Budget 2026: ಬಜೆಟ್ನಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಆದ್ಯತೆ; ಆಂಧ್ರ, ಜಮ್ಮು ಕಾಶ್ಮೀರದಲ್ಲಿ ಟ್ರೆಕಿಂಗ್ ತಾಣಗಳ ಅಭಿವೃದ್ಧಿ
ಇಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ನಲ್ಲಿ ಪರಿಸರ ಪ್ರವಾಸೋದ್ಯಮವನ್ನು ಇನ್ನಷ್ಟು ಅಭಿವೃದ್ಧಿಪಡಿಸಲು ಹಲವು ಕ್ರಮ ತೆಗೆದುಕೊಳ್ಳುವುದಾಗಿ ಘೋಷಿಸಲಾಗಿದೆ. ಈ ನಿಟ್ಟಿನಲ್ಲಿ ಆಂಧ್ರಪ್ರದೇಶ, ಜಮ್ಮು ಕಾಶ್ಮೀರ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಟ್ರೆಕಿಂಗ್ ಅಥವಾ ಪರ್ವತಾರೋಹಣದ ಸ್ಥಳಗಳನ್ನು ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. ಆಂಧ್ರಪ್ರದೇಶದ ಅರಕು ಕಣಿವೆ, ಜಮ್ಮು ಕಾಶ್ಮೀರದಲ್ಲಿ ಪರ್ವತದ ಹಾದಿಗಳನ್ನು ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.

ನವದೆಹಲಿ, ಫೆಬ್ರವರಿ 1: 2026ರ ಬಜೆಟ್ನಲ್ಲಿ (Budget 2026) ಕೇಂದ್ರವು ಪ್ರವಾಸೋದ್ಯಮ ವಲಯಕ್ಕೆ ವಿಶೇಷ ಒತ್ತು ನೀಡಿದ್ದು, ದೇಶಾದ್ಯಂತ 20 ಪ್ರಮುಖ ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಕೇಂದ್ರಗಳಾಗಿ ಗುರುತಿಸಿದೆ. ಅವುಗಳಲ್ಲಿ, ಆಂಧ್ರಪ್ರದೇಶದ ಅರಕು ಕಣಿವೆ (Araku Valley) ವಿಶೇಷ ಗಮನ ಸೆಳೆದಿದೆ. ಈ ಸುಂದರವಾದ ಬೆಟ್ಟ ಪ್ರದೇಶವನ್ನು ಚಾರಣ, ಪರಿಸರ ಪ್ರವಾಸೋದ್ಯಮ ಮತ್ತು ಕೌಶಲ್ಯ ಅಭಿವೃದ್ಧಿ ಚಟುವಟಿಕೆಗಳಿಗೆ ಕೇಂದ್ರವಾಗಿ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ರ ಕೇಂದ್ರ ಬಜೆಟ್ನ ಭಾಗವಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸರ ಪ್ರವಾಸೋದ್ಯಮದ ಅಭಿವೃದ್ಧಿಯನ್ನು ಘೋಷಿಸಿದ್ದಾರೆ. ಇಂದು ಸಂಸತ್ತಿನಲ್ಲಿ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್, ಟ್ರೆಕಿಂಗ್ ಹೋಗುವವರಿಗೆ ಹೆಚ್ಚಿನ ಸೌಲಭ್ಯ ಕಲ್ಪಿಸಲು, ಟ್ರೆಕಿಂಗ್ ತಾಣಗಳನ್ನು ಅಭಿವೃದ್ಧಿಪಡಿಸಲು ನಿರ್ಧಾರ ಮಾಡಿರುವುದಾಗಿ ತಿಳಿಸಿದರು.
Union Budget 2026–27 strengthens tourism as a key driver of growth and employment.
With initiatives like the National Destination Digital Knowledge Grid, development of iconic heritage sites, expansion of medical tourism hubs, skill training for 10,000 tourist guides, and… pic.twitter.com/cjHgaKStgY
— Bansuri Swaraj (@BansuriSwaraj) February 1, 2026
ದುರ್ಬಲ ಪರಿಸರ ವ್ಯವಸ್ಥೆಗಳನ್ನು ಸಂರಕ್ಷಿಸುವ ಮೂಲಕ ಪರಿಸರ ಸ್ನೇಹಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಪೂರ್ವ ಘಟ್ಟಗಳು ಮತ್ತು ಪಶ್ಚಿಮ ಘಟ್ಟಗಳಲ್ಲಿನ ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಆಂಧ್ರದ ಅರಕು ಕಣಿವೆಯಲ್ಲಿ ಹಲವು ಉಪಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಒಡಿಶಾ, ಕರ್ನಾಟಕ ಮತ್ತು ಕೇರಳದಲ್ಲಿಯೂ ಇಕೋ ಟೂರಿಸಂ ಅನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಘೋಷಿಸಿದರು.
ಇದನ್ನೂ ಓದಿ: ಬಜೆಟ್ ಬಳಿಕ ಯಾವೆಲ್ಲ ವಸ್ತುಗಳ ದರ ಇಳಿಕೆ? ವಿವರ ಇಲ್ಲಿದೆ
ಪಾರಂಪರಿಕ ಪ್ರವಾಸೋದ್ಯಮವನ್ನು ಉತ್ತೇಜಿಸುವ ವಿಶಾಲವಾದ ಪ್ರಯತ್ನದ ಭಾಗವಾಗಿ ಸಾರನಾಥ ಮತ್ತು ಹಸ್ತಿನಾಪುರ ಸೇರಿದಂತೆ 15 ಪುರಾತತ್ವ ತಾಣಗಳನ್ನು ರೋಮಾಂಚಕ ಸಾಂಸ್ಕೃತಿಕ ತಾಣಗಳಾಗಿ ಅಭಿವೃದ್ಧಿಪಡಿಸಲು, ಸಂರಕ್ಷಣೆ ಮತ್ತು ಪ್ರವಾಸೋದ್ಯಮದ ಬೆಳವಣಿಗೆಯನ್ನು ಹೆಚ್ಚಿಸಲು ದೇಶಾದ್ಯಂತ ಆಧ್ಯಾತ್ಮಿಕ ಮತ್ತು ಪರಂಪರೆಯ ಪ್ರಾಮುಖ್ಯತೆಯ ಎಲ್ಲಾ ಸ್ಥಳಗಳನ್ನು ದಾಖಲಿಸಲಾಗುವುದು.
ಗುಡ್ಡಗಾಡು ರಾಜ್ಯಗಳಲ್ಲಿ ಸಂಪರ್ಕವನ್ನು ಸುಧಾರಿಸುವ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಇತರ ಪ್ರದೇಶಗಳಲ್ಲಿ ಪರ್ವತ ರೈಲು ಸೇವೆಗಳನ್ನು ಪರಿಚಯಿಸುವ ಯೋಜನೆಗಳನ್ನು ಬಜೆಟ್ ವಿವರಿಸಿದೆ.
ಇದನ್ನೂ ಓದಿ: ಬಜೆಟ್ 2026: ರೈತರಿಗೆ ಸ್ಮಾರ್ಟ್ ಕೃಷಿ ಸಲಹೆ ನೀಡುತ್ತೆ ಭಾರತ್ ವಿಸ್ತಾರ್ ಎಐ ಟೂಲ್! ಏನಿದರ ವಿಶೇಷ?
ಕಡಿಮೆ ಬೆಲೆಗೆ ಅಂತಾರಾಷ್ಟ್ರೀಯ ಪ್ರಯಾಣ, ಹೊಸ ಪ್ರವಾಸೋದ್ಯಮ ಕೇಂದ್ರಗಳು ಮತ್ತು ವಿಶ್ವ ದರ್ಜೆಯ ಅನುಭವಗಳೊಂದಿಗೆ ಪ್ರವಾಸೋದ್ಯಮವನ್ನು ಉತ್ತೇಜಿಸಲು ಈ ವರ್ಷದ ಬಜೆಟ್ನಲ್ಲಿ ಪ್ರಸ್ತಾಪಿಸಲಾಗಿದೆ. ಪ್ರವಾಸೋದ್ಯಮ ವಲಯವು ಉದ್ಯೋಗ ಸೃಷ್ಟಿ ಮತ್ತು ವಿದೇಶೀ ವಿನಿಮಯ ಗಳಿಕೆಯಲ್ಲಿ ದೊಡ್ಡ ಪಾತ್ರವನ್ನು ವಹಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಭಾರತದಾದ್ಯಂತ ಪ್ರವಾಸೋದ್ಯಮ ಕೇಂದ್ರಗಳಲ್ಲಿ ಮಾರ್ಗದರ್ಶಿಗಳಿಗೆ ತರಬೇತಿ ನೀಡಲು ಪೈಲಟ್ ಯೋಜನೆಯನ್ನು ಸಹ ಸಚಿವೆ ನಿರ್ಮಲಾ ಸೀತಾರಾಮನ್ ಪ್ರಸ್ತಾಪಿಸಿದ್ದಾರೆ. “ವಿಶ್ವ ದರ್ಜೆಯ ಚಾರಣದ ಅನುಭವಗಳನ್ನು ನೀಡುವ ಸಾಮರ್ಥ್ಯ ಮತ್ತು ಅವಕಾಶವನ್ನು ಭಾರತ ಹೊಂದಿದೆ. ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸರೀಯವಾಗಿ ಸುಸ್ಥಿರ ಪರ್ವತದ ಹಾದಿಗಳನ್ನು ನಾವು ಅಭಿವೃದ್ಧಿಪಡಿಸುತ್ತೇವೆ. ಪೂರ್ವ ಘಟ್ಟಗಳ ಅರಕು ಕಣಿವೆ ಮತ್ತು ಪಶ್ಚಿಮ ಘಟ್ಟಗಳ ಪೋತಿಗೈ ಮಲೈನಲ್ಲಿಯೂ ಸಹ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲಾಗುವುದು” ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ.
ಹಾಗೇ, ದೇಶದ 15 ಪುರಾತತ್ವ ತಾಣಗಳನ್ನು ಸಾಂಸ್ಕೃತಿಕ ತಾಣಗಳಾಗಿ ಅಭಿವೃದ್ಧಿಪಡಿಸಲಾಗುವುದು. ಉತ್ಖನನ ಮಾಡಿದ ಭೂದೃಶ್ಯಗಳನ್ನು ಸಾರ್ವಜನಿಕರಿಗೆ ಕ್ಯುರೇಟೆಡ್ ವಾಕ್ವೇಗಳ ಮೂಲಕ ಮುಕ್ತಗೊಳಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:08 pm, Sun, 1 February 26




