AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಫಾ ವೈರಸ್ ಸೋಂಕಿತರಲ್ಲಿ ಮರಣ ಪ್ರಮಾಣ ಕೋವಿಡ್​ಗಿಂತಲೂ ಹೆಚ್ಚು; ಆತಂಕಕಾರಿ ಮಾಹಿತಿ ಬಹಿರಂಗಪಡಿಸಿದ ಐಸಿಎಂಆರ್

Nipah Mortality Rate; ದಕ್ಷಿಣದ ರಾಜ್ಯದಲ್ಲಿ ನಿಫಾ ವೈರಸ್ ಸೋಂಕು ಪ್ರಮಾಣ ಹೆಚ್ಚುತ್ತಿರುವುದು ಮತ್ತು ಕೋವಿಡ್‌ಗೆ ಹೋಲಿಸಿದರೆ ಹೆಚ್ಚಿನ ಮರಣ ಪ್ರಮಾಣ ಹೊಂದಿರುವುದರಿಂದ ಅದರ ವಿರುದ್ಧ ಲಸಿಕೆ ಅಭಿವೃದ್ಧಿಪಡಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಐಸಿಎಂಆರ್ ತಿಳಿಸಿದೆ.

ನಿಫಾ ವೈರಸ್ ಸೋಂಕಿತರಲ್ಲಿ ಮರಣ ಪ್ರಮಾಣ ಕೋವಿಡ್​ಗಿಂತಲೂ ಹೆಚ್ಚು; ಆತಂಕಕಾರಿ ಮಾಹಿತಿ ಬಹಿರಂಗಪಡಿಸಿದ ಐಸಿಎಂಆರ್
ಸಾಂದರ್ಭಿಕ ಚಿತ್ರ
Ganapathi Sharma
|

Updated on: Sep 16, 2023 | 11:46 AM

Share

ನವದೆಹಲಿ, ಸೆಪ್ಟೆಂಬರ್ 16: ಕೋವಿಡ್-19 ಸೋಂಕಿತರಿಗೆ ಹೋಲಿಸಿದರೆ ನಿಫಾ (Nipah) ವೈರಸ್ ಸೋಂಕಿತರಲ್ಲಿ ಮರಣ ಪ್ರಮಾಣವು ತುಂಬಾ ಹೆಚ್ಚಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಮುಖ್ಯಸ್ಥ ಡಾ ರಾಜೀವ್ ಬಹ್ಲ್ ಶುಕ್ರವಾರ ಹೇಳಿದ್ದಾರೆ. ಡಾ ಬಹ್ಲ್ ಅವರ ಪ್ರಕಾರ, ಕೋವಿಡ್‌ನ ಶೇ 2-3 ಮರಣ ಪ್ರಮಾಣಕ್ಕೆ ಹೋಲಿಸಿದರೆ ನಿಫಾ ವೈರಸ್ ಸೋಂಕಿನಿಂದ ಮರಣ ಪ್ರಮಾಣ ಶೇಕಡಾ 40 ರಿಂದ 70 ರಷ್ಟಿದೆ. ಶುಕ್ರವಾರ ಕೇರಳದ ಕೋಝಿಕ್ಕೋಡ್‌ನಲ್ಲಿ ನಿಫಾ ವೈರಸ್‌ನ ಹೊಸ ಪ್ರಕರಣ ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 6 ಕ್ಕೆ ತಲುಪಿದೆ.

ಕೇರಳದಲ್ಲಿ ಪ್ರಕರಣಗಳ ಹೆಚ್ಚಳದ ಮಧ್ಯೆ, ನಿಫಾ ವೈರಸ್ ಸೋಂಕಿಗೆ ಚಿಕಿತ್ಸೆ ನೀಡಲು ಇನ್ನೂ 20 ಡೋಸ್ ಮೊನೊಕ್ಲೋನಲ್ ಆಂಟಿಬಾಡಿಗಳನ್ನು ಪೂರೈಸುವಂತೆ ಭಾರತವು ಆಸ್ಟ್ರೇಲಿಯಾಕ್ಕೆ ಮನವಿ ಮಾಡಿದೆ.

ದಕ್ಷಿಣದ ರಾಜ್ಯದಲ್ಲಿ ನಿಫಾ ವೈರಸ್ ಸೋಂಕು ಪ್ರಮಾಣ ಹೆಚ್ಚುತ್ತಿರುವುದು ಮತ್ತು ಕೋವಿಡ್‌ಗೆ ಹೋಲಿಸಿದರೆ ಹೆಚ್ಚಿನ ಮರಣ ಪ್ರಮಾಣ ಹೊಂದಿರುವುದರಿಂದ ಅದರ ವಿರುದ್ಧ ಲಸಿಕೆ ಅಭಿವೃದ್ಧಿಪಡಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಐಸಿಎಂಆರ್ ತಿಳಿಸಿದೆ.

ನಾವು 2018 ರಲ್ಲಿ ಆಸ್ಟ್ರೇಲಿಯಾದಿಂದ ಕೆಲವು ಡೋಸ್ ಮೊನೊಕ್ಲೋನಲ್ ಆಂಟಿಬಾಡಿಗಳನ್ನು ಪಡೆದುಕೊಂಡಿದ್ದೆವು. ಪ್ರಸ್ತುತ, ಕೇವಲ 10 ರೋಗಿಗಳಿಗೆ ಮಾತ್ರ ಸಾಕಾಗುವಷ್ಟು ಲಭ್ಯವಿವೆ ಎಂದು ಡಾ ರಾಜೀವ್ ಬಹ್ಲ್ ತಿಳಿಸಿದ್ದಾರೆ.

ವಿದೇಶಗಳಲ್ಲಿ ನಿಫಾ ವೈರಸ್‌ಗೆ ತುತ್ತಾದ 14 ಜನರು ಮೊನೊಕ್ಲೋನಲ್ ಆಂಟಿಬಾಡಿ ಚಿಕಿತ್ಸೆಯನ್ನು ಪಡೆದ ನಂತರ ಸಂಪೂರ್ಣ ಚೇತರಿಸಿಕೊಂಡಿದ್ದಾರೆ ಎಂದು ಡಾ ಬಹ್ಲ್ ಹೇಳಿದ್ದಾರೆ.

ಇದನ್ನೂ ಓದಿ: Nipah Virus ಭೀತಿ: ನಿಫಾ ವಾರ್ಡ್ ತೆರೆದ ಚಿಕ್ಕಮಗಳೂರು ಜಿಲ್ಲಾಡಳಿತ, ಮೈಸೂರಿನಲ್ಲಿ ಕಟ್ಟೆಚ್ಚರ

ಹೆಚ್ಚುತ್ತಿರುವ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು, ಕೋಝಿಕ್ಕೋಡ್‌ನ ಎಲ್ಲಾ ಶಿಕ್ಷಣ ಸಂಸ್ಥೆಗಳು ಇಂದಿನಿಂದ ಒಂದು ವಾರದವರೆಗೆ ರಜೆ ಘೋಷಿಸಿವೆ.

ಕೇರಳದಲ್ಲಿ ನಿಫಾ ವೈರಸ್ ಸೋಂಕಿತರ ಸಂಪರ್ಕ ಪಟ್ಟಿ 1,080ಕ್ಕೆ ಏರಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಶುಕ್ರವಾರ ಹೇಳಿದ್ದಾರೆ. ಇವರಲ್ಲಿ 327 ಮಂದಿ ಆರೋಗ್ಯ ಕಾರ್ಯಕರ್ತರಾಗಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ