AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ನೂತನ ಕ್ಯಾಬಿನೆಟ್​​ನ ಅತ್ಯಂತ ಕಿರಿಯ ಸಚಿವ ಇವರು; ಬರೀ 35ವರ್ಷಕ್ಕೆ ಕೇಂದ್ರ ಮಂತ್ರಿ ಪಟ್ಟ

Union Cabinet Expansion: ಕೂಚ್​ ಬೆಹಾರ್​ನಿಂದ ಕೇಂದ್ರದಲ್ಲಿ ಸಚಿವ ಸ್ಥಾನ ಪಡೆಯುತ್ತಿರುವ ಮೊದಲ ಸಂಸದ ಎಂಬ ಹೆಗ್ಗಳಿಕೆಗೂ ಈ ಕಿರಿಯ ಸಚಿವ ನಿಶಿತ್ ಪ್ರಮಾಣಿಕ್​ ಪಾತ್ರರಾಗಿದ್ದಾರೆ.

ಪ್ರಧಾನಿ ಮೋದಿ ನೂತನ ಕ್ಯಾಬಿನೆಟ್​​ನ ಅತ್ಯಂತ ಕಿರಿಯ ಸಚಿವ ಇವರು; ಬರೀ 35ವರ್ಷಕ್ಕೆ ಕೇಂದ್ರ ಮಂತ್ರಿ ಪಟ್ಟ
ಪ್ರಧಾನಿ ಮೋದಿ ಸಂಪುಟ ಸೇರಿದ ಕಿರಿಯ ಸಚಿವ
TV9 Web
| Edited By: |

Updated on:Jul 08, 2021 | 2:37 PM

Share

ರಾಜಕಾರಣಿಗಳಿಗೆ ವಯಸ್ಸಾಗಿರಬೇಕು..ಅದರಲ್ಲೂ ಸಚಿವ ಸ್ಥಾನ ಸಿಗಬೇಕೆಂದರೆ ಅವರಿಗೆ 50ವರ್ಷ ದಾಟಿರಲೇಬೇಕು ಎಂಬ ಅಲಿಖಿತ ನಿಯಮವನ್ನು ಬದಿಗೊತ್ತಿ, ಸಾಧ್ಯವಾದಷ್ಟೂ ಯುವಜನರಿಗೆ ಅವಕಾಶ ನೀಡುತ್ತಿದೆ ಪ್ರಧಾನಿ ಮೋದಿ ಸರ್ಕಾರ. ಹಾಗೇ ಈ ಬಾರಿ ಕೇಂದ್ರ ಸಚಿವ ಸಂಪುಟ ವಿಸ್ತರಣೆ ವೇಳೆ ಸಹ ಅನೇಕ ಯುವ ನಾಯಕರಿಗೆ ಅವಕಾಶ ನೀಡಲಾಗಿದೆ. ಹಾಗೇ ಈ ಬಾರಿ ಸಂಪುಟ ವಿಸ್ತರಣೆ ವೇಳೆ ಸ್ಥಾನ ಪಡೆದ ಅತ್ಯಂತ ಕಿರಿಯ ಸಂಸದನೆಂದರೆ ಕೋಲ್ಕತ್ತ ಕೂಚ್​ ಬೆಹಾರ್ ಲೋಕಸಭಾ ಕ್ಷೇತ್ರದ ನಿಶಿತ್​ ಪ್ರಮಾಣಿಕ್​.

ಪಶ್ಚಿಮ ಬಂಗಾಳದಿಂದ ಈ ಬಾರಿ ಒಟ್ಟು ನಾಲ್ವರು ಸಂಸದರಿಗೆ ಕೇಂದ್ರದಲ್ಲಿ ಮಂತ್ರಿ ಸ್ಥಾನ ಸಿಗುತ್ತಿದ್ದು, ಅದರಲ್ಲಿ 35 ವರ್ಷದ ನಿಶಿತ್ ಪ್ರಮಾಣಿಕ್ ಕೂಡ ಒಬ್ಬರು. ಹಾಗೇ, ಕೂಚ್​ ಬೆಹಾರ್​ನಿಂದ ಕೇಂದ್ರದಲ್ಲಿ ಸಚಿವ ಸ್ಥಾನ ಪಡೆಯುತ್ತಿರುವ ಮೊದಲ ಸಂಸದ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಅದರಲ್ಲೂ ಮುಖ್ಯವಾಗಿ ಇವರು ರಾಜ್​ಭೋಂಗ್ಶಿ ಬುಡಕಟ್ಟು ಜನಾಂಗಕ್ಕೆ ಸೇರಿದವರಾಗಿದ್ದಾರೆ. ಈ ಜನಾಂಗದವರೊಬ್ಬ ಕ್ಯಾಬಿನೆಟ್​​ನಲ್ಲಿ ಸ್ಥಾನ ಪಡೆದಿದ್ದು ನಿಜಕ್ಕೂ ಸಾಧನೆ ಎಂದೇ ಹೇಳಲಾಗುತ್ತಿದೆ.

ನಿಶಿತ್ ​ ಪ್ರಮಾಣಿಕ್​ ಬಿಜೆಪಿ ಸೇರ್ಪಡೆಯಾಗುವುದಕ್ಕೂ ಮೊದಲು ತೃಣಮೂಲ ಕಾಂಗ್ರೆಸ್​ನಲ್ಲಿಯೇ ಇದ್ದವರು. ನಂತರ ಬಿಜೆಪಿ ಸೇರಿ 2019ರ ಲೋಕಸಭಾ ಚುನಾವಣೆಯಲ್ಲಿ ಕೂಚ್​ ಬೆಹಾರ್​ನಿಂದ ಸ್ಪರ್ಧಿಸಿ ಗೆದ್ದಿದ್ದರು. ಅವರೀಗ ರಾಜ್ಯ ಖಾತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಇವರು ಬಿಸಿಎ ಪದವೀಧರರಾಗಿದ್ದು, ರಾಜಕೀಯಕ್ಕೆ ಇಳಿಯುವ ಮೊದಲು ಶಿಕ್ಷಕ ವೃತ್ತಿ ನಡೆಸುತ್ತಿದ್ದರು.

ಇದನ್ನೂ ಓದಿ: A Narayanaswamy Profile: ದಲಿತ ನಾಯಕ ನಾರಾಯಣಸ್ವಾಮಿಗೆ ಸಚಿವ ಸ್ಥಾನ, ಚಿತ್ರದುರ್ಗ ಕ್ಷೇತ್ರಕ್ಕೆ ಮೊದಲ ಸಂಪುಟ ಗೌರವ

Published On - 7:18 pm, Wed, 7 July 21

Follow Us
Web contact
Web contact

TV9 Kannada

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ