AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡುಕ ಡ್ರೈವರ್​ನ ಅವಾಂತರ: ಪಿಕಪ್ ವಾಹನ ಪಲ್ಟಿ, 9 ಜನರ ಸಾವು

ಜಿಲ್ಲಾಧಿಕಾರಿ ಮಧುಸೂದನ್ ಮಿಶ್ರಾ ಪ್ರಕಾರ, ಪ್ರಯಾಣಿಕರು ಒಡಿಶಾದ ಸಿಂಧಿಗುಡ ಗ್ರಾಮದಿಂದ ಛತ್ತೀಸ್ ಘಡ ಕುಲ್ತಾ ಗ್ರಾಮಕ್ಕೆ ಪ್ರಯಾಣಿಸುತ್ತಿದ್ದರು. ಈ ನಡುವೆ ಕುಡಿದ ಮತ್ತಿನಲ್ಲಿ ಚಾಲಕ ವಾಹನ ಚಲಾಯಿಸಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಕುಡುಕ ಡ್ರೈವರ್​ನ ಅವಾಂತರ: ಪಿಕಪ್ ವಾಹನ ಪಲ್ಟಿ, 9 ಜನರ ಸಾವು
ಕೊರಪುತ್ ಜಿಲ್ಲೆಯ ಕೋಟ್‌ಪ್ಯಾಡ್‌ನಲ್ಲಿ ವಾಹನ ಪಲ್ಟಿಯಾಗಿರುವುದು
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Feb 01, 2021 | 9:52 AM

ಕೊರಪುಟ್‌: ಒಡಿಶಾದ ಕೊರಪುತ್ ಜಿಲ್ಲೆಯ ಕೋಟ್‌ಪ್ಯಾಡ್‌ನಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ವ್ಯಾನ್ ಪಲ್ಟಿಯಾಗಿ ಒಂಬತ್ತು ಜನರು ಪ್ರಾಣ ಕಳೆದುಕೊಂಡಿದ್ದು 13 ಜನರು ಗಾಯಗೊಂಡಿದ್ದಾರೆ.

ಜಿಲ್ಲಾಧಿಕಾರಿ ಮಧುಸೂದನ್ ಮಿಶ್ರಾ ಪ್ರಕಾರ, ಪ್ರಯಾಣಿಕರು ಒಡಿಶಾದ ಸಿಂಧಿಗುಡ ಗ್ರಾಮದಿಂದ ಛತ್ತೀಸ್ ಘಡ ಕುಲ್ತಾ ಗ್ರಾಮಕ್ಕೆ ಪ್ರಯಾಣಿಸುತ್ತಿದ್ದರು. ಈ ನಡುವೆ ಕುಡಿದ ಮತ್ತಿನಲ್ಲಿ ಚಾಲಕ ವಾಹನ ಚಲಾಯಿಸಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

“ಘಟನೆಯಲ್ಲಿ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ ಮತ್ತು 13 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೊರಪುಟ್ ಜಿಲ್ಲೆಯ ಕೋಟ್‌ಪ್ಯಾಡ್‌ನಲ್ಲಿ ಪಿಕಪ್ ವ್ಯಾನ್ ಪಲ್ಟಿಯಾಗಿದೆ. ಪ್ರಯಾಣಿಕರೆಲ್ಲರೂ ಛತ್ತೀಸ್ ಘಡದ ಕುಲ್ತಾ ಗ್ರಾಮದವರು ಮತ್ತು ಸಿಂಧಿಗುಡ ಗ್ರಾಮದಿಂದ ಹಿಂದಿರುಗುತ್ತಿದ್ದರು” ಎಂದು ಮಿಶ್ರಾ ತಿಳಿಸಿದ್ದಾರೆ.

ಇನ್ನು ಗಾಯಗೊಂಡ ಏಳು ಮಂದಿಯನ್ನು ಕೊರಪುತ್‌ನ ಲಕ್ಷ್ಮಣ್ ನಾಯಕ್ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದೆ ಹಾಗೂ ಇಬ್ಬರನ್ನು ಕೋಟ್‌ಪ್ಯಾಡ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಸಬ್ ಕಲೆಕ್ಟರ್ ಜಯಪುರ ಹೇಮಕಂತ ಸಯಾ ಅವರ ಪ್ರಕಾರ ಗಾಯಗೊಂಡ ಇತರ ನಾಲ್ವರನ್ನು ಜಗದಲ್ಪುರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಶವಗಳನ್ನು ಕೋಟ್‌ಪ್ಯಾಡ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕಳುಹಿಸಲಾಗಿದೆ. ಏಳು ಮಂದಿ ಸ್ಥಳದಲ್ಲೇ ಮತ್ತು ಇಬ್ಬರು ಕೋಟ್‌ಪ್ಯಾಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. 30 ಕ್ಕೂ ಹೆಚ್ಚು ಜನರು ವ್ಯಾನ್‌ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಫಾರ್ಚೂನರ್​ ಕಾರು ಪಲ್ಟಿ: ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು, ಯಾವೂರಲ್ಲಿ?

Published On - 6:46 am, Mon, 1 February 21

ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’