AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿತಾರಿ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಸುರೇಂದ್ರ ಕೊಲಿ ಖುಲಾಸೆ

ಈ ಹಿಂದೆ ಮರಣದಂಡನೆಗೆ ಗುರಿಯಾಗಿದ್ದ ನಿತಾರಿ ಹತ್ಯೆಯ ಪ್ರಮುಖ ಆರೋಪಿ ಸುರೇಂದ್ರ ಕೊಲಿಯನ್ನು ಅಲಹಾಬಾದ್ ಹೈಕೋರ್ಟ್​ ಸೋಮವಾರ ಖುಲಾಸೆಗೊಳಿಸಿದೆ.

ನಿತಾರಿ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಸುರೇಂದ್ರ ಕೊಲಿ ಖುಲಾಸೆ
ಸುರೇಂದ್ರ ಕೋಲಿImage Credit source: India Today
ನಯನಾ ರಾಜೀವ್
|

Updated on:Oct 16, 2023 | 11:49 AM

Share

ಈ ಹಿಂದೆ ಮರಣದಂಡನೆಗೆ ಗುರಿಯಾಗಿದ್ದ ನಿತಾರಿ ಹತ್ಯೆಯ ಪ್ರಮುಖ ಆರೋಪಿ ಸುರೇಂದ್ರ ಕೊಲಿ(Surendra Koli)ಯನ್ನು ಅಲಹಾಬಾದ್ ಹೈಕೋರ್ಟ್​ ಸೋಮವಾರ ಖುಲಾಸೆಗೊಳಿಸಿದೆ. 2012ರಲ್ಲಿ ನಿತಾರಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಕೊಲಿಗೆ ಸಿಬಿಐನ ವಿಶೇಷ ನ್ಯಾಯಾಲಯ ಮರಣದಂಡನೆ ವಿಧಿಸಿತ್ತು.

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಐದನೇ ಪ್ರಕರಣದಲ್ಲಿ ಕೊಲಿಯ ಆರೋಪದ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಮರಣದಂಡನ ಶಿಕ್ಷೆ ವಿಧಿಸಿತ್ತು.

2005ರಲ್ಲಿ ನೋಯ್ಡಾದ ಸೆಕ್ಟರ್ 31ರಲ್ಲಿ ಇರುವ ಕೊಲಿಯ ಉದ್ಯೋಗದಾತ ಮೊಂನೀದರ್ ಸಿಂಗ್ ಪಂದೇರ್ ಮನೆ ಹೊರಗಿಂದ ಬಾಲಕಿ ಕಾಣೆಯಾಗಿದ್ದಳು. ಈ ಸಂಬಂಧ ಆಕೆಯ ತಂದೆ ಸ್ಥಳೀಯ ಪೊಲೀಸರಲ್ಲಿ ದೂರು ನೀಡಿದ್ದರು. ಈ ಕೊಲೆ ಪ್ರಕರಣದಲ್ಲಿ ಪಂದೇರ್ ಆರೋಪಿಯಲ್ಲ. 2006ರಲ್ಲಿ ಮನೆಯ ಸಮೀಪದ ಚರಂಡಿಯಲ್ಲಿ ಬಾಲಕಿಯ ಅಸ್ತಿಪಂಜರಗಳು ದೊರೆತಿದ್ದವು.

ಹಲವು ಬಾಲಕಿಯರನ್ನು ಕೊಲೆ ಮಾಡಿರುವುದಾಗಿ ಕೊಲಿ ಒಪ್ಪಿಕೊಂಡು ಅವರ ದೇಹಗಳನ್ನು ತುಂಡು ತುಂಡಾಗಿ ಕತ್ತರಿಸಿ ಮನೆಯ ಹಿಂಬದಿಯ ಚರಂಡಿಗೆ ಎಸೆದಿರುವುದಾಗಿ ಹೇಳಿದ್ದ.

ಮತ್ತಷ್ಟು ಓದಿ: ಮಧ್ಯಪ್ರದೇಶ: ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ

ದಾಖಲಾದ ಒಟ್ಟು 19 ಪ್ರಕರಣಗಳಲ್ಲಿ ಸಿಬಿಐ 16 ಪ್ರಕರಣದ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಸಾಕ್ಷ್ಯಾಧಾರಗಳ ಕೊರತೆಯಿಂದ ಮೂರು ಪ್ರಕರಣಗಳು ರದ್ದುಗೊಂಡಿದ್ದವು.

ಅತ್ಯಾಚಾರ, ಕೊಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ 2009 ಫೆಬ್ರವರಿ ಹಾಗೂ 2009 ಸೆಪ್ಟೆಂಬರ್​, 2010 ಮೇ ಹಾಗೂ 2010 ಡಿಸೆಂಬರ್​ನಲ್ಲಿ ಕೊಲಿಗೆ ಗಲ್ಲು ಮರಣದಂಡನೆ ವಿಧಿಸಲಾಗಿತ್ತು. ಕೊಲಿ ವಿರುದ್ಧ ಒಟ್ಟು 16 ಪ್ರಕರಣಗಳು ದಾಖಲಾಗಿದ್ದು, ಹನ್ನೆರಡರಲ್ಲಿ ಆತನಿಗೆ ಮರಣದಂಡನೆ ವಿಧಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:40 am, Mon, 16 October 23

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ