AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೃಣಮೂಲ ಸಂಸದೆ ಮೊಯಿತ್ರಾ ನನ್ನನ್ನು ಮೂರು ಬಾರಿ ‘ಬಿಹಾರಿ ಗೂಂಡಾ’ ಎಂದು ನಿಂದಿಸಿದರು: ನಿಶಿಕಾಂತ್ ದುಬೆ, ಬಿಜೆಪಿ ಸಂಸದ

ತೃಣಮೂಲ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರನ್ನು ಟ್ಯಾಗ್ ಮಾಡಿರುವ ದುಬೆ ಅವರು, ‘ನಿಮ್ಮ ಸಂಸದೆ ನನ್ನನ್ನು ನಿಂದಿಸಿದ ರೀತಿ ನೋಡಿದರೆ, ಉತ್ತರ ಭಾರತೀಯರು ಮತ್ತು ಹಿಂದಿ-ಮಾತನಾಡುವ ಜನರ ವಿರುದ್ಧ ನಿಮ್ಮ ಪಕ್ಷಕ್ಕಿರುವ ದ್ವೇಷದ ಭಾವನೆ ಭಾರತೀಯರಿಗೆ ಸ್ಪಷ್ಟವಾಗುತ್ತದೆ,’ ಎಂದು ಹೇಳಿದ್ದಾರೆ.

ತೃಣಮೂಲ ಸಂಸದೆ ಮೊಯಿತ್ರಾ ನನ್ನನ್ನು ಮೂರು ಬಾರಿ ‘ಬಿಹಾರಿ ಗೂಂಡಾ’ ಎಂದು ನಿಂದಿಸಿದರು: ನಿಶಿಕಾಂತ್ ದುಬೆ, ಬಿಜೆಪಿ ಸಂಸದ
ನಿಶಿಕಾಂತ್ ದುಬೆ ಮತ್ತು ಮಹಾ ಮೊಯಿತ್ರಾ
TV9 Web
| Edited By: |

Updated on: Jul 28, 2021 | 10:10 PM

Share

ನವದೆಹಲಿ:  ಭಾರತೀಯ ಜನತಾ ಪಕ್ಷದ ಸಂಸದ ನಿಶಿಕಾಂತ್ ದುಬೆ ಮತ್ತು ತೃಣಮೂಲ ಕಾಂಗ್ರೆಸ್​ನ ಲೋಕ ಸಭಾ ಸದಸ್ಯೆ ಮಹಾ ಮೊಯಿತ್ರಾ ಅವರ ನಡುವೆ ಸಂಸತ್ತಿನ ಒಳಗೆ ಮತ್ತು ಹೊರಗೆ ಬುಧವಾರ ಮಾತಿನ ಕಾಳಗ ನಡೆದಿದ್ದು, ಮೊಯಿತಾ ಅವರು ಐಟಿ ಸಮಿತಿಯ ಸಭೆಯೊಂದರಲ್ಲಿ ತನ್ನನ್ನು ಮೂರು ಬಾರಿ ಬಿಹಾರಿ ಗೂಂಡಾ ಅಂತ ನಿಂದಿಸಿದರು ಎಂದು ದುಬೆ ಆರೋಪಿಸಿದ್ದಾರೆ. ದುಬೆ ತಮ್ಮ ಟ್ಚಿಟರ್ ಹ್ಯಾಂಡಲ್​ನಲ್ಲಿ ಆರೋಪ ಮಾಡಿರುವುದರಿಂದ ಮೊಯಿತ್ರಾ ಸಹ ಟ್ವಿಟರ್ ಮೂಲಕವೇ ಉತ್ತರ ನೀಡಿದ್ದಾರೆ. ತಮ್ಮ ಟ್ವೀಟ್​ನಲ್ಲಿ ಮೊಯಿತ್ರಾ, ದುಬೆ ಅವರು ಮಾಡಿರುವ ನಿಂದನೆಯ ಆರೋಪ ತನ್ನನ್ನು ವಿಸ್ಮಯಗೊಳಿಸಿದೆ, ಯಾಕೆಂದರೆ ಅವರು ಉಲ್ಲೇಖಸಿರುವ ಸಭೆ ನಡೆಯಲೇ ಇಲ್ಲ ಎಂದಿದ್ದಾರೆ. ಸಭೆಯ ಅಜೆಂಡಾ ಸಾರ್ವಜನಿಕಗೊಳ್ಳುತ್ತಿದೆ ಎಂದು ದೂರಿ ಪ್ರತಿಭಟಿಸಿದ ಬಿಜೆಪಿ ಸಂಸದರು, ಐಟಿ ಸಭೆ ಹಾಜರಾತಿ ಪುಸ್ತಕದಲ್ಲಿ ಸಹಿಯನ್ನು ಸಹ ಮಾಡಲಿಲ್ಲ, ಎಂದು ಮೊಯಿತ್ರಾ ಹೇಳಿದ್ದಾರೆ.

ತೃಣಮೂಲ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರನ್ನು ಟ್ಯಾಗ್ ಮಾಡಿರುವ ದುಬೆ ಅವರು, ‘ನಿಮ್ಮ ಸಂಸದೆ ನನ್ನನ್ನು ನಿಂದಿಸಿದ ರೀತಿ ನೋಡಿದರೆ, ಉತ್ತರ ಭಾರತೀಯರು ಮತ್ತು ಹಿಂದಿ-ಮಾತನಾಡುವ ಜನರ ವಿರುದ್ಧ ನಿಮ್ಮ ಪಕ್ಷಕ್ಕಿರುವ ದ್ವೇಷದ ಭಾವನೆ ಭಾರತೀಯರಿಗೆ ಸ್ಪಷ್ಟವಾಗುತ್ತದೆ,’ ಎಂದು ಹೇಳಿದ್ದಾರೆ.

ಅವರ ಟ್ವೀಟ್​ಗೆ ಉತ್ತರಿಸಿಸಿರುವ ಮೊಯಿತ್ರಾ ಅವರು, ‘ ನಿಂದಿಸಿರುವ ಆರೋಪ ಕೇಳಿ ಕೊಚ ವಿಸ್ಮಿತಳಾಗಿದ್ದೇನೆ. ಕೋರಂನ ಕೊರತೆಯಿಂದಾಗಿ ಐಟಿ ಸಭೆ ನಡೆಯಲಿಲ್ಲ-ಸದಸ್ಯರು ಸಭೆಯಲ್ಲಿ ಪಾಲ್ಗೊಳ್ಳಲಿಲ್ಲ. ನನ್ನಿಂದ ನಿಂದನೆಗೊಳಗಾದೆನೆಂದು ಹೇಳುತ್ತಿರುವ ವ್ಯಕ್ತಿ ಆ ಸ್ಥಳದಲ್ಲೇ ಇಲ್ಲದಿರುವಾಗ ನಾನು ಅದನ್ನು ಮಾಡುವ ಪ್ರಶ್ನೆ ಹೇಗೆ ಉದ್ಭವಿಸುತ್ತದೆ, ದಯವಿಟ್ಟು ಹಾಜರಾತಿ ಪುಸ್ತಕವನ್ನೊಮ್ಮೆ ಪರಿಶೀಲಿಸಿರಿ,’ ಎಂದು ಹೇಳಿದ್ದಾರೆ.

ಆದರೆ ಮೂಲಗಳ ಪ್ರಕಾರ, ಐಟಿ ಸಭೆಯನ್ನು ಬಿಜೆಪಿ ನಾಯಕರು ಬಹಿಷ್ಕರಿಸಿ ಹಾಜರಾತಿ ಪುಸ್ತಕದಲ್ಲಿ ಸಹಿ ಮಾಡಲು ನಿರಾಕರಿಸಿದ ನಂತರ ಇಬ್ಬರು ನಾಯಕರ ನಡುವೆ ತೀವ್ರ ಸ್ವರೂಪದ ವಾಗ್ವಾದ ಪಾರ್ಲಿಮೆಂಟ್​ನಲ್ಲೇ ಶುರವಾಯಿತು. ಸಭೆಯ ಅಜೆಂಡಾವನ್ನು ಯಾಕೆ ಸಾರ್ವಜನಿಕಗೊಳಿಸಲಾಗುತ್ತಿದೆ ಎಂದು ದುಬೆ ಅವರು ಕೇಳಿದಾಗ, ಮೊಯಿತ್ರಾ ಅವರು, ‘ನೀವು ಹಾಜರಾತಿ ಪುಸ್ತಕದಲ್ಲಿ ಸಹಿ ಮಾಡಲು ನಿರಾಕರಿಸಿರುವುದರಿಂದ, ನೀವು ಸಭೆಗೆ ಗೈರು ಅಂತಾಯ್ತು. ಹಾಗಿದ್ದ ಮೇಲೆ ನೀವು ಪ್ರಶ್ನೆ ಕೇಳುವ ಪ್ರಮೇಯ ಹೇಗೆ ಉದ್ಭವಿಸುತ್ತದೆ?’ ಎಂದು ಕೇಳಿದರು.

ಬುಧವಾರದಂದು ದುಬೆ ಅವರು, ಮಾಹಿತಿ ಮತ್ತು ತಂತ್ರಜ್ಞಾನ ಸ್ಥಾಯ ಸಮಿತಿ ಅಧ್ಯಕ್ಷರಾಗಿರುವ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರನ್ನು ಸ್ಥಾನದಿಂದ ಸರಿಸಲು ಕೋರಿ ಹಕ್ಕುಚ್ಯುತಿ ನಿಲುವಳಿಯನ್ನು ಮಂಡಿಸಲು ನೋಟೀಸ್ ನೀಡಿದರು. ಸಮಿತಿಯ ಸಭೆಯಲ್ಲಿ ಪೆಗಾಸಸ್ ಗೂಢಚರ್ಯೆ ಬಗ್ಗೆ ಚರ್ಚೆ ನಡೆಸುವುದು ನಿಗದಿಯಾಗಿತ್ತು, ಆದರೆ ಬಿಜೆಪಿ ಸಂಸದರು ಹಾಜರಿ ಪುಸ್ತಕಕ್ಕೆ ಸಹಿ ಮಾಡಲು ನಿರಾಕರಿಸಿದ್ದರಿಂದ ಸಭೆ ನಡೆಯಲಿಲ್ಲ. ವಿರೋಧ ಪಕ್ಷಗಳು ಎತ್ತಿರುವ ಪ್ರಶ್ನೆಗಳಿಗೆ ಸಂಸತ್ತಿನಲ್ಲಿ ಉತ್ತರಿಸಲು ಸರ್ಕಾರ ತಯಾರಿದ್ದರೂ ಅಧಿವೇಶನ ನಡೆಯಲು ಬಿಡದೆ ಆ ಸಂಗತಿಗಳನ್ನು ಸಮಿತಿ ಸಭೆಯಲ್ಲಿ ಚರ್ಚಿಸಲು ಸಿದ್ಧವಾಗಿದ್ದು ಆಘಾತಕಾರಿಯಾಗಿದೆ ಎಂದು ದುಬೆ ಹೇಳಿದರು.

ಇದನ್ನೂ ಓದಿ: ಸೋನಿಯಾ ಗಾಂಧಿ-ಮಮತಾ ಬ್ಯಾನರ್ಜಿ ಭೇಟಿ, 45 ನಿಮಿಷ ಚರ್ಚೆ; 2024ರ ಹೊತ್ತಿಗೆ ಪ್ರಧಾನಿ ಮೋದಿ V/S ದೇಶ ಎಂದಾಗುತ್ತದೆ ಎಂದ ದೀದಿ

Follow Us
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ