AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿತಾರಿ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಸುರೇಂದ್ರ ಕೊಲಿ ಖುಲಾಸೆ

ಈ ಹಿಂದೆ ಮರಣದಂಡನೆಗೆ ಗುರಿಯಾಗಿದ್ದ ನಿತಾರಿ ಹತ್ಯೆಯ ಪ್ರಮುಖ ಆರೋಪಿ ಸುರೇಂದ್ರ ಕೊಲಿಯನ್ನು ಅಲಹಾಬಾದ್ ಹೈಕೋರ್ಟ್​ ಸೋಮವಾರ ಖುಲಾಸೆಗೊಳಿಸಿದೆ.

ನಿತಾರಿ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಸುರೇಂದ್ರ ಕೊಲಿ ಖುಲಾಸೆ
ಸುರೇಂದ್ರ ಕೋಲಿImage Credit source: India Today
ನಯನಾ ರಾಜೀವ್
|

Updated on:Oct 16, 2023 | 11:49 AM

Share

ಈ ಹಿಂದೆ ಮರಣದಂಡನೆಗೆ ಗುರಿಯಾಗಿದ್ದ ನಿತಾರಿ ಹತ್ಯೆಯ ಪ್ರಮುಖ ಆರೋಪಿ ಸುರೇಂದ್ರ ಕೊಲಿ(Surendra Koli)ಯನ್ನು ಅಲಹಾಬಾದ್ ಹೈಕೋರ್ಟ್​ ಸೋಮವಾರ ಖುಲಾಸೆಗೊಳಿಸಿದೆ. 2012ರಲ್ಲಿ ನಿತಾರಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಕೊಲಿಗೆ ಸಿಬಿಐನ ವಿಶೇಷ ನ್ಯಾಯಾಲಯ ಮರಣದಂಡನೆ ವಿಧಿಸಿತ್ತು.

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಐದನೇ ಪ್ರಕರಣದಲ್ಲಿ ಕೊಲಿಯ ಆರೋಪದ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಮರಣದಂಡನ ಶಿಕ್ಷೆ ವಿಧಿಸಿತ್ತು.

2005ರಲ್ಲಿ ನೋಯ್ಡಾದ ಸೆಕ್ಟರ್ 31ರಲ್ಲಿ ಇರುವ ಕೊಲಿಯ ಉದ್ಯೋಗದಾತ ಮೊಂನೀದರ್ ಸಿಂಗ್ ಪಂದೇರ್ ಮನೆ ಹೊರಗಿಂದ ಬಾಲಕಿ ಕಾಣೆಯಾಗಿದ್ದಳು. ಈ ಸಂಬಂಧ ಆಕೆಯ ತಂದೆ ಸ್ಥಳೀಯ ಪೊಲೀಸರಲ್ಲಿ ದೂರು ನೀಡಿದ್ದರು. ಈ ಕೊಲೆ ಪ್ರಕರಣದಲ್ಲಿ ಪಂದೇರ್ ಆರೋಪಿಯಲ್ಲ. 2006ರಲ್ಲಿ ಮನೆಯ ಸಮೀಪದ ಚರಂಡಿಯಲ್ಲಿ ಬಾಲಕಿಯ ಅಸ್ತಿಪಂಜರಗಳು ದೊರೆತಿದ್ದವು.

ಹಲವು ಬಾಲಕಿಯರನ್ನು ಕೊಲೆ ಮಾಡಿರುವುದಾಗಿ ಕೊಲಿ ಒಪ್ಪಿಕೊಂಡು ಅವರ ದೇಹಗಳನ್ನು ತುಂಡು ತುಂಡಾಗಿ ಕತ್ತರಿಸಿ ಮನೆಯ ಹಿಂಬದಿಯ ಚರಂಡಿಗೆ ಎಸೆದಿರುವುದಾಗಿ ಹೇಳಿದ್ದ.

ಮತ್ತಷ್ಟು ಓದಿ: ಮಧ್ಯಪ್ರದೇಶ: ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ

ದಾಖಲಾದ ಒಟ್ಟು 19 ಪ್ರಕರಣಗಳಲ್ಲಿ ಸಿಬಿಐ 16 ಪ್ರಕರಣದ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಸಾಕ್ಷ್ಯಾಧಾರಗಳ ಕೊರತೆಯಿಂದ ಮೂರು ಪ್ರಕರಣಗಳು ರದ್ದುಗೊಂಡಿದ್ದವು.

ಅತ್ಯಾಚಾರ, ಕೊಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ 2009 ಫೆಬ್ರವರಿ ಹಾಗೂ 2009 ಸೆಪ್ಟೆಂಬರ್​, 2010 ಮೇ ಹಾಗೂ 2010 ಡಿಸೆಂಬರ್​ನಲ್ಲಿ ಕೊಲಿಗೆ ಗಲ್ಲು ಮರಣದಂಡನೆ ವಿಧಿಸಲಾಗಿತ್ತು. ಕೊಲಿ ವಿರುದ್ಧ ಒಟ್ಟು 16 ಪ್ರಕರಣಗಳು ದಾಖಲಾಗಿದ್ದು, ಹನ್ನೆರಡರಲ್ಲಿ ಆತನಿಗೆ ಮರಣದಂಡನೆ ವಿಧಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:40 am, Mon, 16 October 23

ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?