Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 ಬಜೆಟ್​ ಸಿದ್ಧತೆಯಲ್ಲಿದ್ದಾರೆ ಮೇಡಂ ನಿರ್ಮಲಾ; ನಾಳೆ ಮೊದಲ ಹಂತದ ಪೂರ್ವಭಾವಿ ಸಮಾಲೋಚನೆ

ಬಜೆಟ್​ಗೂ ಮೊದಲು ಪೂರ್ವಭಾವಿಯಾಗಿ ವಿವಿಧ ರೈತ ಸಂಘಟನೆಗಳು, ಅರ್ಥಶಾಸ್ತ್ರಜ್ಞರು, ನಾಗರಿಕ ವರ್ಗ ಮತ್ತು ಕೈಗಾರಿಕಾ ಸಂಸ್ಥೆಗಳು ಸೇರಿ, ವಿವಿಧ ಪಾಲುದಾರರೊಂದಿಗೆ ಸಮಾಲೋಚನೆ ನಡೆಸುವುದು ಒಂದು ಸಾಮಾನ್ಯ ಪದ್ಧತಿ.

Budget 2021 ಬಜೆಟ್​ ಸಿದ್ಧತೆಯಲ್ಲಿದ್ದಾರೆ ಮೇಡಂ ನಿರ್ಮಲಾ; ನಾಳೆ ಮೊದಲ ಹಂತದ ಪೂರ್ವಭಾವಿ ಸಮಾಲೋಚನೆ
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​
Follow us
Lakshmi Hegde
| Updated By: guruganesh bhat

Updated on:Jan 30, 2021 | 1:05 PM

ದೆಹಲಿ: 2021-22ರ ಆರ್ಥಿಕ ವರ್ಷದ ಬಜೆಟ್​ ಮಂಡನೆಗೆ ಕೇಂದ್ರ ಸರ್ಕಾರ ಸಿದ್ಧತೆ ಮಾಡುತ್ತಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ನಾಳೆ (ಡಿ.14) ಉನ್ನತ ಕೈಗಾರಿಕೋದ್ಯಮಿಗಳ ಜತೆ ಮೊದಲ ಹಂತದ ಬಜೆಟ್ ಪೂರ್ವಭಾವಿ ಸಮಾಲೋಚನೆ ನಡೆಸಲಿದ್ದಾರೆ.

ಸಚಿವೆ ನಿರ್ಮಲಾ ಸೀತಾರಾಮನ್​ 2021ರ ಫೆಬ್ರವರಿ 1ರಂದು ಬಜೆಟ್ ಮಂಡನೆ ಮಾಡಲಿದ್ದು, ಇದು ಅವರ ಎರಡನೇ ಆಯವ್ಯಯ ಮಂಡನೆ. ಹಣಕಾಸು ಸಚಿವರು ಬಜೆಟ್​ಗೂ ಮೊದಲು ಪೂರ್ವಭಾವಿಯಾಗಿ ವಿವಿಧ ರೈತ ಸಂಘಟನೆಗಳು, ಅರ್ಥಶಾಸ್ತ್ರಜ್ಞರು, ನಾಗರಿಕ ವರ್ಗ ಮತ್ತು ಕೈಗಾರಿಕಾ ಸಂಸ್ಥೆಗಳು ಸೇರಿ, ವಿವಿಧ ಪಾಲುದಾರರೊಂದಿಗೆ ಸಮಾಲೋಚನೆ ನಡೆಸುವುದು ಒಂದು ಸಾಮಾನ್ಯ ಪದ್ಧತಿಯಾಗಿದ್ದು, ನಾಳೆ ನಿರ್ಮಲಾ ಸೀತಾರಾಮನ್​ ದೆಹಲಿಯಲ್ಲಿ ವರ್ಚ್ಯುವಲ್ ಆಗಿ ಚರ್ಚೆ ನಡೆಸಲಿದ್ದಾರೆ ಎಂದು ವಿತ್ತೀಯ ಇಲಾಖೆ ತಿಳಿಸಿದೆ.

ಪೂರ್ವಭಾವಿ ಸಮಾಲೋಚನೆಗಳ ನಂತರ ಹಣಕಾಸು ಸಚಿವರು ಕೊನೆಯದಾಗಿ ತೆರಿಗೆ ಪ್ರಸ್ತಾಪಗಳ ಬಗ್ಗೆ ಮಾಹಿತಿ ಸಂಗ್ರಹಣೆ ಮಾಡಲಿದ್ದಾರೆ. ಆದರೆ ಬಜೆಟ್​ ಅಂತಿಮಗೊಳ್ಳುವುದಕ್ಕೂ ಮೊದಲು ಈ ಪ್ರಸ್ತಾಪಗಳನ್ನು ಪ್ರಧಾನಿ ಜತೆ ಚರ್ಚಿಸಲಾಗುತ್ತದೆ.

ಫೋರ್ಬ್ಸ್ ಶಕ್ತಿಶಾಲಿ ಮಹಿಳಾ ಪಟ್ಟಿಯಲ್ಲಿ 41ನೇ ಸ್ಥಾನ ಪಡೆದ ನಿರ್ಮಲಾ ಸೀತಾರಾಮನ್!

Published On - 6:46 pm, Sun, 13 December 20

ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ