AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UP Elections 2022: ಮುಂದಿನ ವರ್ಷ ಉತ್ತರ ಪ್ರದೇಶ ಚುನಾವಣೆ; ಬಿಜೆಪಿ ಜತೆ ಮೈತ್ರಿ ದೃಢಪಡಿಸಿದ ನಿಷಾದ್ ಪಾರ್ಟಿ

Nishad Party: ಮೈತ್ರಿ ಸಂಬಂಧ ಹಾಗೂ ಸೀಟು ಹಂಚಿಕೆ ಬಗ್ಗೆ ಸಂಜಯ್​ ನಿಷಾದ್​ ಅವರು, ಗೃಹ ಸಚಿವ ಅಮಿತ್​ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಜತೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

UP Elections 2022: ಮುಂದಿನ ವರ್ಷ ಉತ್ತರ ಪ್ರದೇಶ ಚುನಾವಣೆ; ಬಿಜೆಪಿ ಜತೆ ಮೈತ್ರಿ ದೃಢಪಡಿಸಿದ ನಿಷಾದ್ ಪಾರ್ಟಿ
ಸಂಜಯ್​ ನಿಷಾದ್​
TV9 Web
| Edited By: |

Updated on: Sep 07, 2021 | 6:13 PM

Share

ಲಖನೌ: ಉತ್ತರ ಪ್ರದೇಶದಲ್ಲಿ ಬರುವ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಭಾರತೀಯ ಜನತಾ ಪಾರ್ಟಿಯೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುವುದಾಗಿ ನಿಷಾದ್​ ಪಕ್ಷ(Nishad Party) ಇಂದು ದೃಢಪಡಿಸಿದೆ. ನಿಷಾದ್ ಪಕ್ಷ ಒಟ್ಟು 70 ಕ್ಷೇತ್ರಗಳಿಂದ ಸ್ಪರ್ಧೆಗೆ ಇಳಿಯವ ಯೋಜನೆ ರೂಪಿಸಿಕೊಂಡಿದೆ. ಹಾಗಂತ ಇದಿನ್ನೂ ಅಂತಿಮಗೊಂಡಿಲ್ಲ. ಬಿಜೆಪಿ ಮತ್ತು ನಿಷಾದ್ ಪಾರ್ಟಿ ಮಧ್ಯೆ ಈ ವಿಚಾರವಾಗಿ ಇನ್ನೂ ಮಾತುಕತೆ ನಡೆಯುತ್ತಿದೆ ಎನ್ನಲಾಗಿದೆ. 

ಮಾಧ್ಯಮಗಳೊಂದಿಗೆ ಮಾತನಾಡಿದ ನಿಷಾದ್​ ಪಾರ್ಟಿ ಮುಖ್ಯಸ್ಥ ಸಂಜಯ್​ ನಿಷಾದ್​, ನಮ್ಮ ಪಕ್ಷ 2022ರ ಉತ್ತರಪ್ರದೇಶ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುತ್ತದೆ. ನಾವು ಖಂಡಿತ ಗೆಲ್ಲುತ್ತೇವೆ ಮತ್ತು ಬಿಜೆಪಿಯೊಟ್ಟಿಗೆ ಸರ್ಕಾರ ರಚನೆ ಮಾಡುತ್ತೇವೆ ಎಂದು ಆತ್ಮವಿಶ್ವಾಸದಲ್ಲಿ ಹೇಳಿದ್ದಾರೆ. ಮೈತ್ರಿ ಸಂಬಂಧ ಹಾಗೂ ಸೀಟು ಹಂಚಿಕೆ ಬಗ್ಗೆ ಸಂಜಯ್​ ನಿಷಾದ್​ ಅವರು, ಗೃಹ ಸಚಿವ ಅಮಿತ್​ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಬಿ.ಎಲ್​.ಸಂತೋಷ್​ ಜೊತೆ ಇಂದು ದೆಹಲಿಯಲ್ಲಿ ಮಾತುಕತೆ ನಡೆಸಿದ್ದಾರೆ ಎಂದೂ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಕಳೆದ ವಾರ ಮಾತನಾಡಿದ್ದ ಸಂಜಯ್ ನಿಷಾದ್​, ಉತ್ತರಪ್ರದೇಶದಲ್ಲಿ 160ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ನಿಷಾದ್​ ಸಮುದಾಯದ ಪ್ರಾಬಲ್ಯವಿದೆ. ಈ ನಿಟ್ಟಿನಲ್ಲಿ 70 ಕ್ಷೇತ್ರಗಳಲ್ಲಾದರೂ ನಾವು ಸ್ಪರ್ಧಿಸಬೇಕು ಎಂಬ ನಿರ್ಣಯ ಮಾಡಿದ್ದೇವೆ ಎಂದಿದ್ದರು. ಅಷ್ಟೇ ಅಲ್ಲ, ಬರುವ ವರ್ಷ ಚುನಾವಣೆಯಲ್ಲಿ ನಮ್ಮ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಪಕ್ಷಕ್ಕೆ ಮಾತ್ರ ಗೆಲುವು ಸಿಗಲಿದೆ ಎಂದೂ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಪತಿಯ ಅಗಲುವಿಕೆಯಿಂದ ಚೇತರಿಸಿಕೊಂಡು ಮತ್ತೆ ಜಿಮ್ ಕಡೆ ಮುಖಮಾಡಿದ ಖ್ಯಾತ ನಟಿ; ಸ್ವಾಗತಿಸಿದ ಅಭಿಮಾನಿಗಳು

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ