AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

179 ಸಮುದಾಯಗಳನ್ನು ಎಸ್​ಸಿ, ಎಸ್​ಟಿ, ಒಬಿಸಿ ಪಟ್ಟಿಗೆ ಸೇರಿಸಲು ನೀತಿ ಆಯೋಗದ ಸಮಿತಿ ಶಿಫಾರಸು

ಭಾರತದ ಮಾನವಶಾಸ್ತ್ರೀಯ ಸಮೀಕ್ಷೆ ಮತ್ತು ಬುಡಕಟ್ಟು ಸಂಶೋಧನಾ ಸಂಸ್ಥೆಗಳು ಮೊದಲ ಬಾರಿಗೆ 268 ಅಧಿಸೂಚಿತ, ಅರೆ-ಅಲೆಮಾರಿ ಮತ್ತು ಅಲೆಮಾರಿ ಬುಡಕಟ್ಟುಗಳನ್ನು ಸಮಗ್ರವಾಗಿ ವರ್ಗೀಕರಿಸಿವೆ. ನೀತಿ ಆಯೋಗದ ಸಮಿತಿಯ ವರದಿ ಬಾಕಿ ಇದ್ದು, ಆ ಬಗ್ಗೆ ಪರಿಶೀಲನೆ ನಡೆಯುತ್ತಿದೆ ಎಂದು ಸಚಿವಾಲಯ ಹೇಳಿದೆ. ಇದೇ ಮೊದಲ ಬಾರಿಗೆ ಈ ರೀತಿಯ ಸಮೀಕ್ಷೆಗಳು ನಡೆದಿವೆ.

179 ಸಮುದಾಯಗಳನ್ನು ಎಸ್​ಸಿ, ಎಸ್​ಟಿ, ಒಬಿಸಿ ಪಟ್ಟಿಗೆ ಸೇರಿಸಲು ನೀತಿ ಆಯೋಗದ ಸಮಿತಿ ಶಿಫಾರಸು
Niti Aayog
ಸುಷ್ಮಾ ಚಕ್ರೆ
|

Updated on: Jan 21, 2025 | 4:47 PM

Share

ನವದೆಹಲಿ: ಒಂದು ಮಹತ್ವದ ಜನಾಂಗೀಯ ಅಧ್ಯಯನದಲ್ಲಿ ಭಾರತದ ಮಾನವಶಾಸ್ತ್ರೀಯ ಸಮೀಕ್ಷೆ ಮತ್ತು ಬುಡಕಟ್ಟು ಸಂಶೋಧನಾ ಸಂಸ್ಥೆಗಳು ಮೊದಲ ಬಾರಿಗೆ ಭಾರತದಾದ್ಯಂತ 268 ಡಿನೋಟಿಫೈಡ್, ಅರೆ-ಅಲೆಮಾರಿ ಮತ್ತು ಅಲೆಮಾರಿ ಬುಡಕಟ್ಟುಗಳನ್ನು ವ್ಯವಸ್ಥಿತವಾಗಿ ವರ್ಗೀಕರಿಸಿವೆ. ನೀತಿ ಆಯೋಗ ಸಮಿತಿಯಿಂದ ಮಾಡಲಾದ ಈ 3 ವರ್ಷಗಳ ಅಧ್ಯಯನವು ದೀರ್ಘಕಾಲದಿಂದ ಕಡೆಗಣಿಸಲ್ಪಟ್ಟ ಸಮುದಾಯಗಳನ್ನು ಮುಂಚೂಣಿಗೆ ತರುವ ಪ್ರಯತ್ನವಾಗಿದೆ.

ಕೇಂದ್ರ ಮಟ್ಟದಲ್ಲಿ ಪರಿಶಿಷ್ಟ ಜಾತಿಗಳು (SC), ಪರಿಶಿಷ್ಟ ಪಂಗಡಗಳು (ST) ಮತ್ತು ಇತರ ಹಿಂದುಳಿದ ವರ್ಗಗಳ (OBC) ಪಟ್ಟಿಗಳಿಗೆ 179 ಸಮುದಾಯಗಳನ್ನು ಸೇರಿಸಲು ಈ ನೀತಿ ಆಯೋಗದ ಸಮಿತಿಯ ವರದಿಯು ಶಿಫಾರಸು ಮಾಡುತ್ತದೆ. ಇವುಗಳಲ್ಲಿ 85 ಹೊಸ ಸೇರ್ಪಡೆಗಳಾಗಿವೆ. 46 ಸಮುದಾಯಗಳನ್ನು OBC ಸ್ಥಾನಮಾನಕ್ಕಾಗಿ, 29 ಸಮುದಾಯಗಳನ್ನು SC ಸ್ಥಾನಮಾನಕ್ಕಾಗಿ ಮತ್ತು 10 ಸಮುದಾಯಗಳನ್ನು ST ಸ್ಥಾನಮಾನಕ್ಕಾಗಿ ಪ್ರಸ್ತಾಪಿಸಲಾಗಿದೆ. ಉತ್ತರ ಪ್ರದೇಶವು 19 ಹೊಸ ಸೇರ್ಪಡೆಗಳೊಂದಿಗೆ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಆಂಧ್ರಪ್ರದೇಶ, ತಮಿಳುನಾಡು, ಮಧ್ಯಪ್ರದೇಶ ಮತ್ತು ರಾಜಸ್ಥಾನಗಳು ತಲಾ 8 ಸೇರ್ಪಡೆಗಳೊಂದಿಗೆ ನಂತರದ ಸ್ಥಾನಗಳಲ್ಲಿವೆ.

ಇದನ್ನೂ ಓದಿ: ದೇಶದಲ್ಲಿ ಪ್ರಸ್ತುತ 144 ಕೋಟಿ ಜನಸಂಖ್ಯೆ ಇದ್ದರೂ ಭಾರತ ಏಕೆ ಇನ್ನೂ ಹೆಚ್ಚು ಮಕ್ಕಳು ಬೇಕೆಂದು ಬಯಸುತ್ತಿದೆ?

9 ಸಮುದಾಯಗಳನ್ನು ಮರುವರ್ಗೀಕರಣಕ್ಕಾಗಿ ಗುರುತಿಸಲಾಗಿದೆ. ಆದರೆ, ಇತರ ಹಲವು ಸಮುದಾಯಗಳನ್ನು ಭಾಗಶಃ ಸೇರಿಸಲಾಗಿದೆ ಎಂದು ಕಂಡುಬಂದಿದೆ. ಕೆಲವು ರಾಜ್ಯಗಳಲ್ಲಿ ಅಥವಾ ಸೀಮಿತ ಕೇಂದ್ರ ದಾಖಲೆಗಳಲ್ಲಿ ಮಾತ್ರ ಪಟ್ಟಿ ಮಾಡಲಾಗಿದೆ. ಫೆಬ್ರವರಿ 2020ರಲ್ಲಿ ಪ್ರಾರಂಭಿಸಲಾದ ಈ ಅಧ್ಯಯನ ಒಡಿಶಾ, ಗುಜರಾತ್ ಮತ್ತು ಅರುಣಾಚಲ ಪ್ರದೇಶದ TRIಗಳಿಂದ ಪರಿಣತಿಯನ್ನು ಪಡೆದುಕೊಂಡಿತು.

ಇದನ್ನೂ ಓದಿ: ಒಟ್ಟು ಜನಸಂಖ್ಯೆಯಲ್ಲಿ ಮಹಿಳೆಯರು ಶೇ. 48; ಜಿಡಿಪಿಗೆ ಕೊಡುಗೆ ಶೇ. 18 ಮಾತ್ರ; ಸರ್ಕಾರಕ್ಕೆ ಮಹಿಳಾ ಅಂತರ ತಗ್ಗಿಸುವ ಗುರಿ

ನಾಲ್ಕನೇ ಮತ್ತು ಅಂತಿಮ ಹಂತವು ಆಗಸ್ಟ್ 2022ರಲ್ಲಿ ಮುಕ್ತಾಯಗೊಂಡಿತು. ಇದು ಪೂರ್ಣಗೊಂಡಿದ್ದರೂ ಸಂಶೋಧನೆಗಳು ನೀತಿ ಆಯೋಗ ಸಮಿತಿಯ ಪರಿಶೀಲನೆಯಲ್ಲಿವೆ. ಆದರೆ, ಸಾಮಾಜಿಕ ನ್ಯಾಯ ಸಚಿವಾಲಯವು ಇನ್ನೂ ತನ್ನ ಶಿಫಾರಸುಗಳನ್ನು ಅಂತಿಮಗೊಳಿಸಿಲ್ಲ. ಆದರೆ, ಈ ಅಧ್ಯಯನವು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಜನಸಂಖ್ಯೆಯನ್ನು ಹೆಚ್ಚಿಸಬಹುದು ಎನ್ನಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ