AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಭಯಾ ರೇಪ್ ಅಂಡ್ ಮರ್ಡರ್ ಪ್ರಕರಣ: ಅತ್ಯಾಚಾರಿಗಳು ಗಲ್ಲಿಗೇರುವ ಡೇಟ್ ಫಿಕ್ಸ್​

ದೆಹಲಿ: ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ನಿರ್ಭಯಾ ಗ್ಯಾಂಗ್ ರೇಪ್ ಮತ್ತು ಹತ್ಯೆ ಪ್ರಕರಣದ ಅಪರಾಧಿಗಳಿಗೆ ಡೆತ್ ವಾರಂಟ್ ಜಾರಿ ಮಾಡಲಾಗಿದೆ. ಅಪರಾಧಿಗಳಾದ ಅಕ್ಷಯ್, ಮುಖೇಶ್, ವಿನಯ್, ಪವನ್‌ಗೆೆ ಗಲ್ಲು  ವಿಧಿಸಿಲು ದಿನಾಂಕ ನಿಗದಿ ಮಾಡಿ ಕೋರ್ಟ್​ ತೀರ್ಪು ನೀಡಿದೆ. ಜ.22ರ ಬೆಳಗ್ಗೆ 7 ಗಂಟೆಗೆ ನಾಲ್ವರು ಅಪರಾಧಿಗಳಿಗೆ ಗಲ್ಲು ವಿಧಿಸಲು ದೆಹಲಿಯ ಪಟಿಯಾಲ ಹೌಸ್​ ಕೋರ್ಟ್‌ ಆದೇಶಿಸಿದೆ. ಕ್ಯುರೇಟಿವ್ ಅರ್ಜಿ ಹಾಕಿದ್ರೂ ತಿರಸ್ಕೃತವಾಗುವ ಸಾಧ್ಯತೆ: ಅಪರಾಧಿಗಳಿಗೆ ಕೋರ್ಟ್​ನಿಂದ ಡೆತ್ ವಾರಂಟ್ ಜಾರಿ ಹಿನ್ನೆಲೆಯಲ್ಲಿ ಅಪರಾಧಿಗಳು ಕ್ಯುರೇಟಿವ್ ಅರ್ಜಿ […]

ನಿರ್ಭಯಾ ರೇಪ್ ಅಂಡ್ ಮರ್ಡರ್ ಪ್ರಕರಣ: ಅತ್ಯಾಚಾರಿಗಳು ಗಲ್ಲಿಗೇರುವ ಡೇಟ್ ಫಿಕ್ಸ್​
ಸಾಧು ಶ್ರೀನಾಥ್​
|

Updated on:Jan 08, 2020 | 11:22 AM

Share

ದೆಹಲಿ: ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ನಿರ್ಭಯಾ ಗ್ಯಾಂಗ್ ರೇಪ್ ಮತ್ತು ಹತ್ಯೆ ಪ್ರಕರಣದ ಅಪರಾಧಿಗಳಿಗೆ ಡೆತ್ ವಾರಂಟ್ ಜಾರಿ ಮಾಡಲಾಗಿದೆ. ಅಪರಾಧಿಗಳಾದ ಅಕ್ಷಯ್, ಮುಖೇಶ್, ವಿನಯ್, ಪವನ್‌ಗೆೆ ಗಲ್ಲು  ವಿಧಿಸಿಲು ದಿನಾಂಕ ನಿಗದಿ ಮಾಡಿ ಕೋರ್ಟ್​ ತೀರ್ಪು ನೀಡಿದೆ. ಜ.22ರ ಬೆಳಗ್ಗೆ 7 ಗಂಟೆಗೆ ನಾಲ್ವರು ಅಪರಾಧಿಗಳಿಗೆ ಗಲ್ಲು ವಿಧಿಸಲು ದೆಹಲಿಯ ಪಟಿಯಾಲ ಹೌಸ್​ ಕೋರ್ಟ್‌ ಆದೇಶಿಸಿದೆ.

ಕ್ಯುರೇಟಿವ್ ಅರ್ಜಿ ಹಾಕಿದ್ರೂ ತಿರಸ್ಕೃತವಾಗುವ ಸಾಧ್ಯತೆ: ಅಪರಾಧಿಗಳಿಗೆ ಕೋರ್ಟ್​ನಿಂದ ಡೆತ್ ವಾರಂಟ್ ಜಾರಿ ಹಿನ್ನೆಲೆಯಲ್ಲಿ ಅಪರಾಧಿಗಳು ಕ್ಯುರೇಟಿವ್ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ. ತೀರ್ಪಿನಲ್ಲಿ ಲೋಪಗಳಿದ್ದಾಗ ಅದನ್ನು ಸರಿಪಡಿಸುವಂತೆ ಮಾತ್ರ ಅಪರಾಧಿಗಳು ಕ್ಯುರೇಟಿವ್ ಅರ್ಜಿ ಸಲ್ಲಿಸಬಹುದು. ಆದ್ರೆ, ಕೋರ್ಟ್​ರೂಂನಲ್ಲಿ ಕ್ಯುರೇಟಿವ್ ಅರ್ಜಿ ವಿಚಾರಣೆ ನಡೆಯುವುದಿಲ್ಲ. ನ್ಯಾಯಮೂರ್ತಿಗಳ ಚೇಂಬರ್​ನಲ್ಲಿ ಅರ್ಜಿ ಇತ್ಯರ್ಥವಾಗುತ್ತದೆ. ಈ ಪ್ರಕರಣದಲ್ಲಿ ಅಪರಾಧಿಗಳಿಗೆ ಕ್ಯುರೇಟಿವ್ ಅರ್ಜಿಯಿಂದ ಯಾವುದೇ ಅನುಕೂಲವಾಗುವ ಸಾಧ್ಯತೆ ಇಲ್ಲ. ಅಪರಾಧಿಗಳು ಅರ್ಜಿ ಹಾಕಿದರೂ ಶೀಘ್ರ ತಿರಸ್ಕೃತವಾಗುವ ಸಾಧ್ಯತೆಯಿದೆ.

2012ರ ಡಿಸೆಂಬರ್ 16ರಂದು ಸ್ನೇಹಿತನ ಜೊತೆ ಸಿನಿಮಾ ನೋಡಿ ಸಂತ್ರಸ್ತೆ ಮನೆಗೆ ಹಿಂತಿರುಗುತ್ತಿದ್ದರು. ರಾತ್ರಿ 9.30ರ ವೇಳೆ ಸಂತ್ರಸ್ತೆ ಮತ್ತು ಸ್ನೇಹಿತ ಬಸ್ ಹತ್ತಿದರು. ಆಗ ಚಲಿಸುತ್ತಿದ್ದ ಬಸ್​ನಲ್ಲೇ ಸ್ನೇಹಿತನಿಗೆ ಹೊಡೆದು ಸಂತ್ರಸ್ತೆ ಮೇಲೆ ಅತ್ಯಾಚಾರ ಎಸಗಿ, ಚಿತ್ರಹಿಂಸೆ ನೀಡಿದ್ದರು. ಬಳಿಕ ಬಸ್​ನಿಂದ ಇಬ್ಬರನ್ನೂ ನಡುರಸ್ತೆಗೆ ತಳ್ಳಿ ಅತ್ಯಾಚಾರಿಗಳು ಪರಾರಿಯಾಗಿದ್ದರು. ಡಿಸೆಂಬರ್ 27ರಂದು ಸಂತ್ರಸ್ತೆಯನ್ನು ಸಿಂಗಾಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಗೆ ಏರ್ ಆ್ಯಂಬುಲೆನ್ಸ್ ಮೂಲಕ ಸ್ಥಳಾಂತರಿಸಲಾಯಿತು. ಆದ್ರೆ ಡಿ. 29ರಂದು ಚಿಕಿತ್ಸೆ ಫಲಿಸದೆ ಮಧ್ಯರಾತ್ರಿ 2.10ಕ್ಕೆ ಸಂತ್ರಸ್ತೆ ಮೃತಪಟ್ಟರು.

Published On - 5:10 pm, Tue, 7 January 20

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ