AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ -ಪಾಕ್ ಕ್ರಿಕೆಟ್ ಪಂದ್ಯವನ್ನು ಗುಂಪಾಗಿ ವೀಕ್ಷಿಸಬೇಡಿ, ವೀಕ್ಷಿಸಿದರೆ ₹5000 ದಂಡ: ಶ್ರೀನಗರದ ಎನ್‌ಐಟಿ ಕಾಲೇಜು ಆದೇಶ

ಭಾನುವಾರದ ಪಂದ್ಯದ ಸಮಯದಲ್ಲಿ, ವಿದ್ಯಾರ್ಥಿಗಳು ತಮ್ಮ ನಿಗದಿಪಡಿಸಿದ ಕೊಠಡಿಗಳಲ್ಲಿ ಉಳಿಯಲು ಮತ್ತು ಇತರ ವಿದ್ಯಾರ್ಥಿಗಳು ತಮ್ಮ ಕೊಠಡಿಗಳಿಗೆ ಪ್ರವೇಶಿಸಲು ಮತ್ತು ಗುಂಪುಗಳಲ್ಲಿ ಪಂದ್ಯವನ್ನು ವೀಕ್ಷಿಸಲು ಅನುಮತಿಸದಂತೆ ನಿರ್ದೇಶಿಸಲಾಗಿದೆ

ಭಾರತ -ಪಾಕ್ ಕ್ರಿಕೆಟ್ ಪಂದ್ಯವನ್ನು ಗುಂಪಾಗಿ ವೀಕ್ಷಿಸಬೇಡಿ, ವೀಕ್ಷಿಸಿದರೆ ₹5000 ದಂಡ: ಶ್ರೀನಗರದ ಎನ್‌ಐಟಿ ಕಾಲೇಜು ಆದೇಶ
ಶ್ರೀನಗರದ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Aug 28, 2022 | 1:39 PM

ಶ್ರೀನಗರ: ಭಾನುವಾರದ ಭಾರತ-ಪಾಕಿಸ್ತಾನ ಏಷ್ಯಾಕಪ್ (India-Pakistan Asia Cup) ಕ್ರಿಕೆಟ್ ಪಂದ್ಯವನ್ನು ಗುಂಪುಗಳಲ್ಲಿ ವೀಕ್ಷಿಸದಂತೆ ಅಥವಾ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಅದಕ್ಕೆ ಸಂಬಂಧಿಸಿದ ಯಾವುದೇ ಪೋಸ್ಟ್ ಮಾಡದಂತೆ ಶ್ರೀನಗರದ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (National Institute of Technology NIT) ತನ್ನ ವಿದ್ಯಾರ್ಥಿಗಳಿಗೆ ತಿಳಿಸಿದೆ. ವಿದ್ಯಾರ್ಥಿಗಳ ಕಲ್ಯಾಣ ವಿಭಾಗದ ಡೀನ್ ಹೊರಡಿಸಿದ ನೋಟಿಸ್‌ನಲ್ಲಿ, ಪಂದ್ಯದ ಸಮಯದಲ್ಲಿ ವಿದ್ಯಾರ್ಥಿಗಳಿಗೆ ನಿಗದಿಪಡಿಸಿದ ಕೊಠಡಿಗಳಲ್ಲಿ ಉಳಿಯುವಂತೆ ಸಂಸ್ಥೆಯ ಆಡಳಿತ ಹೇಳಿದೆ. ದುಬೈ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ವಿವಿಧ ರಾಷ್ಟ್ರಗಳನ್ನು ಒಳಗೊಂಡ ಕ್ರಿಕೆಟ್ ಸರಣಿ ನಡೆಯುತ್ತಿದೆ ಎಂದು ವಿದ್ಯಾರ್ಥಿಗಳಿಗೆ ತಿಳಿದಿದೆ. ವಿದ್ಯಾರ್ಥಿಗಳು ಆಟವನ್ನು ಕ್ರೀಡಾ ಮನೋಭಾವದಿಂದ ತೆಗೆದುಕೊಳ್ಳುವಂತೆ ಮತ್ತು ಸಂಸ್ಥೆ/ಹಾಸ್ಟೆಲ್‌ನಲ್ಲಿ ಯಾವುದೇ ರೀತಿಯ ಗದ್ದಲ  ಸೃಷ್ಟಿಸದಂತೆ ಸೂಚಿಸಲಾಗಿದೆ” ಎಂದು ನೋಟಿಸ್‌ನಲ್ಲಿ ಹೇಳಲಾಗಿದೆ.

ಭಾನುವಾರದ ಪಂದ್ಯದ ಸಮಯದಲ್ಲಿ, ವಿದ್ಯಾರ್ಥಿಗಳು ತಮ್ಮ ನಿಗದಿಪಡಿಸಿದ ಕೊಠಡಿಗಳಲ್ಲಿ ಉಳಿಯಲು ಮತ್ತು ಇತರ ವಿದ್ಯಾರ್ಥಿಗಳು ತಮ್ಮ ಕೊಠಡಿಗಳಿಗೆ ಪ್ರವೇಶಿಸಲು ಮತ್ತು ಗುಂಪುಗಳಲ್ಲಿ ಪಂದ್ಯವನ್ನು ವೀಕ್ಷಿಸಲು ಅನುಮತಿಸದಂತೆ ನಿರ್ದೇಶಿಸಲಾಗಿದೆ ಎಂದು ಅದು ಹೇಳಿದೆ. ಒಂದು ನಿರ್ದಿಷ್ಟ ಕೋಣೆಯಲ್ಲಿ ಪಂದ್ಯವನ್ನು ವೀಕ್ಷಿಸುವ ವಿದ್ಯಾರ್ಥಿಗಳ ಗುಂಪು ಇದ್ದರೆ, ಆ ನಿರ್ದಿಷ್ಟ ಕೊಠಡಿಯನ್ನು ನಿಗದಿಪಡಿಸಿದ ವಿದ್ಯಾರ್ಥಿಗಳನ್ನು ಸಂಸ್ಥೆಯ ಹಾಸ್ಟೆಲ್ ವಸತಿಯಿಂದ ಡಿಬಾರ್ ಮಾಡಲಾಗುತ್ತದೆ. ಆ ಗುಂಪಿನಲ್ಲಿದ್ದ ಎಲ್ಲಾ ವಿದ್ಯಾರ್ಥಿಗಳಿಗೆ ಕನಿಷ್ಠ ₹ 5,000 ದಂಡ ವಿಧಿಸಲಾಗುತ್ತದೆ. ಎನ್ಐಟಿ ಹೇಳಿದೆ.

ಪಂದ್ಯಕ್ಕೆ ಸಂಬಂಧಿಸಿದ ಯಾವುದೇ ವಿಷಯವನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಪೋಸ್ಟ್ ಮಾಡದಂತೆ ವಿದ್ಯಾರ್ಥಿಗಳಿಗೆ ಸೂಚಿಸಲಾಗಿದೆ. ಇದಲ್ಲದೆ, ಪಂದ್ಯದ ಸಮಯದಲ್ಲಿ ಅಥವಾ ನಂತರ ಹಾಸ್ಟೆಲ್ ಕೊಠಡಿಗಳಿಂದ ಹೊರಬರದಂತೆ ಸೂಚನೆ ನೀಡಲಾಗಿದೆ.

2016 ರಲ್ಲಿ, T-20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ ಸೋತ ನಂತರ ಹೊರರಾಜ್ಯ ಮತ್ತು ಸ್ಥಳೀಯ ವಿದ್ಯಾರ್ಥಿಗಳ ನಡುವೆ ಇನ್‌ಸ್ಟಿಟ್ಯೂಟ್‌ನಲ್ಲಿ ಘರ್ಷಣೆ ಸಂಭವಿಸಿದ್ದು ಎನ್ಐಟಿಯನ್ನು ಕೆಲವು ದಿನಗಳ ಮುಚ್ಚಲಾಗಿತ್ತು.

ಮಂಗಳೂರು: NH 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್​
ಮಂಗಳೂರು: NH 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್​
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ
ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!