ಬೆಂಗಳೂರಿನ ಬಿಡದಿಯಲ್ಲಿ ನನ್ನ ದೇಹ ಸಜೀವ ಸಮಾಧಿಯಾಗಲಿದೆ -ಇದು ನಿತ್ಯಾನಂದನ ಸ್ವಘೋಷಣೆ

ಸ್ವಯಂಘೋಷಿತ ದೇವಮಾನವ ನಿತ್ಯಾನಂದ ತನ್ನದೇ ಆದಂಥ ಕೈಲಾಸ ದೇಶವನ್ನು ಘೋಷಣೆ ಮಾಡಿಕೊಂಡ ಬಳಿಕ ಈ ಸಂಗತಿ ಭಾರತದೆಲ್ಲೆಡೆ ಚರ್ಚೆಗೆ ಗ್ರಾಸವಾಗಿತ್ತು. ಇದೀಗ, ತನ್ನ ಸ್ವಘೋಷಿತ ದೇಶದಲ್ಲಿ ರಿಸರ್ವ್ ಬ್ಯಾಂಕ್ ಆಫ್ ಕೈಲಾಸ ಎಂಬ ಬ್ಯಾಂಕನ್ನು ಸಹ ಸ್ಥಾಪಿಸಿದ್ದಾನೆ. ಒಂದಲ್ಲ ಒಂದು ವಿಷಯದಲ್ಲಿ ಸುದ್ದಿಯಲ್ಲಿರುವ ನಿತ್ಯಾನಂದ ಇದೀಗ ಮತ್ತೊಂದು ದೇಶದೊಂದಿಗೆ ಒಪ್ಪಂದ ಮಾಡಿಕೊಂಡು, ಕೈಲಾಸ ದೇಶದಲ್ಲಿ ರಿಸರ್ವ್ ಬ್ಯಾಂಕ್ ಆಫ್ ಕೈಲಾಸ ಎಂಬ ಬ್ಯಾಂಕನ್ನು ಗಣೇಶ ಚತುರ್ಥಿಯಂದು ಸ್ಥಾಪಿಸಿದ್ದಾನೆ. ಜೊತೆಗೆ ಒಂದಿಷ್ಟು ಹೇಳಿಕೆ ಬಿಡುಗಡೆ ಮಾಡಿರುವ ನಿತ್ಯಾನಂದ ತನ್ನೆಲ್ಲ […]

ಬೆಂಗಳೂರಿನ ಬಿಡದಿಯಲ್ಲಿ ನನ್ನ ದೇಹ ಸಜೀವ ಸಮಾಧಿಯಾಗಲಿದೆ -ಇದು ನಿತ್ಯಾನಂದನ ಸ್ವಘೋಷಣೆ
ನಿತ್ಯಾನಂದ ಸ್ವಾಮಿ
ಸಾಧು ಶ್ರೀನಾಥ್​ Edited By:

Updated on: Aug 22, 2020 | 2:32 PM

ಸ್ವಯಂಘೋಷಿತ ದೇವಮಾನವ ನಿತ್ಯಾನಂದ ತನ್ನದೇ ಆದಂಥ ಕೈಲಾಸ ದೇಶವನ್ನು ಘೋಷಣೆ ಮಾಡಿಕೊಂಡ ಬಳಿಕ ಈ ಸಂಗತಿ ಭಾರತದೆಲ್ಲೆಡೆ ಚರ್ಚೆಗೆ ಗ್ರಾಸವಾಗಿತ್ತು. ಇದೀಗ, ತನ್ನ ಸ್ವಘೋಷಿತ ದೇಶದಲ್ಲಿ ರಿಸರ್ವ್ ಬ್ಯಾಂಕ್ ಆಫ್ ಕೈಲಾಸ ಎಂಬ ಬ್ಯಾಂಕನ್ನು ಸಹ ಸ್ಥಾಪಿಸಿದ್ದಾನೆ.

ಒಂದಲ್ಲ ಒಂದು ವಿಷಯದಲ್ಲಿ ಸುದ್ದಿಯಲ್ಲಿರುವ ನಿತ್ಯಾನಂದ ಇದೀಗ ಮತ್ತೊಂದು ದೇಶದೊಂದಿಗೆ ಒಪ್ಪಂದ ಮಾಡಿಕೊಂಡು, ಕೈಲಾಸ ದೇಶದಲ್ಲಿ ರಿಸರ್ವ್ ಬ್ಯಾಂಕ್ ಆಫ್ ಕೈಲಾಸ ಎಂಬ ಬ್ಯಾಂಕನ್ನು ಗಣೇಶ ಚತುರ್ಥಿಯಂದು ಸ್ಥಾಪಿಸಿದ್ದಾನೆ.

ಜೊತೆಗೆ ಒಂದಿಷ್ಟು ಹೇಳಿಕೆ ಬಿಡುಗಡೆ ಮಾಡಿರುವ ನಿತ್ಯಾನಂದ ತನ್ನೆಲ್ಲ ಸಂಪತ್ತನ್ನು ತಮಿಳುನಾಡಿನ ತಿರುವಣ್ಣಾಮಲೈಗೆ ಸೇರುವಂತೆ ಮಾಡಿದ್ದಾನೆ. ಜೊತೆಗೆ, ನನ್ನ ದೇಹ ಬೆಂಗಳೂರಿನ ಬಿಡದಿಯಲ್ಲಿ ಸಜೀವ ಸಮಾಧಿಯಾಗಲಿದೆ ಎಂದು ಹೇಳಿಕೊಂಡಿದ್ದಾನೆ.

Published On - 2:26 pm, Sat, 22 August 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us