AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಥಿಲಗೊಂಡ ಗೃಹ ನಿರ್ಮಾಣ ಕ್ಷೇತ್ರಕ್ಕೆ 25 ಸಾವಿರ ಕೋಟಿ ವಿಶೇಷ ಪ್ಯಾಕೇಜ್

ದೆಹಲಿ: ಮನೆ ಖರೀದಿಸುವ ಕನಸು ಕಾಣುವ ಮಧ್ಯಮ, ಕೆಳ ಮಧ್ಯಮ ವರ್ಗದವರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಿಹಿಸುದ್ದಿ ನೀಡಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮ ಚೇತರಿಕೆ ಕಾಣಬಹುದಾದ ವಿಶೇಷ ಪ್ಯಾಕೇಜ್ ಇದಾಗಿದೆ. ಸ್ಥಗಿತಗೊಂಡಿರುವ ಗೃಹ ನಿರ್ಮಾಣ ಯೋಜನೆಗಳಿಗೆ ನೆರವು ನೀಡಲು ಮತ್ತು ಆರ್ಥಿಕತೆಗೆ ಚೇತರಿಕೆ ನೀಡಲು ಕೇಂದ್ರ ಸರ್ಕಾರ ಪ್ಲಾನ್ ಮಾಡಿದೆ. 25 ಸಾವಿರ ಕೋಟಿ ರೂಪಾಯಿ ಮೊತ್ತದ ಪರಿಹಾರ ನಿಧಿ ಸ್ಥಾಪಿಸಲು ಮುಂದಾಗಿದೆ. ಹಣಕಾಸು ಅಲಭ್ಯತೆ, ಮತ್ತಿತರ ನಿರ್ಮಾಣ ಚಟುವಟಿಕೆಗಳಿಂದ ಸ್ಥಗಿತಗೊಂಡಿರುವ 1600 ಗೃಹ […]

ಶಿಥಿಲಗೊಂಡ ಗೃಹ ನಿರ್ಮಾಣ ಕ್ಷೇತ್ರಕ್ಕೆ 25 ಸಾವಿರ ಕೋಟಿ ವಿಶೇಷ ಪ್ಯಾಕೇಜ್
ಸಾಧು ಶ್ರೀನಾಥ್​
|

Updated on:Nov 07, 2019 | 12:05 PM

Share

ದೆಹಲಿ: ಮನೆ ಖರೀದಿಸುವ ಕನಸು ಕಾಣುವ ಮಧ್ಯಮ, ಕೆಳ ಮಧ್ಯಮ ವರ್ಗದವರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಿಹಿಸುದ್ದಿ ನೀಡಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮ ಚೇತರಿಕೆ ಕಾಣಬಹುದಾದ ವಿಶೇಷ ಪ್ಯಾಕೇಜ್ ಇದಾಗಿದೆ.

ಸ್ಥಗಿತಗೊಂಡಿರುವ ಗೃಹ ನಿರ್ಮಾಣ ಯೋಜನೆಗಳಿಗೆ ನೆರವು ನೀಡಲು ಮತ್ತು ಆರ್ಥಿಕತೆಗೆ ಚೇತರಿಕೆ ನೀಡಲು ಕೇಂದ್ರ ಸರ್ಕಾರ ಪ್ಲಾನ್ ಮಾಡಿದೆ. 25 ಸಾವಿರ ಕೋಟಿ ರೂಪಾಯಿ ಮೊತ್ತದ ಪರಿಹಾರ ನಿಧಿ ಸ್ಥಾಪಿಸಲು ಮುಂದಾಗಿದೆ. ಹಣಕಾಸು ಅಲಭ್ಯತೆ, ಮತ್ತಿತರ ನಿರ್ಮಾಣ ಚಟುವಟಿಕೆಗಳಿಂದ ಸ್ಥಗಿತಗೊಂಡಿರುವ 1600 ಗೃಹ ನಿರ್ಮಾಣ ಯೋಜನೆಗಳನ್ನು ಪೂರ್ಣಗೊಳಿಸಲು ಹಣಕಾಸು ನೆರವು ನೀಡುವುದಾಗಿ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಅಸೆಟ್ ಆಲ್ಟರ್ನೇಟಿವ್ ಫಂಡ್ ಅಥವಾ ಆಸ್ತಿ ಪರ್ಯಾಯ ನಿಧಿ (ಎಐಎಫ್) ಸ್ಥಾಪಿಸಿ ಕೇಂದ್ರ ಸರ್ಕಾರ ಈ ನಿಧಿಗೆ 10 ಸಾವಿರ ಕೋಟಿ ರೂ ಹಾಕುತ್ತದೆ. ಎಸ್​ಬಿಐ, ಎಲ್​ಐಸಿ ಮೊದಲಾದ ಸರ್ಕಾರಿ ಸಂಸ್ಥೆಗಳೂ ಕೂಡ ಇಲ್ಲಿ ಹೂಡಿಕೆ ಮಾಡುತ್ತವೆ. ಒಟ್ಟಾರೆಯಾಗಿ ಈ ನಿಧಿಯಲ್ಲಿ 25 ಸಾವಿರ ಕೋಟಿ ಇರಲಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಈ ಯೋಜನೆಯೂ ಮಧ್ಯಮ ವರ್ಗದ ಹಣ ಹೂಡಿಕೆದಾರರು ಎದುರಿಸುತ್ತಿರುವ ಆರ್ಥಿಕ ಸಮಸ್ಯೆ ಯನ್ನು ನಿವಾರಿಸಲು ಸಹಾಯಕವಾಗಲಿದೆ . ಹಾಗೂ ಸಿಮೆಂಟ್, ಕಬ್ಬಿಣ ಮತ್ತು ಉಕ್ಕಿನ ಕೈಗಾರಿಕೆಗಳ ಬೇಡಿಕೆಯನ್ನು ಹೆಚ್ಚಿಸಲಿದೆ. ಉದ್ಯೂಗ ಸೃಷ್ಟಿಯಾಗಲಿದೆ.

Published On - 9:00 am, Thu, 7 November 19

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ