AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡುಕ ಡ್ರೈವರ್​ನ ಅವಾಂತರ: ಪಿಕಪ್ ವಾಹನ ಪಲ್ಟಿ, 9 ಜನರ ಸಾವು

ಜಿಲ್ಲಾಧಿಕಾರಿ ಮಧುಸೂದನ್ ಮಿಶ್ರಾ ಪ್ರಕಾರ, ಪ್ರಯಾಣಿಕರು ಒಡಿಶಾದ ಸಿಂಧಿಗುಡ ಗ್ರಾಮದಿಂದ ಛತ್ತೀಸ್ ಘಡ ಕುಲ್ತಾ ಗ್ರಾಮಕ್ಕೆ ಪ್ರಯಾಣಿಸುತ್ತಿದ್ದರು. ಈ ನಡುವೆ ಕುಡಿದ ಮತ್ತಿನಲ್ಲಿ ಚಾಲಕ ವಾಹನ ಚಲಾಯಿಸಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಕುಡುಕ ಡ್ರೈವರ್​ನ ಅವಾಂತರ: ಪಿಕಪ್ ವಾಹನ ಪಲ್ಟಿ, 9 ಜನರ ಸಾವು
ಕೊರಪುತ್ ಜಿಲ್ಲೆಯ ಕೋಟ್‌ಪ್ಯಾಡ್‌ನಲ್ಲಿ ವಾಹನ ಪಲ್ಟಿಯಾಗಿರುವುದು
ಆಯೇಷಾ ಬಾನು
| Edited By: |

Updated on:Feb 01, 2021 | 9:52 AM

Share

ಕೊರಪುಟ್‌: ಒಡಿಶಾದ ಕೊರಪುತ್ ಜಿಲ್ಲೆಯ ಕೋಟ್‌ಪ್ಯಾಡ್‌ನಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ವ್ಯಾನ್ ಪಲ್ಟಿಯಾಗಿ ಒಂಬತ್ತು ಜನರು ಪ್ರಾಣ ಕಳೆದುಕೊಂಡಿದ್ದು 13 ಜನರು ಗಾಯಗೊಂಡಿದ್ದಾರೆ.

ಜಿಲ್ಲಾಧಿಕಾರಿ ಮಧುಸೂದನ್ ಮಿಶ್ರಾ ಪ್ರಕಾರ, ಪ್ರಯಾಣಿಕರು ಒಡಿಶಾದ ಸಿಂಧಿಗುಡ ಗ್ರಾಮದಿಂದ ಛತ್ತೀಸ್ ಘಡ ಕುಲ್ತಾ ಗ್ರಾಮಕ್ಕೆ ಪ್ರಯಾಣಿಸುತ್ತಿದ್ದರು. ಈ ನಡುವೆ ಕುಡಿದ ಮತ್ತಿನಲ್ಲಿ ಚಾಲಕ ವಾಹನ ಚಲಾಯಿಸಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

“ಘಟನೆಯಲ್ಲಿ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ ಮತ್ತು 13 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೊರಪುಟ್ ಜಿಲ್ಲೆಯ ಕೋಟ್‌ಪ್ಯಾಡ್‌ನಲ್ಲಿ ಪಿಕಪ್ ವ್ಯಾನ್ ಪಲ್ಟಿಯಾಗಿದೆ. ಪ್ರಯಾಣಿಕರೆಲ್ಲರೂ ಛತ್ತೀಸ್ ಘಡದ ಕುಲ್ತಾ ಗ್ರಾಮದವರು ಮತ್ತು ಸಿಂಧಿಗುಡ ಗ್ರಾಮದಿಂದ ಹಿಂದಿರುಗುತ್ತಿದ್ದರು” ಎಂದು ಮಿಶ್ರಾ ತಿಳಿಸಿದ್ದಾರೆ.

ಇನ್ನು ಗಾಯಗೊಂಡ ಏಳು ಮಂದಿಯನ್ನು ಕೊರಪುತ್‌ನ ಲಕ್ಷ್ಮಣ್ ನಾಯಕ್ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದೆ ಹಾಗೂ ಇಬ್ಬರನ್ನು ಕೋಟ್‌ಪ್ಯಾಡ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಸಬ್ ಕಲೆಕ್ಟರ್ ಜಯಪುರ ಹೇಮಕಂತ ಸಯಾ ಅವರ ಪ್ರಕಾರ ಗಾಯಗೊಂಡ ಇತರ ನಾಲ್ವರನ್ನು ಜಗದಲ್ಪುರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಶವಗಳನ್ನು ಕೋಟ್‌ಪ್ಯಾಡ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕಳುಹಿಸಲಾಗಿದೆ. ಏಳು ಮಂದಿ ಸ್ಥಳದಲ್ಲೇ ಮತ್ತು ಇಬ್ಬರು ಕೋಟ್‌ಪ್ಯಾಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. 30 ಕ್ಕೂ ಹೆಚ್ಚು ಜನರು ವ್ಯಾನ್‌ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಫಾರ್ಚೂನರ್​ ಕಾರು ಪಲ್ಟಿ: ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು, ಯಾವೂರಲ್ಲಿ?

Published On - 6:46 am, Mon, 1 February 21

ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ