AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡುಕ ಡ್ರೈವರ್​ನ ಅವಾಂತರ: ಪಿಕಪ್ ವಾಹನ ಪಲ್ಟಿ, 9 ಜನರ ಸಾವು

ಜಿಲ್ಲಾಧಿಕಾರಿ ಮಧುಸೂದನ್ ಮಿಶ್ರಾ ಪ್ರಕಾರ, ಪ್ರಯಾಣಿಕರು ಒಡಿಶಾದ ಸಿಂಧಿಗುಡ ಗ್ರಾಮದಿಂದ ಛತ್ತೀಸ್ ಘಡ ಕುಲ್ತಾ ಗ್ರಾಮಕ್ಕೆ ಪ್ರಯಾಣಿಸುತ್ತಿದ್ದರು. ಈ ನಡುವೆ ಕುಡಿದ ಮತ್ತಿನಲ್ಲಿ ಚಾಲಕ ವಾಹನ ಚಲಾಯಿಸಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಕುಡುಕ ಡ್ರೈವರ್​ನ ಅವಾಂತರ: ಪಿಕಪ್ ವಾಹನ ಪಲ್ಟಿ, 9 ಜನರ ಸಾವು
ಕೊರಪುತ್ ಜಿಲ್ಲೆಯ ಕೋಟ್‌ಪ್ಯಾಡ್‌ನಲ್ಲಿ ವಾಹನ ಪಲ್ಟಿಯಾಗಿರುವುದು
ಆಯೇಷಾ ಬಾನು
| Edited By: |

Updated on:Feb 01, 2021 | 9:52 AM

Share

ಕೊರಪುಟ್‌: ಒಡಿಶಾದ ಕೊರಪುತ್ ಜಿಲ್ಲೆಯ ಕೋಟ್‌ಪ್ಯಾಡ್‌ನಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ವ್ಯಾನ್ ಪಲ್ಟಿಯಾಗಿ ಒಂಬತ್ತು ಜನರು ಪ್ರಾಣ ಕಳೆದುಕೊಂಡಿದ್ದು 13 ಜನರು ಗಾಯಗೊಂಡಿದ್ದಾರೆ.

ಜಿಲ್ಲಾಧಿಕಾರಿ ಮಧುಸೂದನ್ ಮಿಶ್ರಾ ಪ್ರಕಾರ, ಪ್ರಯಾಣಿಕರು ಒಡಿಶಾದ ಸಿಂಧಿಗುಡ ಗ್ರಾಮದಿಂದ ಛತ್ತೀಸ್ ಘಡ ಕುಲ್ತಾ ಗ್ರಾಮಕ್ಕೆ ಪ್ರಯಾಣಿಸುತ್ತಿದ್ದರು. ಈ ನಡುವೆ ಕುಡಿದ ಮತ್ತಿನಲ್ಲಿ ಚಾಲಕ ವಾಹನ ಚಲಾಯಿಸಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

“ಘಟನೆಯಲ್ಲಿ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ ಮತ್ತು 13 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೊರಪುಟ್ ಜಿಲ್ಲೆಯ ಕೋಟ್‌ಪ್ಯಾಡ್‌ನಲ್ಲಿ ಪಿಕಪ್ ವ್ಯಾನ್ ಪಲ್ಟಿಯಾಗಿದೆ. ಪ್ರಯಾಣಿಕರೆಲ್ಲರೂ ಛತ್ತೀಸ್ ಘಡದ ಕುಲ್ತಾ ಗ್ರಾಮದವರು ಮತ್ತು ಸಿಂಧಿಗುಡ ಗ್ರಾಮದಿಂದ ಹಿಂದಿರುಗುತ್ತಿದ್ದರು” ಎಂದು ಮಿಶ್ರಾ ತಿಳಿಸಿದ್ದಾರೆ.

ಇನ್ನು ಗಾಯಗೊಂಡ ಏಳು ಮಂದಿಯನ್ನು ಕೊರಪುತ್‌ನ ಲಕ್ಷ್ಮಣ್ ನಾಯಕ್ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದೆ ಹಾಗೂ ಇಬ್ಬರನ್ನು ಕೋಟ್‌ಪ್ಯಾಡ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಸಬ್ ಕಲೆಕ್ಟರ್ ಜಯಪುರ ಹೇಮಕಂತ ಸಯಾ ಅವರ ಪ್ರಕಾರ ಗಾಯಗೊಂಡ ಇತರ ನಾಲ್ವರನ್ನು ಜಗದಲ್ಪುರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಶವಗಳನ್ನು ಕೋಟ್‌ಪ್ಯಾಡ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕಳುಹಿಸಲಾಗಿದೆ. ಏಳು ಮಂದಿ ಸ್ಥಳದಲ್ಲೇ ಮತ್ತು ಇಬ್ಬರು ಕೋಟ್‌ಪ್ಯಾಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. 30 ಕ್ಕೂ ಹೆಚ್ಚು ಜನರು ವ್ಯಾನ್‌ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಫಾರ್ಚೂನರ್​ ಕಾರು ಪಲ್ಟಿ: ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು, ಯಾವೂರಲ್ಲಿ?

Published On - 6:46 am, Mon, 1 February 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!