AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ನೂತನ ಕ್ಯಾಬಿನೆಟ್​​ನ ಅತ್ಯಂತ ಕಿರಿಯ ಸಚಿವ ಇವರು; ಬರೀ 35ವರ್ಷಕ್ಕೆ ಕೇಂದ್ರ ಮಂತ್ರಿ ಪಟ್ಟ

Union Cabinet Expansion: ಕೂಚ್​ ಬೆಹಾರ್​ನಿಂದ ಕೇಂದ್ರದಲ್ಲಿ ಸಚಿವ ಸ್ಥಾನ ಪಡೆಯುತ್ತಿರುವ ಮೊದಲ ಸಂಸದ ಎಂಬ ಹೆಗ್ಗಳಿಕೆಗೂ ಈ ಕಿರಿಯ ಸಚಿವ ನಿಶಿತ್ ಪ್ರಮಾಣಿಕ್​ ಪಾತ್ರರಾಗಿದ್ದಾರೆ.

ಪ್ರಧಾನಿ ಮೋದಿ ನೂತನ ಕ್ಯಾಬಿನೆಟ್​​ನ ಅತ್ಯಂತ ಕಿರಿಯ ಸಚಿವ ಇವರು; ಬರೀ 35ವರ್ಷಕ್ಕೆ ಕೇಂದ್ರ ಮಂತ್ರಿ ಪಟ್ಟ
ಪ್ರಧಾನಿ ಮೋದಿ ಸಂಪುಟ ಸೇರಿದ ಕಿರಿಯ ಸಚಿವ
TV9 Web
| Edited By: |

Updated on:Jul 08, 2021 | 2:37 PM

Share

ರಾಜಕಾರಣಿಗಳಿಗೆ ವಯಸ್ಸಾಗಿರಬೇಕು..ಅದರಲ್ಲೂ ಸಚಿವ ಸ್ಥಾನ ಸಿಗಬೇಕೆಂದರೆ ಅವರಿಗೆ 50ವರ್ಷ ದಾಟಿರಲೇಬೇಕು ಎಂಬ ಅಲಿಖಿತ ನಿಯಮವನ್ನು ಬದಿಗೊತ್ತಿ, ಸಾಧ್ಯವಾದಷ್ಟೂ ಯುವಜನರಿಗೆ ಅವಕಾಶ ನೀಡುತ್ತಿದೆ ಪ್ರಧಾನಿ ಮೋದಿ ಸರ್ಕಾರ. ಹಾಗೇ ಈ ಬಾರಿ ಕೇಂದ್ರ ಸಚಿವ ಸಂಪುಟ ವಿಸ್ತರಣೆ ವೇಳೆ ಸಹ ಅನೇಕ ಯುವ ನಾಯಕರಿಗೆ ಅವಕಾಶ ನೀಡಲಾಗಿದೆ. ಹಾಗೇ ಈ ಬಾರಿ ಸಂಪುಟ ವಿಸ್ತರಣೆ ವೇಳೆ ಸ್ಥಾನ ಪಡೆದ ಅತ್ಯಂತ ಕಿರಿಯ ಸಂಸದನೆಂದರೆ ಕೋಲ್ಕತ್ತ ಕೂಚ್​ ಬೆಹಾರ್ ಲೋಕಸಭಾ ಕ್ಷೇತ್ರದ ನಿಶಿತ್​ ಪ್ರಮಾಣಿಕ್​.

ಪಶ್ಚಿಮ ಬಂಗಾಳದಿಂದ ಈ ಬಾರಿ ಒಟ್ಟು ನಾಲ್ವರು ಸಂಸದರಿಗೆ ಕೇಂದ್ರದಲ್ಲಿ ಮಂತ್ರಿ ಸ್ಥಾನ ಸಿಗುತ್ತಿದ್ದು, ಅದರಲ್ಲಿ 35 ವರ್ಷದ ನಿಶಿತ್ ಪ್ರಮಾಣಿಕ್ ಕೂಡ ಒಬ್ಬರು. ಹಾಗೇ, ಕೂಚ್​ ಬೆಹಾರ್​ನಿಂದ ಕೇಂದ್ರದಲ್ಲಿ ಸಚಿವ ಸ್ಥಾನ ಪಡೆಯುತ್ತಿರುವ ಮೊದಲ ಸಂಸದ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಅದರಲ್ಲೂ ಮುಖ್ಯವಾಗಿ ಇವರು ರಾಜ್​ಭೋಂಗ್ಶಿ ಬುಡಕಟ್ಟು ಜನಾಂಗಕ್ಕೆ ಸೇರಿದವರಾಗಿದ್ದಾರೆ. ಈ ಜನಾಂಗದವರೊಬ್ಬ ಕ್ಯಾಬಿನೆಟ್​​ನಲ್ಲಿ ಸ್ಥಾನ ಪಡೆದಿದ್ದು ನಿಜಕ್ಕೂ ಸಾಧನೆ ಎಂದೇ ಹೇಳಲಾಗುತ್ತಿದೆ.

ನಿಶಿತ್ ​ ಪ್ರಮಾಣಿಕ್​ ಬಿಜೆಪಿ ಸೇರ್ಪಡೆಯಾಗುವುದಕ್ಕೂ ಮೊದಲು ತೃಣಮೂಲ ಕಾಂಗ್ರೆಸ್​ನಲ್ಲಿಯೇ ಇದ್ದವರು. ನಂತರ ಬಿಜೆಪಿ ಸೇರಿ 2019ರ ಲೋಕಸಭಾ ಚುನಾವಣೆಯಲ್ಲಿ ಕೂಚ್​ ಬೆಹಾರ್​ನಿಂದ ಸ್ಪರ್ಧಿಸಿ ಗೆದ್ದಿದ್ದರು. ಅವರೀಗ ರಾಜ್ಯ ಖಾತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಇವರು ಬಿಸಿಎ ಪದವೀಧರರಾಗಿದ್ದು, ರಾಜಕೀಯಕ್ಕೆ ಇಳಿಯುವ ಮೊದಲು ಶಿಕ್ಷಕ ವೃತ್ತಿ ನಡೆಸುತ್ತಿದ್ದರು.

ಇದನ್ನೂ ಓದಿ: A Narayanaswamy Profile: ದಲಿತ ನಾಯಕ ನಾರಾಯಣಸ್ವಾಮಿಗೆ ಸಚಿವ ಸ್ಥಾನ, ಚಿತ್ರದುರ್ಗ ಕ್ಷೇತ್ರಕ್ಕೆ ಮೊದಲ ಸಂಪುಟ ಗೌರವ

Published On - 7:18 pm, Wed, 7 July 21

Follow Us
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ
ನಾಗೇಂದ್ರ ಆಯ್ತು, ಇನ್ನೊಂದು ವಿಕೆಟ್ ಪತನವಾಗುತ್ತೆ: ಆರ್ ಅಶೋಕ್
ನಾಗೇಂದ್ರ ಆಯ್ತು, ಇನ್ನೊಂದು ವಿಕೆಟ್ ಪತನವಾಗುತ್ತೆ: ಆರ್ ಅಶೋಕ್