AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ನೂತನ ಕ್ಯಾಬಿನೆಟ್​​ನ ಅತ್ಯಂತ ಕಿರಿಯ ಸಚಿವ ಇವರು; ಬರೀ 35ವರ್ಷಕ್ಕೆ ಕೇಂದ್ರ ಮಂತ್ರಿ ಪಟ್ಟ

Union Cabinet Expansion: ಕೂಚ್​ ಬೆಹಾರ್​ನಿಂದ ಕೇಂದ್ರದಲ್ಲಿ ಸಚಿವ ಸ್ಥಾನ ಪಡೆಯುತ್ತಿರುವ ಮೊದಲ ಸಂಸದ ಎಂಬ ಹೆಗ್ಗಳಿಕೆಗೂ ಈ ಕಿರಿಯ ಸಚಿವ ನಿಶಿತ್ ಪ್ರಮಾಣಿಕ್​ ಪಾತ್ರರಾಗಿದ್ದಾರೆ.

ಪ್ರಧಾನಿ ಮೋದಿ ನೂತನ ಕ್ಯಾಬಿನೆಟ್​​ನ ಅತ್ಯಂತ ಕಿರಿಯ ಸಚಿವ ಇವರು; ಬರೀ 35ವರ್ಷಕ್ಕೆ ಕೇಂದ್ರ ಮಂತ್ರಿ ಪಟ್ಟ
ಪ್ರಧಾನಿ ಮೋದಿ ಸಂಪುಟ ಸೇರಿದ ಕಿರಿಯ ಸಚಿವ
TV9 Web
| Edited By: |

Updated on:Jul 08, 2021 | 2:37 PM

Share

ರಾಜಕಾರಣಿಗಳಿಗೆ ವಯಸ್ಸಾಗಿರಬೇಕು..ಅದರಲ್ಲೂ ಸಚಿವ ಸ್ಥಾನ ಸಿಗಬೇಕೆಂದರೆ ಅವರಿಗೆ 50ವರ್ಷ ದಾಟಿರಲೇಬೇಕು ಎಂಬ ಅಲಿಖಿತ ನಿಯಮವನ್ನು ಬದಿಗೊತ್ತಿ, ಸಾಧ್ಯವಾದಷ್ಟೂ ಯುವಜನರಿಗೆ ಅವಕಾಶ ನೀಡುತ್ತಿದೆ ಪ್ರಧಾನಿ ಮೋದಿ ಸರ್ಕಾರ. ಹಾಗೇ ಈ ಬಾರಿ ಕೇಂದ್ರ ಸಚಿವ ಸಂಪುಟ ವಿಸ್ತರಣೆ ವೇಳೆ ಸಹ ಅನೇಕ ಯುವ ನಾಯಕರಿಗೆ ಅವಕಾಶ ನೀಡಲಾಗಿದೆ. ಹಾಗೇ ಈ ಬಾರಿ ಸಂಪುಟ ವಿಸ್ತರಣೆ ವೇಳೆ ಸ್ಥಾನ ಪಡೆದ ಅತ್ಯಂತ ಕಿರಿಯ ಸಂಸದನೆಂದರೆ ಕೋಲ್ಕತ್ತ ಕೂಚ್​ ಬೆಹಾರ್ ಲೋಕಸಭಾ ಕ್ಷೇತ್ರದ ನಿಶಿತ್​ ಪ್ರಮಾಣಿಕ್​.

ಪಶ್ಚಿಮ ಬಂಗಾಳದಿಂದ ಈ ಬಾರಿ ಒಟ್ಟು ನಾಲ್ವರು ಸಂಸದರಿಗೆ ಕೇಂದ್ರದಲ್ಲಿ ಮಂತ್ರಿ ಸ್ಥಾನ ಸಿಗುತ್ತಿದ್ದು, ಅದರಲ್ಲಿ 35 ವರ್ಷದ ನಿಶಿತ್ ಪ್ರಮಾಣಿಕ್ ಕೂಡ ಒಬ್ಬರು. ಹಾಗೇ, ಕೂಚ್​ ಬೆಹಾರ್​ನಿಂದ ಕೇಂದ್ರದಲ್ಲಿ ಸಚಿವ ಸ್ಥಾನ ಪಡೆಯುತ್ತಿರುವ ಮೊದಲ ಸಂಸದ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಅದರಲ್ಲೂ ಮುಖ್ಯವಾಗಿ ಇವರು ರಾಜ್​ಭೋಂಗ್ಶಿ ಬುಡಕಟ್ಟು ಜನಾಂಗಕ್ಕೆ ಸೇರಿದವರಾಗಿದ್ದಾರೆ. ಈ ಜನಾಂಗದವರೊಬ್ಬ ಕ್ಯಾಬಿನೆಟ್​​ನಲ್ಲಿ ಸ್ಥಾನ ಪಡೆದಿದ್ದು ನಿಜಕ್ಕೂ ಸಾಧನೆ ಎಂದೇ ಹೇಳಲಾಗುತ್ತಿದೆ.

ನಿಶಿತ್ ​ ಪ್ರಮಾಣಿಕ್​ ಬಿಜೆಪಿ ಸೇರ್ಪಡೆಯಾಗುವುದಕ್ಕೂ ಮೊದಲು ತೃಣಮೂಲ ಕಾಂಗ್ರೆಸ್​ನಲ್ಲಿಯೇ ಇದ್ದವರು. ನಂತರ ಬಿಜೆಪಿ ಸೇರಿ 2019ರ ಲೋಕಸಭಾ ಚುನಾವಣೆಯಲ್ಲಿ ಕೂಚ್​ ಬೆಹಾರ್​ನಿಂದ ಸ್ಪರ್ಧಿಸಿ ಗೆದ್ದಿದ್ದರು. ಅವರೀಗ ರಾಜ್ಯ ಖಾತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಇವರು ಬಿಸಿಎ ಪದವೀಧರರಾಗಿದ್ದು, ರಾಜಕೀಯಕ್ಕೆ ಇಳಿಯುವ ಮೊದಲು ಶಿಕ್ಷಕ ವೃತ್ತಿ ನಡೆಸುತ್ತಿದ್ದರು.

ಇದನ್ನೂ ಓದಿ: A Narayanaswamy Profile: ದಲಿತ ನಾಯಕ ನಾರಾಯಣಸ್ವಾಮಿಗೆ ಸಚಿವ ಸ್ಥಾನ, ಚಿತ್ರದುರ್ಗ ಕ್ಷೇತ್ರಕ್ಕೆ ಮೊದಲ ಸಂಪುಟ ಗೌರವ

Published On - 7:18 pm, Wed, 7 July 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ