AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

UP Elections 2022: ಮುಂದಿನ ವರ್ಷ ಉತ್ತರ ಪ್ರದೇಶ ಚುನಾವಣೆ; ಬಿಜೆಪಿ ಜತೆ ಮೈತ್ರಿ ದೃಢಪಡಿಸಿದ ನಿಷಾದ್ ಪಾರ್ಟಿ

Nishad Party: ಮೈತ್ರಿ ಸಂಬಂಧ ಹಾಗೂ ಸೀಟು ಹಂಚಿಕೆ ಬಗ್ಗೆ ಸಂಜಯ್​ ನಿಷಾದ್​ ಅವರು, ಗೃಹ ಸಚಿವ ಅಮಿತ್​ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಜತೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

UP Elections 2022: ಮುಂದಿನ ವರ್ಷ ಉತ್ತರ ಪ್ರದೇಶ ಚುನಾವಣೆ; ಬಿಜೆಪಿ ಜತೆ ಮೈತ್ರಿ ದೃಢಪಡಿಸಿದ ನಿಷಾದ್ ಪಾರ್ಟಿ
ಸಂಜಯ್​ ನಿಷಾದ್​
TV9 Web
| Edited By: |

Updated on: Sep 07, 2021 | 6:13 PM

Share

ಲಖನೌ: ಉತ್ತರ ಪ್ರದೇಶದಲ್ಲಿ ಬರುವ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಭಾರತೀಯ ಜನತಾ ಪಾರ್ಟಿಯೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುವುದಾಗಿ ನಿಷಾದ್​ ಪಕ್ಷ(Nishad Party) ಇಂದು ದೃಢಪಡಿಸಿದೆ. ನಿಷಾದ್ ಪಕ್ಷ ಒಟ್ಟು 70 ಕ್ಷೇತ್ರಗಳಿಂದ ಸ್ಪರ್ಧೆಗೆ ಇಳಿಯವ ಯೋಜನೆ ರೂಪಿಸಿಕೊಂಡಿದೆ. ಹಾಗಂತ ಇದಿನ್ನೂ ಅಂತಿಮಗೊಂಡಿಲ್ಲ. ಬಿಜೆಪಿ ಮತ್ತು ನಿಷಾದ್ ಪಾರ್ಟಿ ಮಧ್ಯೆ ಈ ವಿಚಾರವಾಗಿ ಇನ್ನೂ ಮಾತುಕತೆ ನಡೆಯುತ್ತಿದೆ ಎನ್ನಲಾಗಿದೆ. 

ಮಾಧ್ಯಮಗಳೊಂದಿಗೆ ಮಾತನಾಡಿದ ನಿಷಾದ್​ ಪಾರ್ಟಿ ಮುಖ್ಯಸ್ಥ ಸಂಜಯ್​ ನಿಷಾದ್​, ನಮ್ಮ ಪಕ್ಷ 2022ರ ಉತ್ತರಪ್ರದೇಶ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುತ್ತದೆ. ನಾವು ಖಂಡಿತ ಗೆಲ್ಲುತ್ತೇವೆ ಮತ್ತು ಬಿಜೆಪಿಯೊಟ್ಟಿಗೆ ಸರ್ಕಾರ ರಚನೆ ಮಾಡುತ್ತೇವೆ ಎಂದು ಆತ್ಮವಿಶ್ವಾಸದಲ್ಲಿ ಹೇಳಿದ್ದಾರೆ. ಮೈತ್ರಿ ಸಂಬಂಧ ಹಾಗೂ ಸೀಟು ಹಂಚಿಕೆ ಬಗ್ಗೆ ಸಂಜಯ್​ ನಿಷಾದ್​ ಅವರು, ಗೃಹ ಸಚಿವ ಅಮಿತ್​ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಬಿ.ಎಲ್​.ಸಂತೋಷ್​ ಜೊತೆ ಇಂದು ದೆಹಲಿಯಲ್ಲಿ ಮಾತುಕತೆ ನಡೆಸಿದ್ದಾರೆ ಎಂದೂ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಕಳೆದ ವಾರ ಮಾತನಾಡಿದ್ದ ಸಂಜಯ್ ನಿಷಾದ್​, ಉತ್ತರಪ್ರದೇಶದಲ್ಲಿ 160ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ನಿಷಾದ್​ ಸಮುದಾಯದ ಪ್ರಾಬಲ್ಯವಿದೆ. ಈ ನಿಟ್ಟಿನಲ್ಲಿ 70 ಕ್ಷೇತ್ರಗಳಲ್ಲಾದರೂ ನಾವು ಸ್ಪರ್ಧಿಸಬೇಕು ಎಂಬ ನಿರ್ಣಯ ಮಾಡಿದ್ದೇವೆ ಎಂದಿದ್ದರು. ಅಷ್ಟೇ ಅಲ್ಲ, ಬರುವ ವರ್ಷ ಚುನಾವಣೆಯಲ್ಲಿ ನಮ್ಮ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಪಕ್ಷಕ್ಕೆ ಮಾತ್ರ ಗೆಲುವು ಸಿಗಲಿದೆ ಎಂದೂ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಪತಿಯ ಅಗಲುವಿಕೆಯಿಂದ ಚೇತರಿಸಿಕೊಂಡು ಮತ್ತೆ ಜಿಮ್ ಕಡೆ ಮುಖಮಾಡಿದ ಖ್ಯಾತ ನಟಿ; ಸ್ವಾಗತಿಸಿದ ಅಭಿಮಾನಿಗಳು

Follow Us
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ