AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GST: ಸದ್ಯ ಪೆಟ್ರೋಲ್ ಡೀಸೆಲ್ ಜಿಎಸ್​ಟಿ ವ್ಯಾಪ್ತಿಗೆ ತರುವುದಿಲ್ಲ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

Nirmala Sitharaman: ಈಕುರಿತು ಕೇರಳ ಹೈಕೋರ್ಟ್​ಗೆ ಮಾಹಿತಿ ನೀಡಬೇಕಾಗಿದೆ. ಕೇರಳ ಹೈಕೋರ್ಟ್ ನಿರ್ದೇಶನದ ಬಳಿಕ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಅವರು ತಿಳಿಸಿದ್ದಾರೆ.

GST: ಸದ್ಯ ಪೆಟ್ರೋಲ್ ಡೀಸೆಲ್ ಜಿಎಸ್​ಟಿ ವ್ಯಾಪ್ತಿಗೆ ತರುವುದಿಲ್ಲ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್
TV9 Web
| Edited By: |

Updated on:Sep 17, 2021 | 9:46 PM

Share

ದೆಹಲಿ: ಸದ್ಯ ಪೆಟ್ರೋಲ್ ಮತ್ತು ಡೀಸೆಲ್​ಗಳನ್ನು ಜಿಎಸ್​ಟಿ ವ್ಯಾಪ್ತಿಗೆ ತರುವುದಿಲ್ಲ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟಪಡಿಸಿದ್ದಾರೆ. ಪೆಟ್ರೋಲ್, ಡೀಸೆಲ್ ಜಿಎಸ್​ಟಿ ವ್ಯಾಪ್ತಿಗೆ ತರುವ ವಿಚಾರ ಸದ್ಯ ಕೇರಳ ಹೈಕೋರ್ಟ್​ನಲ್ಲಿ ವಿಚಾರಣಾ ಹಂತದಲ್ಲಿದೆ. ಈಕುರಿತು ಕೇರಳ ಹೈಕೋರ್ಟ್​ಗೆ ಮಾಹಿತಿ ನೀಡಬೇಕಾಗಿದೆ. ಕೇರಳ ಹೈಕೋರ್ಟ್ ನಿರ್ದೇಶನದ ಬಳಿಕ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಕೊವಿಡ್ ಸಂಬಂಧಿತ ಔಷಧಗಳಿಗೆ ಡಿಸೆಂಬರ್ 31ರವರೆಗೆ ವಿನಾಯಿತಿ ಮುಂದುವರಿಸಲಾಗಿದೆ. ಆಂಫೋಟೆರಿಸಿನ್, ಟೋಸಿಲಿಜುಮಾಬ್ ಮೇಲೆ ಜಿಎಸ್ಟಿ ಇಲ್ಲ. ರೆಮ್ಡಿಸಿವಿರ್, ಹೆಪರಿನ್ ಮೇಲೆ ಶೇ. 5ರಷ್ಟು ಜಿಎಸ್‌ಟಿ, ಇಟೋಲಿಜುಮಾಬ್, ಪೋಸಕೋಜೋಲ್, ಪವಿಪಿರವಿರ್, ಕಾಸಿರಿವಿಮಬ್, ಇಂಡಿವಿಮಬ್, ಡಿಯೋಕ್ಸಿ ಡಿ ಗ್ಲೂಕೋಸ್, ಮೇಲಿನ ಜಿಎಸ್‌ಟಿ ಶೇಕಡಾ 12 ರಿಂದ ಶೇಕಡಾ 5ಕ್ಕೆ ಇಳಿಸಲಾಗಿದೆ. ಕ್ಯಾನ್ಸರ್ ಔಷಧ ಮತ್ತು ಬಯೋ ಡೀಸೆಲ್ ಮೇಲಿನ ಜಿಎಸ್ಟಿಯನ್ನು ಶೇ 12ರಿಂದ ಶೇ 5ಕ್ಕೆ ಇಳಿಸಲಾಗಿದೆ. ಆಮದಾಗುವ ವೈಮಾನಿಕ ಸಾಮಗ್ರಿಗೆ IGSTಯಿಂದ ವಿನಾಯಿತಿ ನೀಡಲಾಗಿದ್ದು, ಪೆನ್ಗಳ ಮೇಲೆ ಶೇಕಡಾ 18ರಷ್ಟು ಜಿಎಸ್ಟಿ ವಿಧಿಸಲಾಗಿದೆ.

ತೆಂಗಿನ ಎಣ್ಣೆ ಮೇಲೆ ಜಿಎಸ್​ಟಿ ವಿಧಿಸುವ ವಿಚಾರವಾಗಿ ಹೆಚ್ಚಿನ ಅಧ್ಯಯನಕ್ಕೆ ಪ್ರಸ್ತಾವನೆಯನ್ನು ಜಿಎಸ್​ಟಿ ಮಂಡಳಿ ತಡೆ ಹಿಡಿಯಿತು. ಒಂದು ಲೀಟರ್​ಗಿಂತ  ಕಡಿಮೆ ತೆಂಗಿನ ಎಣ್ಣೆಗೆ ಕೂದಲಿಗೆ ಹಚ್ಚುವ ಎಣ್ಣೆ ಎಂದು ವರ್ಗಿಕರಿಸಿ ಶೇಕಡಾ 18 ಜಿಎಸ್​ಟಿ, ಒಂದು ಲೀಟರ್​ಗಿಂತ ಹೆಚ್ಚಿನ ತೆಂಗಿನ ಎಣ್ಣೆಗೆ ಶೇಕಡಾ 5 ಜಿಎಸ್​ಟಿ ವಿಧಿಸಲು ಮಂಡಳಿ ನಿರ್ಧರಿಸಿತು. ಹಣ್ಣಿನ ಜ್ಯೂಸ್‌ಗಳ ಮೇಲೆ ಶೇ.12ರಷ್ಟು ಪರಿಹಾರದೊಂದಿಗೆ ಜಿಎಸ್‌ಟಿ ಶೇಕಡಾ 28ಕ್ಕೆ ಏರಿಸಲು ನಿರ್ಣಯಿಸಲಾಯಿತು.

ಇದನ್ನೂ ಓದಿ:

 ಪೆಟ್ರೋಲ್ ಡೀಸೆಲ್​ಗಳನ್ನು ಜಿಎಸ್​ಟಿ ಅಡಿ ತರಬಾರದು: ಸಿದ್ದರಾಮಯ್ಯ ಆಗ್ರಹ

Bihar Panchayat Polls: ಪೆಟ್ರೋಲ್ ದರ ಏರಿಕೆ ಪ್ರತಿಭಟಿಸಿ ನಾಮಪತ್ರ ಸಲ್ಲಿಸಲು ಎಮ್ಮೆಯೇರಿ ಬಂದ ಅಭ್ಯರ್ಥಿ

(Nirmala Sitharaman says did not bring petrol and diesel under GST because of Kerala High Court hearing)

Published On - 9:13 pm, Fri, 17 September 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ