Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿ ಬಿಕ್ಕಟ್ಟು ವಿಚಾರ: ಭಾರತ-ಚೀನಾ ನಡುವೆ 16 ಗಂಟೆಗಳ ಮಾತುಕತೆ

ಜ.25ರಂದು ಬೆಳಗ್ಗೆ 10.30ಕ್ಕೆ ಆರಂಭವಾದ ಮಾತುಕತೆಯು ರಾತ್ರಿ 2.30ರ ವರೆಗೆ ನಡೆದಿತ್ತು. 16 ಗಂಟೆಗಳ ಕಾಲ ನಡೆದ ಉಭಯ ದೇಶಗಳ ಸಭೆಯಲ್ಲಿ ಪೂರ್ವ ಲಡಾಖ್ ಭಾಗದಲ್ಲಿ ನಿಯೋಜಿಸಿರುವ ಸೇನೆಯನ್ನು ಹಿಂಪಡೆಯುವ ಕುರಿತು ಚರ್ಚೆ ನಡೆಸಲಾಯಿತು

ಗಡಿ ಬಿಕ್ಕಟ್ಟು ವಿಚಾರ: ಭಾರತ-ಚೀನಾ ನಡುವೆ 16 ಗಂಟೆಗಳ ಮಾತುಕತೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on:Apr 06, 2022 | 8:42 PM

ದೆಹಲಿ: ಪೂರ್ವ ಲಡಾಖ್ ಭಾಗದಲ್ಲಿ ಉದ್ಭವಿಸಿರುವ ಸಂಘರ್ಷ ಪರಿಸ್ಥಿತಿಯನ್ನು ತಿಳಿಗೊಳಿಸುವ ಉದ್ದೇಶದಿಂದ ನಡೆದ ಭಾರತ ಚೀನಾ ಸೇನಾ ಕಮಾಂಡರ್ ಮಟ್ಟದ 9ನೇ ಸುತ್ತಿನ ಮಾತುಕತೆ ತಡರಾತ್ರಿ 2.30 ಸುಮಾರಿಗೆ ಮುಕ್ತಾಯವಾಗಿದೆ.

ನಿನ್ನೆ ಬೆಳಗ್ಗೆ 10.30ಕ್ಕೆ ಆರಂಭವಾದ ಮಾತುಕತೆಯು ರಾತ್ರಿ 2.30ರ ವರೆಗೆ ನಡೆದಿತ್ತು. 16 ಗಂಟೆಗಳ ಕಾಲ ನಡೆದ ಉಭಯ ದೇಶಗಳ ಸಭೆಯಲ್ಲಿ ಪೂರ್ವ ಲಡಾಖ್ ಭಾಗದಲ್ಲಿ ನಿಯೋಜಿಸಿರುವ ಸೇನೆಯನ್ನು ಹಿಂಪಡೆಯುವ ಕುರಿತು ಚರ್ಚೆ ನಡೆಸಲಾಯಿತು ಎಂದು ಮೂಲಗಳು ಮಾಹಿತಿ ನೀಡಿವೆ.

ಚೀನಾ ಭೂಭಾಗದ ವಾಸ್ತವ ನಿಯಂತ್ರಣ ರೇಖೆ (LAC) ಸಮೀಪದ ಮೋಲ್ಡೋ ಗಡಿಭಾಗದಲ್ಲಿ ಸಭೆ ನಡೆದಿತ್ತು. ಮಾತುಕತೆಯ ಫಲಿತಾಂಶಗಳ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಗಡಿ ವಿಚಾರವಾಗಿ ಸಂಘರ್ಷ ಪರಿಸ್ಥಿತಿ ನಿರ್ಮಾಣವಾದ ಬಳಿಕ, ನಿನ್ನೆಯ ಮಾತುಕತೆಗೂ ಮೊದಲು 8 ಸುತ್ತಿನ ಮಾತುಕತೆ ನಡೆದಿತ್ತು. ಎಂಟನೇ ಸುತ್ತಿನ ಮಾತುಕತೆ ಕಳೆದ ವರ್ಷ ನವೆಂಬರ್ 6ರಂದು ನಡೆದಿತ್ತು.

7ನೇ ಸುತ್ತಿನ ಮಾತುಕತೆಯು, ಕಳೆದ ವರ್ಷ ಅಕ್ಟೋಬರ್ 12ರಂದು ನಡೆದಿತ್ತು. ಪಾಂಗಾಂಗ್ ಸರೋವರದ ದಕ್ಷಿಣ ಭಾಗದಿಂದ ಭಾರತದ ಸೈನಿಕರು ಕೂಡಲೇ ಹಿಂದೆ ಸರಿಯಬೇಕು ಎಂದು ಚೀನಾ ಅಂದು ಒತ್ತಾಯಿಸಿತ್ತು. ಪಾಂಗಾಂಗ್ ಸರೋವರ ಸೇರಿದಂತೆ, ಭಾರತ-ಚೀನಾ ಸಂಘರ್ಷಕ್ಕೆ ಕಾರಣವಾಗಿರುವ ಇತರ ಸ್ಥಳಗಳಿಂದ ಸೈನಿಕರನ್ನು ಹಿಂಪಡೆಯುವ ಪ್ರಕ್ರಿಯೆ ಎರಡೂ ದೇಶಗಳಿಂದ ಏಕಕಾಲಕ್ಕೆ ನಡೆಯಬೇಕು ಎಂದು ಸ್ಪಷ್ಟಪಡಿಸಿತ್ತು.

ಹಲವು ಸುತ್ತಿನ ಮಾತುಕತೆಗಳು ವಿಫಲವಾದ ಬಳಿಕ, ಉಭಯ ದೇಶಗಳ ಒಟ್ಟು 1 ಲಕ್ಷ ಸೈನಿಕರನ್ನು ತಮ್ಮ ವಿವಿಧ ಗಡಿ ಭಾಗದಲ್ಲಿ ನಿಯೋಜಿಸಿತ್ತು. ಭಾರತವೂ 50 ಸಾವಿರ ಸೈನಿಕರನ್ನು ಸೂಕ್ತ ಸ್ಥಳಗಳಲ್ಲಿ ನಿಯೋಜನೆ ಮಾಡಿ ಯುದ್ಧಸನ್ನದ್ಧತೆಯ ಸಂದೇಶ ರವಾನಿಸಿತ್ತು.

ಗಡಿ ನುಸುಳಲು ಯತ್ನಿಸಿದ ಚೀನಾ ಯೋಧರನ್ನು ಹಿಮ್ಮೆಟ್ಟಿಸಿದ ಭಾರತೀಯ ಸೇನೆ; ಸಿಕ್ಕಿಂ ನಾಥುಲಾದಲ್ಲಿ ಘಟನೆ

Published On - 1:13 pm, Mon, 25 January 21

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ