AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಭಯಾ ಪ್ರಕರಣ: ದಿಲ್ಲಿ ಕೋರ್ಟ್​ಗೆ ಹೊಸ ಅರ್ಜಿ ಸಲ್ಲಿಸಿದ ಮತ್ತೊಬ್ಬ ಅತ್ಯಾಚಾರಿ

ದೆಹಲಿ: ಇಡೀ ದೇಶವನ್ನೇ ಬೆಚ್ಚಿಬೀಳಿಸಿದ.. ರಾಷ್ಟ್ರ ರಾಜಧಾನಿ ದಿಲ್ಲಿಯನ್ನೇ ನಡುಗಿಸಿದ್ದ ನಿರ್ಭಯಾ ಗ್ಯಾಂಗ್​ರೇಪ್ ನಡೆದು ಏಳು ವರ್ಷಗಳೇ ಉರುಳಿವೆ. ಆದ್ರೂ ಆಕೆಯ ಮೇಲೆ ಮೃಗಗಳಂತೆ ಎರಗಿ, ರಣಹದ್ದುಗಳಂತೆ ಕಿತ್ತು ತಿಂದ ನರ ರಾಕ್ಷಸರು ಇನ್ನೂ ಜೀವಂತವಾಗಿದ್ದಾರೆ. ಮರಣ ಶಾಸನದಿಂದ ತಪ್ಪಿಸಿಕೊಳ್ಳಲು ನಾನಾ ಪ್ರಯತ್ನ ಮಾಡುತ್ತಿದ್ದಾರೆ. ದಿಲ್ಲಿ ಕೋರ್ಟ್​ಗೆ ಹೊಸ ಅರ್ಜಿ ಸಲ್ಲಿಸಿದ ಮತ್ತೊಬ್ಬ ಅತ್ಯಾಚಾರಿ: ಹೌದು, ಮರಣದಂಡನೆ ಶಿಕ್ಷೆ ಮರುಪರಿಶೀಲನೆ ಕೋರಿ ಅತ್ಯಾಚಾರಿ ಅಕ್ಷಯ್ ಕುಮಾರ್ ಸಿಂಗ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಅರ್ಜಿಯನ್ನ ವಜಾಗೊಳಿಸಿ […]

ನಿರ್ಭಯಾ ಪ್ರಕರಣ: ದಿಲ್ಲಿ ಕೋರ್ಟ್​ಗೆ ಹೊಸ ಅರ್ಜಿ ಸಲ್ಲಿಸಿದ ಮತ್ತೊಬ್ಬ ಅತ್ಯಾಚಾರಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 19, 2019 | 4:18 PM

Share

ದೆಹಲಿ: ಇಡೀ ದೇಶವನ್ನೇ ಬೆಚ್ಚಿಬೀಳಿಸಿದ.. ರಾಷ್ಟ್ರ ರಾಜಧಾನಿ ದಿಲ್ಲಿಯನ್ನೇ ನಡುಗಿಸಿದ್ದ ನಿರ್ಭಯಾ ಗ್ಯಾಂಗ್​ರೇಪ್ ನಡೆದು ಏಳು ವರ್ಷಗಳೇ ಉರುಳಿವೆ. ಆದ್ರೂ ಆಕೆಯ ಮೇಲೆ ಮೃಗಗಳಂತೆ ಎರಗಿ, ರಣಹದ್ದುಗಳಂತೆ ಕಿತ್ತು ತಿಂದ ನರ ರಾಕ್ಷಸರು ಇನ್ನೂ ಜೀವಂತವಾಗಿದ್ದಾರೆ. ಮರಣ ಶಾಸನದಿಂದ ತಪ್ಪಿಸಿಕೊಳ್ಳಲು ನಾನಾ ಪ್ರಯತ್ನ ಮಾಡುತ್ತಿದ್ದಾರೆ.

ದಿಲ್ಲಿ ಕೋರ್ಟ್​ಗೆ ಹೊಸ ಅರ್ಜಿ ಸಲ್ಲಿಸಿದ ಮತ್ತೊಬ್ಬ ಅತ್ಯಾಚಾರಿ: ಹೌದು, ಮರಣದಂಡನೆ ಶಿಕ್ಷೆ ಮರುಪರಿಶೀಲನೆ ಕೋರಿ ಅತ್ಯಾಚಾರಿ ಅಕ್ಷಯ್ ಕುಮಾರ್ ಸಿಂಗ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಅರ್ಜಿಯನ್ನ ವಜಾಗೊಳಿಸಿ ಮರಣದಂಡನೆ ಶಿಕ್ಷೆಯನ್ನ ಎತ್ತಿ ಹಿಡಿದಿದೆ. ಅಲ್ಲಿಗೆ ನಿರ್ಭಯಾ ಅತ್ಯಾಚಾರಿಗಳ ನೇಣು ಕುಣಿಕೆ ಮತ್ತಷ್ಟು ಬಿಗಿಯಾಯ್ತು ಅಂತ ಇಡೀ ದೇಶ ನೆಮ್ಮದಿಯ ನಿಟ್ಟುಸಿರು ಬಿಟ್ಟಿತ್ತು. ಆದ್ರೀಗ ಮತ್ತೊಬ್ಬ ಅತ್ಯಾಚಾರಿ ದಿಲ್ಲಿ ಹೈಕೋರ್ಟ್​ಗೆ ಹೊಸ ಅರ್ಜಿಯೊಂದನ್ನ ಸಲ್ಲಿಸಿ ಎಲ್ಲರಿಗೂ ಶಾಕ್ ನೀಡಿದ್ದಾನೆ.

ಅರ್ಜಿಯಲ್ಲಿ ಮಹತ್ವದ ವಿಚಾರವೊಂದನ್ನ ಉಲ್ಲೇಖಿಸಿರೋ ಪವನ್ ಕುಮಾರ್ ಗುಪ್ತಾ, ಗಲ್ಲು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಮಾಸ್ಟರ್ ಪ್ಲಾನ್ ರೂಪಿಸಿದ್ದಾನೆ. ಹಾಗಿದ್ರೆ ಪವನ್ ಗುಪ್ತ ಪ್ಲಾನ್ ಏನು..? ಆತ ಸಲ್ಲಿಸಿದ ಹೊಸ ಅರ್ಜಿಯಲ್ಲಿ ಏನಿದೆ ಎನ್ನುವುದಾದರೆ…

ಅತ್ಯಾಚಾರಿ ಪವನ್ ಅರ್ಜಿಯಲ್ಲಿ ಏನಿದೆ..? ಅತ್ಯಾಚಾರ ಕೃತ್ಯ ಎಸಗುವ ವೇಳೆ ನಾನು ಅಪ್ರಾಪ್ತನಾಗಿದ್ದೆ ಅಂತ ಅರ್ಜಿಯಲ್ಲಿ ಉಲ್ಲೇಖಿಸಿರೋ ಪವನ್ ಗುಪ್ತ, 2012ರಲ್ಲಿ ತನಿಖಾಧಿಕಾರಿಗಳು ನನ್ನ ಅಪ್ರಾಪ್ತತೆ ಪರೀಕ್ಷೆಯನ್ನೇ ನಡೆಸಿರಲಿಲ್ಲ ಅಂತ ಹೇಳಿದ್ದಾನೆ. ಹೀಗಾಗಿ ಯಾವುದೇ ಸಮಯದಲ್ಲಾದರೂ ಅರ್ಜಿಯನ್ನ ಸಲ್ಲಿಸಲು ಬಾಲಾಪರಾಧ ಕಾಯ್ದೆಯ ಅಡಿಯಲ್ಲಿ ಅವಕಾಶ ಇದೆ ಅಂತ ಉಲ್ಲೇಸಿದ್ದಾನೆ.

ಈ ಮೂಲಕ ಬಾಲಾಪರಾಧಿ ಎಂಬ ವಿನಾಯಿತಿ ಪಡೆದು ಮರಣದಂಡನೆಯಿಂದ ಪಾರಾಗಲು ಸಂಚು ಹೂಡಿದ್ದಾನೆ. ನ್ಯಾಯಮೂರ್ತಿ ಸುರೇಶ್‌ ಕುಮಾರ್‌ ಕೈಟ್ ಪೀಠದಲ್ಲಿ ಇಂದು ಅರ್ಜಿಯ ವಿಚಾರಣೆ ನಡೆಯಲಿದ್ದು ಭಾರಿ ಕುತೂಹಲ ಮೂಡಿಸಿದೆ.

Published On - 7:49 am, Thu, 19 December 19

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ