AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ನೂತನ ಕ್ಯಾಬಿನೆಟ್​​ನ ಅತ್ಯಂತ ಕಿರಿಯ ಸಚಿವ ಇವರು; ಬರೀ 35ವರ್ಷಕ್ಕೆ ಕೇಂದ್ರ ಮಂತ್ರಿ ಪಟ್ಟ

Union Cabinet Expansion: ಕೂಚ್​ ಬೆಹಾರ್​ನಿಂದ ಕೇಂದ್ರದಲ್ಲಿ ಸಚಿವ ಸ್ಥಾನ ಪಡೆಯುತ್ತಿರುವ ಮೊದಲ ಸಂಸದ ಎಂಬ ಹೆಗ್ಗಳಿಕೆಗೂ ಈ ಕಿರಿಯ ಸಚಿವ ನಿಶಿತ್ ಪ್ರಮಾಣಿಕ್​ ಪಾತ್ರರಾಗಿದ್ದಾರೆ.

ಪ್ರಧಾನಿ ಮೋದಿ ನೂತನ ಕ್ಯಾಬಿನೆಟ್​​ನ ಅತ್ಯಂತ ಕಿರಿಯ ಸಚಿವ ಇವರು; ಬರೀ 35ವರ್ಷಕ್ಕೆ ಕೇಂದ್ರ ಮಂತ್ರಿ ಪಟ್ಟ
ಪ್ರಧಾನಿ ಮೋದಿ ಸಂಪುಟ ಸೇರಿದ ಕಿರಿಯ ಸಚಿವ
TV9 Web
| Edited By: |

Updated on:Jul 08, 2021 | 2:37 PM

Share

ರಾಜಕಾರಣಿಗಳಿಗೆ ವಯಸ್ಸಾಗಿರಬೇಕು..ಅದರಲ್ಲೂ ಸಚಿವ ಸ್ಥಾನ ಸಿಗಬೇಕೆಂದರೆ ಅವರಿಗೆ 50ವರ್ಷ ದಾಟಿರಲೇಬೇಕು ಎಂಬ ಅಲಿಖಿತ ನಿಯಮವನ್ನು ಬದಿಗೊತ್ತಿ, ಸಾಧ್ಯವಾದಷ್ಟೂ ಯುವಜನರಿಗೆ ಅವಕಾಶ ನೀಡುತ್ತಿದೆ ಪ್ರಧಾನಿ ಮೋದಿ ಸರ್ಕಾರ. ಹಾಗೇ ಈ ಬಾರಿ ಕೇಂದ್ರ ಸಚಿವ ಸಂಪುಟ ವಿಸ್ತರಣೆ ವೇಳೆ ಸಹ ಅನೇಕ ಯುವ ನಾಯಕರಿಗೆ ಅವಕಾಶ ನೀಡಲಾಗಿದೆ. ಹಾಗೇ ಈ ಬಾರಿ ಸಂಪುಟ ವಿಸ್ತರಣೆ ವೇಳೆ ಸ್ಥಾನ ಪಡೆದ ಅತ್ಯಂತ ಕಿರಿಯ ಸಂಸದನೆಂದರೆ ಕೋಲ್ಕತ್ತ ಕೂಚ್​ ಬೆಹಾರ್ ಲೋಕಸಭಾ ಕ್ಷೇತ್ರದ ನಿಶಿತ್​ ಪ್ರಮಾಣಿಕ್​.

ಪಶ್ಚಿಮ ಬಂಗಾಳದಿಂದ ಈ ಬಾರಿ ಒಟ್ಟು ನಾಲ್ವರು ಸಂಸದರಿಗೆ ಕೇಂದ್ರದಲ್ಲಿ ಮಂತ್ರಿ ಸ್ಥಾನ ಸಿಗುತ್ತಿದ್ದು, ಅದರಲ್ಲಿ 35 ವರ್ಷದ ನಿಶಿತ್ ಪ್ರಮಾಣಿಕ್ ಕೂಡ ಒಬ್ಬರು. ಹಾಗೇ, ಕೂಚ್​ ಬೆಹಾರ್​ನಿಂದ ಕೇಂದ್ರದಲ್ಲಿ ಸಚಿವ ಸ್ಥಾನ ಪಡೆಯುತ್ತಿರುವ ಮೊದಲ ಸಂಸದ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಅದರಲ್ಲೂ ಮುಖ್ಯವಾಗಿ ಇವರು ರಾಜ್​ಭೋಂಗ್ಶಿ ಬುಡಕಟ್ಟು ಜನಾಂಗಕ್ಕೆ ಸೇರಿದವರಾಗಿದ್ದಾರೆ. ಈ ಜನಾಂಗದವರೊಬ್ಬ ಕ್ಯಾಬಿನೆಟ್​​ನಲ್ಲಿ ಸ್ಥಾನ ಪಡೆದಿದ್ದು ನಿಜಕ್ಕೂ ಸಾಧನೆ ಎಂದೇ ಹೇಳಲಾಗುತ್ತಿದೆ.

ನಿಶಿತ್ ​ ಪ್ರಮಾಣಿಕ್​ ಬಿಜೆಪಿ ಸೇರ್ಪಡೆಯಾಗುವುದಕ್ಕೂ ಮೊದಲು ತೃಣಮೂಲ ಕಾಂಗ್ರೆಸ್​ನಲ್ಲಿಯೇ ಇದ್ದವರು. ನಂತರ ಬಿಜೆಪಿ ಸೇರಿ 2019ರ ಲೋಕಸಭಾ ಚುನಾವಣೆಯಲ್ಲಿ ಕೂಚ್​ ಬೆಹಾರ್​ನಿಂದ ಸ್ಪರ್ಧಿಸಿ ಗೆದ್ದಿದ್ದರು. ಅವರೀಗ ರಾಜ್ಯ ಖಾತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಇವರು ಬಿಸಿಎ ಪದವೀಧರರಾಗಿದ್ದು, ರಾಜಕೀಯಕ್ಕೆ ಇಳಿಯುವ ಮೊದಲು ಶಿಕ್ಷಕ ವೃತ್ತಿ ನಡೆಸುತ್ತಿದ್ದರು.

ಇದನ್ನೂ ಓದಿ: A Narayanaswamy Profile: ದಲಿತ ನಾಯಕ ನಾರಾಯಣಸ್ವಾಮಿಗೆ ಸಚಿವ ಸ್ಥಾನ, ಚಿತ್ರದುರ್ಗ ಕ್ಷೇತ್ರಕ್ಕೆ ಮೊದಲ ಸಂಪುಟ ಗೌರವ

Published On - 7:18 pm, Wed, 7 July 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ