ಶಿಥಿಲಗೊಂಡ ಗೃಹ ನಿರ್ಮಾಣ ಕ್ಷೇತ್ರಕ್ಕೆ 25 ಸಾವಿರ ಕೋಟಿ ವಿಶೇಷ ಪ್ಯಾಕೇಜ್

ದೆಹಲಿ: ಮನೆ ಖರೀದಿಸುವ ಕನಸು ಕಾಣುವ ಮಧ್ಯಮ, ಕೆಳ ಮಧ್ಯಮ ವರ್ಗದವರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಿಹಿಸುದ್ದಿ ನೀಡಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮ ಚೇತರಿಕೆ ಕಾಣಬಹುದಾದ ವಿಶೇಷ ಪ್ಯಾಕೇಜ್ ಇದಾಗಿದೆ. ಸ್ಥಗಿತಗೊಂಡಿರುವ ಗೃಹ ನಿರ್ಮಾಣ ಯೋಜನೆಗಳಿಗೆ ನೆರವು ನೀಡಲು ಮತ್ತು ಆರ್ಥಿಕತೆಗೆ ಚೇತರಿಕೆ ನೀಡಲು ಕೇಂದ್ರ ಸರ್ಕಾರ ಪ್ಲಾನ್ ಮಾಡಿದೆ. 25 ಸಾವಿರ ಕೋಟಿ ರೂಪಾಯಿ ಮೊತ್ತದ ಪರಿಹಾರ ನಿಧಿ ಸ್ಥಾಪಿಸಲು ಮುಂದಾಗಿದೆ. ಹಣಕಾಸು ಅಲಭ್ಯತೆ, ಮತ್ತಿತರ ನಿರ್ಮಾಣ ಚಟುವಟಿಕೆಗಳಿಂದ ಸ್ಥಗಿತಗೊಂಡಿರುವ 1600 ಗೃಹ […]

ಶಿಥಿಲಗೊಂಡ ಗೃಹ ನಿರ್ಮಾಣ ಕ್ಷೇತ್ರಕ್ಕೆ 25 ಸಾವಿರ ಕೋಟಿ ವಿಶೇಷ ಪ್ಯಾಕೇಜ್
ಸಾಧು ಶ್ರೀನಾಥ್​

Updated on: Nov 07, 2019 | 12:05 PM

ದೆಹಲಿ: ಮನೆ ಖರೀದಿಸುವ ಕನಸು ಕಾಣುವ ಮಧ್ಯಮ, ಕೆಳ ಮಧ್ಯಮ ವರ್ಗದವರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಿಹಿಸುದ್ದಿ ನೀಡಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮ ಚೇತರಿಕೆ ಕಾಣಬಹುದಾದ ವಿಶೇಷ ಪ್ಯಾಕೇಜ್ ಇದಾಗಿದೆ.

ಸ್ಥಗಿತಗೊಂಡಿರುವ ಗೃಹ ನಿರ್ಮಾಣ ಯೋಜನೆಗಳಿಗೆ ನೆರವು ನೀಡಲು ಮತ್ತು ಆರ್ಥಿಕತೆಗೆ ಚೇತರಿಕೆ ನೀಡಲು ಕೇಂದ್ರ ಸರ್ಕಾರ ಪ್ಲಾನ್ ಮಾಡಿದೆ. 25 ಸಾವಿರ ಕೋಟಿ ರೂಪಾಯಿ ಮೊತ್ತದ ಪರಿಹಾರ ನಿಧಿ ಸ್ಥಾಪಿಸಲು ಮುಂದಾಗಿದೆ. ಹಣಕಾಸು ಅಲಭ್ಯತೆ, ಮತ್ತಿತರ ನಿರ್ಮಾಣ ಚಟುವಟಿಕೆಗಳಿಂದ ಸ್ಥಗಿತಗೊಂಡಿರುವ 1600 ಗೃಹ ನಿರ್ಮಾಣ ಯೋಜನೆಗಳನ್ನು ಪೂರ್ಣಗೊಳಿಸಲು ಹಣಕಾಸು ನೆರವು ನೀಡುವುದಾಗಿ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಅಸೆಟ್ ಆಲ್ಟರ್ನೇಟಿವ್ ಫಂಡ್ ಅಥವಾ ಆಸ್ತಿ ಪರ್ಯಾಯ ನಿಧಿ (ಎಐಎಫ್) ಸ್ಥಾಪಿಸಿ ಕೇಂದ್ರ ಸರ್ಕಾರ ಈ ನಿಧಿಗೆ 10 ಸಾವಿರ ಕೋಟಿ ರೂ ಹಾಕುತ್ತದೆ. ಎಸ್​ಬಿಐ, ಎಲ್​ಐಸಿ ಮೊದಲಾದ ಸರ್ಕಾರಿ ಸಂಸ್ಥೆಗಳೂ ಕೂಡ ಇಲ್ಲಿ ಹೂಡಿಕೆ ಮಾಡುತ್ತವೆ. ಒಟ್ಟಾರೆಯಾಗಿ ಈ ನಿಧಿಯಲ್ಲಿ 25 ಸಾವಿರ ಕೋಟಿ ಇರಲಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಈ ಯೋಜನೆಯೂ ಮಧ್ಯಮ ವರ್ಗದ ಹಣ ಹೂಡಿಕೆದಾರರು ಎದುರಿಸುತ್ತಿರುವ ಆರ್ಥಿಕ ಸಮಸ್ಯೆ ಯನ್ನು ನಿವಾರಿಸಲು ಸಹಾಯಕವಾಗಲಿದೆ . ಹಾಗೂ ಸಿಮೆಂಟ್, ಕಬ್ಬಿಣ ಮತ್ತು ಉಕ್ಕಿನ ಕೈಗಾರಿಕೆಗಳ ಬೇಡಿಕೆಯನ್ನು ಹೆಚ್ಚಿಸಲಿದೆ. ಉದ್ಯೂಗ ಸೃಷ್ಟಿಯಾಗಲಿದೆ.

 

Published On - 9:00 am, Thu, 7 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us