ತೆರಳಿದ್ದರು.

ಮತ್ತಷ್ಟು ಓದಿ: ಕಾರ್ಕಳ-ಧರ್ಮಸ್ಥಳ ಹೆದ್ದಾರಿಯಲ್ಲಿ ಭೀಕರ ಅಪಘಾತ: ತಂದೆ ಜತೆಗೆ ಮೂವರು ಮಕ್ಕಳು ಸಾವು

ಅಲ್ಲಿ ಸ್ವಲ್ಪ ಹಣ ಪಾವತಿಸಿ ದ್ವಿಚಕ್ರ ವಾಹನದಲ್ಲಿ ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಚಿಲುಕೂರು ಮಂಡಲದ ಮಿಟ್ಸ್ ಕಾಲೇಜಿನಲ್ಲಿ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!