AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ಖರೀದಿಗೆ ಹೆಚ್ಚಿನ ಹಣ ನೀಡಲು ನಿರ್ಮಲಾ ಸೀತಾರಾಮನ್ ಒಪ್ಪಿಗೆ

ಇದರಿಂದ ನಿತ್ಯ 1 ಕೋಟಿ ಡೋಸ್ ಲಸಿಕೆ ನೀಡುವ ಗುರಿ ತಲುಪಲು ಸಾಧ್ಯ ಆಗಲಿದೆ. 24 ಗಂಟೆ ಲಸಿಕೆ ನೀಡಿದರೆ 84 ಲಕ್ಷ ಜನರಿಗೆ ನೀಡಬಹುದು ಎಂದು ಮುಖ್ಯ ಆರ್ಥಿಕ ಸಲಹೆಗಾರ ಕೆ.ವಿ.ಸುಬ್ರಹ್ಮಣ್ಯನ್ ಹೇಳಿದ್ದಾರೆ.

ಕೊರೊನಾ ಲಸಿಕೆ ಖರೀದಿಗೆ ಹೆಚ್ಚಿನ ಹಣ ನೀಡಲು ನಿರ್ಮಲಾ ಸೀತಾರಾಮನ್ ಒಪ್ಪಿಗೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 17, 2021 | 11:01 PM

Share

ದೆಹಲಿ: ಕೊರೊನಾ ಲಸಿಕೆಗೆ ಬಜೆಟ್​ನಲ್ಲಿ 35 ಸಾವಿರ ಕೋಟಿ ರೂಪಾಯಿ ಹಂಚಿಕೆ ಮಾಡಲಾಗುತ್ತದೆ. ಇದರ ಜೊತೆಗೆ ಇನ್ನೂ 15 ಸಾವಿರ ಕೋಟಿ ರೂಪಾಯಿ ಬೇಕಾಗುತ್ತದೆ. ಲಸಿಕೆ ಖರೀದಿಗೆ ಹೆಚ್ಚಿನ ಹಣ ನೀಡಲು ಸಿದ್ಧ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ ಎಂಬ ಬಗ್ಗೆ ಕೇಂದ್ರದ ಮುಖ್ಯ ಆರ್ಥಿಕ ಸಲಹೆಗಾರ ಕೆ.ವಿ.ಸುಬ್ರಹ್ಮಣ್ಯನ್ ತಿಳಿಸಿದ್ದಾರೆ.

ಇದರಿಂದ ನಿತ್ಯ 1 ಕೋಟಿ ಡೋಸ್ ಲಸಿಕೆ ನೀಡುವ ಗುರಿ ತಲುಪಲು ಸಾಧ್ಯ ಆಗಲಿದೆ. 24 ಗಂಟೆ ಲಸಿಕೆ ನೀಡಿದರೆ 84 ಲಕ್ಷ ಜನರಿಗೆ ನೀಡಬಹುದು ಎಂದು ಮುಖ್ಯ ಆರ್ಥಿಕ ಸಲಹೆಗಾರ ಕೆ.ವಿ.ಸುಬ್ರಹ್ಮಣ್ಯನ್ ಹೇಳಿದ್ದಾರೆ.

ಮಕ್ಕಳ ಮೇಲೆ ಲಸಿಕೆ ಪ್ರಯೋಗ ಮುಂದಿನ ತಿಂಗಳು ಮಕ್ಕಳ ಮೇಲೆ ಲಸಿಕೆಯ ಪ್ರಯೋಗ ಮಾಡಲಾಗುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ನೋವಾವ್ಯಾಕ್ಸ್, ಕೊವ್ಯಾಕ್ಸಿನ್, ಜೈಕೋವ್​​ ಲಸಿಕೆ ಟ್ರಯಲ್ ಮಾಡಲಾಗುವುದು ಎಂದು ತಿಳಿಸಲಾಗಿದೆ. ಈಗಾಗಲೇ ಅಮೆರಿಕದಲ್ಲಿ ನೋವಾವ್ಯಾಕ್ಸ್​​ ಪರಿಣಾಮಕಾರಿ ಎಂದು ವರದಿ ಲಭ್ಯವಾಗಿದೆ. ನೋವಾವ್ಯಾಕ್ಸ್ ಶೇಕಡಾ 91ರಷ್ಟು ಪರಿಣಾಮಕಾರಿಯಾಗಿರುವ ಬಗ್ಗೆ ತಿಳಿದುಬಂದಿದೆ.

ಭಾರತದಲ್ಲಿ ಈಗ ಮಕ್ಕಳ ಮೇಲೆ ಲಸಿಕೆ ಪ್ರಯೋಗಕ್ಕೆ ನಿರ್ಧಾರ ಮಾಡಲಾಗಿದೆ. 3ನೇ ಅಲೆಯಲ್ಲಿ ಮಕ್ಕಳ ಮೇಲೆ ಕೊರೊನಾ ದಾಳಿ ಸಾಧ್ಯತೆ ಇದೆ ಎಂಬ ಅಭಿಪ್ರಾಯ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಮಕ್ಕಳ ಮೇಲೆ ಲಸಿಕೆಯ ಪ್ರಯೋಗ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ದೇಶದಲ್ಲಿ 10 ರಿಂದ 18 ವರ್ಷದ 20 ಕೋಟಿ ಮಕ್ಕಳಿದ್ದಾರೆ.  ಮಕ್ಕಳನ್ನು ರಕ್ಷಿಸುವುದಕ್ಕೆ ಲಸಿಕೆ ನೀಡಿಕೆಯೊಂದೇ ಅಸ್ತ್ರ ಎಂದು ಹೇಳಲಾಗಿದೆ.

ಕರ್ನಾಟಕದ ನೆರೆಯಲ್ಲಿರುವ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿನ 3ನೇ ಅಲೆ ಶೀಘ್ರದಲ್ಲಿಯೇ ಬಾಧಿಸಬಹುದು ಎಂದು ಮಹಾರಾಷ್ಟ್ರ ಸರ್ಕಾರದ ತಜ್ಞರ ಕಾರ್ಯಪಡೆ ಎಚ್ಚರಿಕೆ ನೀಡಿದೆ. ಇನ್ನು ಕೇವಲ 2ರಿಂದ 4 ವಾರಗಳ ಒಳಗೆ ಮಹಾರಾಷ್ಟ್ರಕ್ಕೆ ಕೊವಿಡ್ 3ನೇ ಅಲೆ ವ್ಯಾಪಿಸುವ ಆತಂಕವಿದ್ದು, ಸಕ್ರಿಯ ಸೋಂಕು ಪ್ರಕರಣಗಳು 8 ಲಕ್ಷ ಮುಟ್ಟಬಹುದು ಎಂದು ಕಾರ್ಯಪಡೆಯ ಸದಸ್ಯರು ವಿಶ್ಲೇಷಿಸಿದ್ದಾರೆ. ಈವರೆಗೆ ಸೋಂಕು ಬಾಧಿಸದ ಕೆಳ ಮಧ್ಯಮವರ್ಗದ ಜನರಲ್ಲಿ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳಬಹುದು. ಈ ಹಿಂದೆ ಆಂದಾಜಿಸಿದ್ದಂತೆ ಮಕ್ಕಳಲ್ಲಿ ಸೋಂಕು ಹೆಚ್ಚಾಗಿ ಬಾಧಿಸಬಹುದು ಎಂದು ಕಾರ್ಯಪಡೆ ಸದಸ್ಯರು ಅಭಿಪ್ರಾಯಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಲಸಿಕೆ ನೀಡಿಕೆ ಪ್ರಕ್ರಿಯೆ ವೇಗ ಪಡೆದುಕೊಳ್ಳುವುದು ಅನಿವಾರ್ಯವಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರಕ್ಕೆ ಕೊವಿಡ್ 3ನೇ ಅಲೆಯ ಕಾರ್ಮೋಡ; 8 ಲಕ್ಷ ಮಂದಿಗೆ ಸೋಂಕು ತಗುಲುವ ಆತಂಕ

Covid 19 Karnataka Update: ಕರ್ನಾಟಕದಲ್ಲಿ 5983 ಮಂದಿಗೆ ಕೊರೊನಾ ಸೋಂಕು, 138 ಸಾವು

Published On - 10:45 pm, Thu, 17 June 21

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ