AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿ ಬಿಕ್ಕಟ್ಟು ವಿಚಾರ: ಭಾರತ-ಚೀನಾ ನಡುವೆ 16 ಗಂಟೆಗಳ ಮಾತುಕತೆ

ಜ.25ರಂದು ಬೆಳಗ್ಗೆ 10.30ಕ್ಕೆ ಆರಂಭವಾದ ಮಾತುಕತೆಯು ರಾತ್ರಿ 2.30ರ ವರೆಗೆ ನಡೆದಿತ್ತು. 16 ಗಂಟೆಗಳ ಕಾಲ ನಡೆದ ಉಭಯ ದೇಶಗಳ ಸಭೆಯಲ್ಲಿ ಪೂರ್ವ ಲಡಾಖ್ ಭಾಗದಲ್ಲಿ ನಿಯೋಜಿಸಿರುವ ಸೇನೆಯನ್ನು ಹಿಂಪಡೆಯುವ ಕುರಿತು ಚರ್ಚೆ ನಡೆಸಲಾಯಿತು

ಗಡಿ ಬಿಕ್ಕಟ್ಟು ವಿಚಾರ: ಭಾರತ-ಚೀನಾ ನಡುವೆ 16 ಗಂಟೆಗಳ ಮಾತುಕತೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Apr 06, 2022 | 8:42 PM

Share

ದೆಹಲಿ: ಪೂರ್ವ ಲಡಾಖ್ ಭಾಗದಲ್ಲಿ ಉದ್ಭವಿಸಿರುವ ಸಂಘರ್ಷ ಪರಿಸ್ಥಿತಿಯನ್ನು ತಿಳಿಗೊಳಿಸುವ ಉದ್ದೇಶದಿಂದ ನಡೆದ ಭಾರತ ಚೀನಾ ಸೇನಾ ಕಮಾಂಡರ್ ಮಟ್ಟದ 9ನೇ ಸುತ್ತಿನ ಮಾತುಕತೆ ತಡರಾತ್ರಿ 2.30 ಸುಮಾರಿಗೆ ಮುಕ್ತಾಯವಾಗಿದೆ.

ನಿನ್ನೆ ಬೆಳಗ್ಗೆ 10.30ಕ್ಕೆ ಆರಂಭವಾದ ಮಾತುಕತೆಯು ರಾತ್ರಿ 2.30ರ ವರೆಗೆ ನಡೆದಿತ್ತು. 16 ಗಂಟೆಗಳ ಕಾಲ ನಡೆದ ಉಭಯ ದೇಶಗಳ ಸಭೆಯಲ್ಲಿ ಪೂರ್ವ ಲಡಾಖ್ ಭಾಗದಲ್ಲಿ ನಿಯೋಜಿಸಿರುವ ಸೇನೆಯನ್ನು ಹಿಂಪಡೆಯುವ ಕುರಿತು ಚರ್ಚೆ ನಡೆಸಲಾಯಿತು ಎಂದು ಮೂಲಗಳು ಮಾಹಿತಿ ನೀಡಿವೆ.

ಚೀನಾ ಭೂಭಾಗದ ವಾಸ್ತವ ನಿಯಂತ್ರಣ ರೇಖೆ (LAC) ಸಮೀಪದ ಮೋಲ್ಡೋ ಗಡಿಭಾಗದಲ್ಲಿ ಸಭೆ ನಡೆದಿತ್ತು. ಮಾತುಕತೆಯ ಫಲಿತಾಂಶಗಳ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಗಡಿ ವಿಚಾರವಾಗಿ ಸಂಘರ್ಷ ಪರಿಸ್ಥಿತಿ ನಿರ್ಮಾಣವಾದ ಬಳಿಕ, ನಿನ್ನೆಯ ಮಾತುಕತೆಗೂ ಮೊದಲು 8 ಸುತ್ತಿನ ಮಾತುಕತೆ ನಡೆದಿತ್ತು. ಎಂಟನೇ ಸುತ್ತಿನ ಮಾತುಕತೆ ಕಳೆದ ವರ್ಷ ನವೆಂಬರ್ 6ರಂದು ನಡೆದಿತ್ತು.

7ನೇ ಸುತ್ತಿನ ಮಾತುಕತೆಯು, ಕಳೆದ ವರ್ಷ ಅಕ್ಟೋಬರ್ 12ರಂದು ನಡೆದಿತ್ತು. ಪಾಂಗಾಂಗ್ ಸರೋವರದ ದಕ್ಷಿಣ ಭಾಗದಿಂದ ಭಾರತದ ಸೈನಿಕರು ಕೂಡಲೇ ಹಿಂದೆ ಸರಿಯಬೇಕು ಎಂದು ಚೀನಾ ಅಂದು ಒತ್ತಾಯಿಸಿತ್ತು. ಪಾಂಗಾಂಗ್ ಸರೋವರ ಸೇರಿದಂತೆ, ಭಾರತ-ಚೀನಾ ಸಂಘರ್ಷಕ್ಕೆ ಕಾರಣವಾಗಿರುವ ಇತರ ಸ್ಥಳಗಳಿಂದ ಸೈನಿಕರನ್ನು ಹಿಂಪಡೆಯುವ ಪ್ರಕ್ರಿಯೆ ಎರಡೂ ದೇಶಗಳಿಂದ ಏಕಕಾಲಕ್ಕೆ ನಡೆಯಬೇಕು ಎಂದು ಸ್ಪಷ್ಟಪಡಿಸಿತ್ತು.

ಹಲವು ಸುತ್ತಿನ ಮಾತುಕತೆಗಳು ವಿಫಲವಾದ ಬಳಿಕ, ಉಭಯ ದೇಶಗಳ ಒಟ್ಟು 1 ಲಕ್ಷ ಸೈನಿಕರನ್ನು ತಮ್ಮ ವಿವಿಧ ಗಡಿ ಭಾಗದಲ್ಲಿ ನಿಯೋಜಿಸಿತ್ತು. ಭಾರತವೂ 50 ಸಾವಿರ ಸೈನಿಕರನ್ನು ಸೂಕ್ತ ಸ್ಥಳಗಳಲ್ಲಿ ನಿಯೋಜನೆ ಮಾಡಿ ಯುದ್ಧಸನ್ನದ್ಧತೆಯ ಸಂದೇಶ ರವಾನಿಸಿತ್ತು.

ಗಡಿ ನುಸುಳಲು ಯತ್ನಿಸಿದ ಚೀನಾ ಯೋಧರನ್ನು ಹಿಮ್ಮೆಟ್ಟಿಸಿದ ಭಾರತೀಯ ಸೇನೆ; ಸಿಕ್ಕಿಂ ನಾಥುಲಾದಲ್ಲಿ ಘಟನೆ

Published On - 1:13 pm, Mon, 25 January 21

Follow Us
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ