AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲಿಬಾಗ್ ಕಡಲತೀರಕ್ಕೆ ಅಪ್ಪಳಿಸಲಿದೆ ನಿಸರ್ಗ ಸೈಕ್ಲೋನ್!

ದೆಹಲಿ: ನಿಸರ್ಗ ಸೈಕ್ಲೋನ್ ಇಂದು ಮಧ್ಯಾಹ 2ರಿಂದ 3ಗಂಟೆ ವೇಳೆಗೆ ಅಲಿಬಾಗ್ ಕಡಲತೀರ ಹಾದು ಹೋಗಲಿದೆ. ಮುಂಬೈ, ಥಾಣೆ, ರಾಯಘಡ ಜಿಲ್ಲೆಗಳಲ್ಲಿ ಗಂಟೆಗೆ 100-120 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ನಿರ್ದೇಶಕ ಮೃತ್ಯುಂಜಯ ಮಹಾಪಾತ್ರ ತಿಳಿಸಿದ್ದಾರೆ. https://www.tv9marathi.com/maharashtra/cyclone-nisarga-live-updates-226838.html ಕರಾವಳಿ ಭಾಗದಲ್ಲಿಯೂ ನಿಸರ್ಗ ಚಂಡಮಾರುತದ ಎಫೆಕ್ಟ್ ಶುರುವಾಗಿದೆ. ಅರಬ್ಬಿಸಮುದ್ರದಿಂದ ದಡಕ್ಕೆ ಭಾರಿ ಅಲೆಗಳು ಅಪ್ಪಳಿಸುತ್ತಿವೆ. ಮುಂದಿನ 24 ಗಂಟೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣಕನ್ನಡ ಜಿಲ್ಲಾಡಳಿತ ಆರೆಂಜ್ ಅಲರ್ಟ್ […]

ಅಲಿಬಾಗ್ ಕಡಲತೀರಕ್ಕೆ ಅಪ್ಪಳಿಸಲಿದೆ ನಿಸರ್ಗ ಸೈಕ್ಲೋನ್!
ಆಯೇಷಾ ಬಾನು
|

Updated on:Jun 03, 2020 | 3:13 PM

Share

ದೆಹಲಿ: ನಿಸರ್ಗ ಸೈಕ್ಲೋನ್ ಇಂದು ಮಧ್ಯಾಹ 2ರಿಂದ 3ಗಂಟೆ ವೇಳೆಗೆ ಅಲಿಬಾಗ್ ಕಡಲತೀರ ಹಾದು ಹೋಗಲಿದೆ. ಮುಂಬೈ, ಥಾಣೆ, ರಾಯಘಡ ಜಿಲ್ಲೆಗಳಲ್ಲಿ ಗಂಟೆಗೆ 100-120 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ನಿರ್ದೇಶಕ ಮೃತ್ಯುಂಜಯ ಮಹಾಪಾತ್ರ ತಿಳಿಸಿದ್ದಾರೆ.

https://www.tv9marathi.com/maharashtra/cyclone-nisarga-live-updates-226838.html

ಕರಾವಳಿ ಭಾಗದಲ್ಲಿಯೂ ನಿಸರ್ಗ ಚಂಡಮಾರುತದ ಎಫೆಕ್ಟ್ ಶುರುವಾಗಿದೆ. ಅರಬ್ಬಿಸಮುದ್ರದಿಂದ ದಡಕ್ಕೆ ಭಾರಿ ಅಲೆಗಳು ಅಪ್ಪಳಿಸುತ್ತಿವೆ.

ಮುಂದಿನ 24 ಗಂಟೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣಕನ್ನಡ ಜಿಲ್ಲಾಡಳಿತ ಆರೆಂಜ್ ಅಲರ್ಟ್ ಘೋಷಿಸಿದೆ. ಕಾರವಾರ, ಅಂಕೋಲಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಹಳಿಯಾಳದಲ್ಲಿ ಮೋಡ ಮುಸುಕಿದ ವಾತಾವರಣ ಕಂಡು ಬಂದಿದೆ. ಅರಬ್ಬಿಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ.

ಮಲ್ಪೆ ಬಂದರಿನಲ್ಲಿ ಲಂಗರು ಹಾಕಿರುವ ಬೋಟ್​ಗಳು: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿ ಜಿಲ್ಲೆಯಲ್ಲಿ ನಿನ್ನೆ ರಾತ್ರಿಯಿಂದಲೇ ಸಾಧಾರಣ ಮಳೆ ಶುರುವಾಗಿದ್ದು, ನಿರಂತರವಾಗಿ ಬಿಟ್ಟು ಬಿಡದೆ ಮಳೆರಾಯ ಆರ್ಭಟ ಮುಂದುವರೆಸಿದ್ದಾನೆ.ಗಂಟೆಗೆ ಸುಮಾರು 50 ರಿಂದ 60 ಕಿ.ಮೀ ವೇಗದಲ್ಲಿ ಗಾಳಿ ಬೀಸಿದೆ.ರಾಜ್ಯ ಹವಾಮಾನ ಇಲಾಖೆ ಗಾಳಿ ಮಳೆಯ ಮುನ್ಸೂಚನೆ ನೀಡಿದ್ದು, ಕಡಲತೀರದ ಜನರಲ್ಲಿ‌‌ ಆತಂಕ ಮನೆ ಮಾಡಿದೆ. ಜಿಲ್ಲಾಡಳಿತ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಿದೆ. ಹೀಗಾಗಿ ಮಲ್ಪೆ ಬಂದರಿನಲ್ಲಿ ಸಾವಿರಾರು ಬೋಟ್​ಗಳು ಲಂಗರು ಹಾಕಿವೆ.

ಗುಜರಾತ್​ಗೂ ಅಪ್ಪಳಿಸಲಿದೆ ಮಹಾ ಚಂಡಮಾರುತ: ಗುಜರಾತ್​ನಲ್ಲಿ 35 ಸಾವಿರ ಜನರು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ವಿಮಾನ ಸಂಚಾರ ಸ್ಥಗಿತವಾಗಿದೆ. ಕಡಲ ತೀರ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು, ಜನತೆಗೆ ಮನೆಯೊಳಗೆ ಇರುವಂತೆ ಸೂಚನೆ ನೀಡಲಾಗಿದೆ.ಗುಜರಾತ್​ನಲ್ಲಿ NDRF ತಂಡಗಳ ನಿಯೋಜನೆ ಮಾಡಲಾಗಿದೆ.

Published On - 11:35 am, Wed, 3 June 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ