AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಭಯಾ ರೇಪ್ ಅಂಡ್ ಮರ್ಡರ್ ಪ್ರಕರಣ: ಕೊನೆಗೂ 4ಕ್ಕೂ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಗ್ಯಾರಂಟಿ ಆಯ್ತು

ದೆಹಲಿ: ನಿರ್ಭಯಾ ರೇಪ್ ಅಂಡ್ ಮರ್ಡರ್ ಪ್ರಕರಣದ ಪ್ರಮುಖ ಅಪರಾಧಿ ಅಕ್ಷಯ್ ಕುಮಾರ್​ಗೆ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಅಪರಾಧಿ ಅಕ್ಷಯ್ ಸೇರಿದಂತೆ ನಾಲ್ವರಿಗೆ ಗಲ್ಲು ಶಿಕ್ಷೆ​ ಫಿಕ್ಸ್​ ಆಗಿದೆ. ಗಲ್ಲು ಶಿಕ್ಷೆ ಖಾಯಂಗೊಳಿಸಿ ಸುಪ್ರೀಂಕೋರ್ಟ್​ನ ನ್ಯಾ.ಬೋಪಣ್ಣ ನೇತೃತ್ವದ ತ್ರಿಸದಸ್ಯ ಪೀಠ ಅಂತಿಮ ತೀರ್ಪು ನೀಡಿದೆ. ತೀರ್ಪು ಮರುಪರಿಶೀಲನೆ ಕೋರಿ ಅಪರಾಧಿ ಅಕ್ಷಯ್‌ ಕುಮಾರ್‌ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ನ ತ್ರಿಸದಸ್ಯ ಪೀಠ ವಜಾಗೊಳಿಸಿದೆ. ಅಕ್ಷಯ್‌ ಕುಮಾರ್ ವಾದಕ್ಕೆ ಮನ್ನಣೆ ಕೊಡಲು ಸಾಧ್ಯವಿಲ್ಲ. ತೀರ್ಪು ಮರುಪರಿಶೀಲನೆಗೆ ಯಾವುದೇ […]

ನಿರ್ಭಯಾ ರೇಪ್ ಅಂಡ್ ಮರ್ಡರ್ ಪ್ರಕರಣ: ಕೊನೆಗೂ 4ಕ್ಕೂ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಗ್ಯಾರಂಟಿ ಆಯ್ತು
ಸಾಧು ಶ್ರೀನಾಥ್​
|

Updated on:Dec 19, 2019 | 8:29 AM

Share

ದೆಹಲಿ: ನಿರ್ಭಯಾ ರೇಪ್ ಅಂಡ್ ಮರ್ಡರ್ ಪ್ರಕರಣದ ಪ್ರಮುಖ ಅಪರಾಧಿ ಅಕ್ಷಯ್ ಕುಮಾರ್​ಗೆ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಅಪರಾಧಿ ಅಕ್ಷಯ್ ಸೇರಿದಂತೆ ನಾಲ್ವರಿಗೆ ಗಲ್ಲು ಶಿಕ್ಷೆ​ ಫಿಕ್ಸ್​ ಆಗಿದೆ. ಗಲ್ಲು ಶಿಕ್ಷೆ ಖಾಯಂಗೊಳಿಸಿ ಸುಪ್ರೀಂಕೋರ್ಟ್​ನ ನ್ಯಾ.ಬೋಪಣ್ಣ ನೇತೃತ್ವದ ತ್ರಿಸದಸ್ಯ ಪೀಠ ಅಂತಿಮ ತೀರ್ಪು ನೀಡಿದೆ.

ತೀರ್ಪು ಮರುಪರಿಶೀಲನೆ ಕೋರಿ ಅಪರಾಧಿ ಅಕ್ಷಯ್‌ ಕುಮಾರ್‌ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ನ ತ್ರಿಸದಸ್ಯ ಪೀಠ ವಜಾಗೊಳಿಸಿದೆ. ಅಕ್ಷಯ್‌ ಕುಮಾರ್ ವಾದಕ್ಕೆ ಮನ್ನಣೆ ಕೊಡಲು ಸಾಧ್ಯವಿಲ್ಲ. ತೀರ್ಪು ಮರುಪರಿಶೀಲನೆಗೆ ಯಾವುದೇ ಕಾರಣಗಳಿಲ್ಲ. ಕೇಸ್‌ನ ತನಿಖೆ, ವಿಚಾರಣೆಯಲ್ಲಿ ಯಾವುದೇ ಲೋಪವಾಗಿಲ್ಲ. ಹೀಗಾಗಿ ಮತ್ತೊಮ್ಮೆ ಕೇಸ್‌ನ ವಿಚಾರಣೆ ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ R.ಭಾನುಮತಿ, ನ್ಯಾ.ಅಶೋಕ್ ಭೂಷಣ್ ಮತ್ತು ನ್ಯಾ.ಬೋಪಣ್ಣ ಅವರ ತ್ರಿಸದಸ್ಯ ಪೀಠ ಹೇಳಿದೆ.

ಅಪರಾಧಿ ಪರ ವಕೀಲರ ವಾದ: ಅಪರಾಧಿ ಅಕ್ಷಯ್ ಕುಮಾರ್ ಪರ ವಕೀಲ ಎ.ಪಿ.ಸಿಂಗ್ ವಾದ ಮಂಡಿಸಿದ್ದರು. ಕಾನೂನು, ಮನುಷ್ಯತ್ವ ಎಂಬ ಎರಡು ರೀತಿಯ ವಾದಗಳಿವೆ. ಕಾನೂನಿನ ಮೂಲಕ ಅಪರಾಧಿಯನ್ನು ಶಿಕ್ಷಿಸಬಹುದು. ನೈತಿಕ ದಾರಿ ಮೂಲಕ ಅಪರಾಧವನ್ನು ತಡೆಯಬಹದು. ಪ್ರಕರಣದಲ್ಲಿ ಅಕ್ಷಯ್ ಕುಮಾರ್ ಹೆಸರು ಸೇರಿಸಲಾಗಿದೆ. ಈ ಹಿಂದೆ ಮನುಷ್ಯರು 100 ವರ್ಷ ಬದುಕುತ್ತಿದ್ದರು. ಈಗ 50ರಿಂದ 60 ವರ್ಷ ಬದುಕುವುದೇ ಹೆಚ್ಚು. ಇಂತಹ ಪರಿಸ್ಥಿತಿ ಇದ್ದಾಗ ಗಲ್ಲು ಶಿಕ್ಷೆ ವಿಧಿಸಬಾರದು.

ಗಲ್ಲು ಶಿಕ್ಷೆಯೇ ಎಲ್ಲದಕ್ಕೂ ಪರಿಹಾರವಲ್ಲ. ಗಲ್ಲು ಶಿಕ್ಷೆಯಿಂದ ಏನು ಸಾಧಿಸಬಹುದು. ಅಕ್ಷಯ್ ಕುಮಾರ್ ಕುಟುಂಬಕ್ಕೆ‌ ಯಾರು ಜವಾಬ್ದಾರಿ. ಪೋರ್ನ್ ಸೈಟ್‌ಗಳನ್ನು ಬ್ಯಾನ್ ಮಾಡಬೇಕು. ರಾಜೀವ್ ಗಾಂಧಿ ಹಂತಕರಿಗೆ ವಿನಾಯಿತಿ ನೀಡಲಾಗಿದೆ. ಹಂತಕರಿಗೆ ಗಲ್ಲು ಶಿಕ್ಷೆಯಿಂದ ವಿನಾಯಿತಿ ನೀಡಲಾಗಿದೆ. ರಕ್ತಕ್ಕೆ ರಕ್ತ ಎನ್ನುವ ನೀತಿಯನ್ನು ಒಪ್ಪಬಾರದು ಎಂದು ಅಪರಾಧಿ ಪರ ವಕೀಲ ಎ.ಪಿ.ಸಿಂಗ್ ವಾದ ಮಂಡಿಸಿದ್ದರು.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ:  ಅಪರಾಧಿಯ ತೀರ್ಪು ಮರುಪರಿಶೀಲನೆ ಮಾಡುವುದಕ್ಕೆ ಏನೂ ಉಳಿದಿಲ್ಲ. ಡಿಎನ್‌ಎ, ಎಫ್‌ಎಸ್‌ಎಲ್ ವರದಿ ಪರಿಶೀಲಿಸಲಾಗಿದೆ. DNA ವರದಿಯಲ್ಲಿ ಅಪರಾಧದಲ್ಲಿ ಭಾಗಿಯಾಗಿದ್ದು ಗೊತ್ತಾಗಿದೆ. ಎಲ್ಲವನ್ನೂ ಪರಿಗಣಿಸಿ ಕೆಳನ್ಯಾಯಾಲಯ ಗಲ್ಲುಶಿಕ್ಷೆ ವಿಧಿಸಿದೆ. ಉಳಿದ ಮೂವರ ಮರುಪರಿಶೀಲನಾ ಅರ್ಜಿ ತಿರಸ್ಕೃತವಾಗಿದೆ. ಅಕ್ಷಯ್‌ ಕುಮಾರ್ ಅರ್ಜಿ ಕೂಡ ಅದೇ ಮಾದರಿಯಾಗಿದೆ. ಈಗ ಮರುಪರಿಶೀಲನೆ ಮಾಡುವ ಅಗತ್ಯವಿಲ್ಲ.

ಉಳಿದ ಅಪರಾಧಿಗಳ ಅರ್ಜಿಗಳನ್ನು ಕಟ್ ಪೇಸ್ಟ್ ಮಾಡಲಾಗಿದೆ. ಉಳಿದವರ ಅರ್ಜಿಗಳನ್ನು ತಿರಸ್ಕಾರ ಮಾಡಿದಂತೆಯೇ ಅಕ್ಷಯ್ ಕುಮಾರ್ ಅರ್ಜಿಯನ್ನೂ ತಿರಸ್ಕರಿಸಬೇಕು. ಈ ಪ್ರಕರಣ ಗಲ್ಲುಶಿಕ್ಷೆಗೆ ಸಮರ್ಥವಾಗಿದೆ. ಗಲ್ಲು ಶಿಕ್ಷೆಯನ್ನೇ ನೀಡಬೇಕೆಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದ್ದರು.

Published On - 1:43 pm, Wed, 18 December 19

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!