ನಿರ್ಭಯಾ ಅಪರಾಧಿಗಳಿಗೆ ಹೊಸದಾಗಿ ನೋಟಿಸ್ ನೀಡಲು ಕೋರ್ಟ್ ಸೂಚನೆ

ದೆಹಲಿ: ಅತ್ಯಾಚಾರ ಅಪರಾಧಿಗಳನ್ನು ಶೀಘ್ರ ಗಲ್ಲಿಗೇರಿಸುವಂತೆ ಕೋರಿ ನಿರ್ಭಯಾ ತಾಯಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜನವರಿ 7ಕ್ಕೆ ಪಾಟಿಯಾಲ ಹೌಸ್ ಕೋರ್ಟ್ ಮುಂದೂಡಿದೆ. ನಿಮ್ಮ ಮಗಳು ಮೃತಪಟ್ಟಿದ್ದಾಳೆ ಅನ್ನೋದು ನಮಗೆ ಗೊತ್ತು. ನಿಮ್ಮ ಬಗ್ಗೆ ನಮಗೆ ಅನುಕಂಪವಿದೆ. ಆದರೆ ಅಪರಾಧಿಗಳಿಗೆ ಅವರದೇ ಆದ ಹಕ್ಕುಗಳಿವೆ. ನಾವು ನಿಮ್ಮ ವಾದವನ್ನು ಕೇಳುತ್ತೇವೆ. ಆದರೆ ನಾವು ಕಾನೂನನ್ನು ಪಾಲನೆ ಮಾಡಲೇಬೇಕಾಗುತ್ತದೆ ಎಂದು ಪಟಿಯಾಲ ಹೌಸ್​ ಕೋರ್ಟ್ ಹೇಳಿದೆ. ಅಪರಾಧಿಗಳು ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸ್ತಾರಾ ಇಲ್ವೋ ಅಪರಾಧಿಗಳಿಗೆ ಹೊಸದಾಗಿ ನೋಟಿಸ್​ […]

ನಿರ್ಭಯಾ ಅಪರಾಧಿಗಳಿಗೆ ಹೊಸದಾಗಿ ನೋಟಿಸ್ ನೀಡಲು ಕೋರ್ಟ್ ಸೂಚನೆ
ಸಾಧು ಶ್ರೀನಾಥ್​

Updated on: Dec 18, 2019 | 3:41 PM

ದೆಹಲಿ: ಅತ್ಯಾಚಾರ ಅಪರಾಧಿಗಳನ್ನು ಶೀಘ್ರ ಗಲ್ಲಿಗೇರಿಸುವಂತೆ ಕೋರಿ ನಿರ್ಭಯಾ ತಾಯಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜನವರಿ 7ಕ್ಕೆ ಪಾಟಿಯಾಲ ಹೌಸ್ ಕೋರ್ಟ್ ಮುಂದೂಡಿದೆ.

ನಿಮ್ಮ ಮಗಳು ಮೃತಪಟ್ಟಿದ್ದಾಳೆ ಅನ್ನೋದು ನಮಗೆ ಗೊತ್ತು. ನಿಮ್ಮ ಬಗ್ಗೆ ನಮಗೆ ಅನುಕಂಪವಿದೆ. ಆದರೆ ಅಪರಾಧಿಗಳಿಗೆ ಅವರದೇ ಆದ ಹಕ್ಕುಗಳಿವೆ. ನಾವು ನಿಮ್ಮ ವಾದವನ್ನು ಕೇಳುತ್ತೇವೆ. ಆದರೆ ನಾವು ಕಾನೂನನ್ನು ಪಾಲನೆ ಮಾಡಲೇಬೇಕಾಗುತ್ತದೆ ಎಂದು ಪಟಿಯಾಲ ಹೌಸ್​ ಕೋರ್ಟ್ ಹೇಳಿದೆ. ಅಪರಾಧಿಗಳು ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸ್ತಾರಾ ಇಲ್ವೋ ಅಪರಾಧಿಗಳಿಗೆ ಹೊಸದಾಗಿ ನೋಟಿಸ್​ ನೀಡಲು ತಿಹಾರ್​ ಜೈಲಿನ ಅಧಿಕಾರಿಗಳಿಗೆ ಕೋರ್ಟ್ ಸೂಚನೆ ನೀಡಿದೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us