AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಭಯಾ ಪ್ರಕರಣ: ದಿಲ್ಲಿ ಕೋರ್ಟ್​ಗೆ ಹೊಸ ಅರ್ಜಿ ಸಲ್ಲಿಸಿದ ಮತ್ತೊಬ್ಬ ಅತ್ಯಾಚಾರಿ

ದೆಹಲಿ: ಇಡೀ ದೇಶವನ್ನೇ ಬೆಚ್ಚಿಬೀಳಿಸಿದ.. ರಾಷ್ಟ್ರ ರಾಜಧಾನಿ ದಿಲ್ಲಿಯನ್ನೇ ನಡುಗಿಸಿದ್ದ ನಿರ್ಭಯಾ ಗ್ಯಾಂಗ್​ರೇಪ್ ನಡೆದು ಏಳು ವರ್ಷಗಳೇ ಉರುಳಿವೆ. ಆದ್ರೂ ಆಕೆಯ ಮೇಲೆ ಮೃಗಗಳಂತೆ ಎರಗಿ, ರಣಹದ್ದುಗಳಂತೆ ಕಿತ್ತು ತಿಂದ ನರ ರಾಕ್ಷಸರು ಇನ್ನೂ ಜೀವಂತವಾಗಿದ್ದಾರೆ. ಮರಣ ಶಾಸನದಿಂದ ತಪ್ಪಿಸಿಕೊಳ್ಳಲು ನಾನಾ ಪ್ರಯತ್ನ ಮಾಡುತ್ತಿದ್ದಾರೆ. ದಿಲ್ಲಿ ಕೋರ್ಟ್​ಗೆ ಹೊಸ ಅರ್ಜಿ ಸಲ್ಲಿಸಿದ ಮತ್ತೊಬ್ಬ ಅತ್ಯಾಚಾರಿ: ಹೌದು, ಮರಣದಂಡನೆ ಶಿಕ್ಷೆ ಮರುಪರಿಶೀಲನೆ ಕೋರಿ ಅತ್ಯಾಚಾರಿ ಅಕ್ಷಯ್ ಕುಮಾರ್ ಸಿಂಗ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಅರ್ಜಿಯನ್ನ ವಜಾಗೊಳಿಸಿ […]

ನಿರ್ಭಯಾ ಪ್ರಕರಣ: ದಿಲ್ಲಿ ಕೋರ್ಟ್​ಗೆ ಹೊಸ ಅರ್ಜಿ ಸಲ್ಲಿಸಿದ ಮತ್ತೊಬ್ಬ ಅತ್ಯಾಚಾರಿ
ಸಾಧು ಶ್ರೀನಾಥ್​
|

Updated on:Dec 19, 2019 | 4:18 PM

Share

ದೆಹಲಿ: ಇಡೀ ದೇಶವನ್ನೇ ಬೆಚ್ಚಿಬೀಳಿಸಿದ.. ರಾಷ್ಟ್ರ ರಾಜಧಾನಿ ದಿಲ್ಲಿಯನ್ನೇ ನಡುಗಿಸಿದ್ದ ನಿರ್ಭಯಾ ಗ್ಯಾಂಗ್​ರೇಪ್ ನಡೆದು ಏಳು ವರ್ಷಗಳೇ ಉರುಳಿವೆ. ಆದ್ರೂ ಆಕೆಯ ಮೇಲೆ ಮೃಗಗಳಂತೆ ಎರಗಿ, ರಣಹದ್ದುಗಳಂತೆ ಕಿತ್ತು ತಿಂದ ನರ ರಾಕ್ಷಸರು ಇನ್ನೂ ಜೀವಂತವಾಗಿದ್ದಾರೆ. ಮರಣ ಶಾಸನದಿಂದ ತಪ್ಪಿಸಿಕೊಳ್ಳಲು ನಾನಾ ಪ್ರಯತ್ನ ಮಾಡುತ್ತಿದ್ದಾರೆ.

ದಿಲ್ಲಿ ಕೋರ್ಟ್​ಗೆ ಹೊಸ ಅರ್ಜಿ ಸಲ್ಲಿಸಿದ ಮತ್ತೊಬ್ಬ ಅತ್ಯಾಚಾರಿ: ಹೌದು, ಮರಣದಂಡನೆ ಶಿಕ್ಷೆ ಮರುಪರಿಶೀಲನೆ ಕೋರಿ ಅತ್ಯಾಚಾರಿ ಅಕ್ಷಯ್ ಕುಮಾರ್ ಸಿಂಗ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಅರ್ಜಿಯನ್ನ ವಜಾಗೊಳಿಸಿ ಮರಣದಂಡನೆ ಶಿಕ್ಷೆಯನ್ನ ಎತ್ತಿ ಹಿಡಿದಿದೆ. ಅಲ್ಲಿಗೆ ನಿರ್ಭಯಾ ಅತ್ಯಾಚಾರಿಗಳ ನೇಣು ಕುಣಿಕೆ ಮತ್ತಷ್ಟು ಬಿಗಿಯಾಯ್ತು ಅಂತ ಇಡೀ ದೇಶ ನೆಮ್ಮದಿಯ ನಿಟ್ಟುಸಿರು ಬಿಟ್ಟಿತ್ತು. ಆದ್ರೀಗ ಮತ್ತೊಬ್ಬ ಅತ್ಯಾಚಾರಿ ದಿಲ್ಲಿ ಹೈಕೋರ್ಟ್​ಗೆ ಹೊಸ ಅರ್ಜಿಯೊಂದನ್ನ ಸಲ್ಲಿಸಿ ಎಲ್ಲರಿಗೂ ಶಾಕ್ ನೀಡಿದ್ದಾನೆ.

ಅರ್ಜಿಯಲ್ಲಿ ಮಹತ್ವದ ವಿಚಾರವೊಂದನ್ನ ಉಲ್ಲೇಖಿಸಿರೋ ಪವನ್ ಕುಮಾರ್ ಗುಪ್ತಾ, ಗಲ್ಲು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಮಾಸ್ಟರ್ ಪ್ಲಾನ್ ರೂಪಿಸಿದ್ದಾನೆ. ಹಾಗಿದ್ರೆ ಪವನ್ ಗುಪ್ತ ಪ್ಲಾನ್ ಏನು..? ಆತ ಸಲ್ಲಿಸಿದ ಹೊಸ ಅರ್ಜಿಯಲ್ಲಿ ಏನಿದೆ ಎನ್ನುವುದಾದರೆ…

ಅತ್ಯಾಚಾರಿ ಪವನ್ ಅರ್ಜಿಯಲ್ಲಿ ಏನಿದೆ..? ಅತ್ಯಾಚಾರ ಕೃತ್ಯ ಎಸಗುವ ವೇಳೆ ನಾನು ಅಪ್ರಾಪ್ತನಾಗಿದ್ದೆ ಅಂತ ಅರ್ಜಿಯಲ್ಲಿ ಉಲ್ಲೇಖಿಸಿರೋ ಪವನ್ ಗುಪ್ತ, 2012ರಲ್ಲಿ ತನಿಖಾಧಿಕಾರಿಗಳು ನನ್ನ ಅಪ್ರಾಪ್ತತೆ ಪರೀಕ್ಷೆಯನ್ನೇ ನಡೆಸಿರಲಿಲ್ಲ ಅಂತ ಹೇಳಿದ್ದಾನೆ. ಹೀಗಾಗಿ ಯಾವುದೇ ಸಮಯದಲ್ಲಾದರೂ ಅರ್ಜಿಯನ್ನ ಸಲ್ಲಿಸಲು ಬಾಲಾಪರಾಧ ಕಾಯ್ದೆಯ ಅಡಿಯಲ್ಲಿ ಅವಕಾಶ ಇದೆ ಅಂತ ಉಲ್ಲೇಸಿದ್ದಾನೆ.

ಈ ಮೂಲಕ ಬಾಲಾಪರಾಧಿ ಎಂಬ ವಿನಾಯಿತಿ ಪಡೆದು ಮರಣದಂಡನೆಯಿಂದ ಪಾರಾಗಲು ಸಂಚು ಹೂಡಿದ್ದಾನೆ. ನ್ಯಾಯಮೂರ್ತಿ ಸುರೇಶ್‌ ಕುಮಾರ್‌ ಕೈಟ್ ಪೀಠದಲ್ಲಿ ಇಂದು ಅರ್ಜಿಯ ವಿಚಾರಣೆ ನಡೆಯಲಿದ್ದು ಭಾರಿ ಕುತೂಹಲ ಮೂಡಿಸಿದೆ.

Published On - 7:49 am, Thu, 19 December 19

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ