AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nitin Gadkari: ಸರ್ಕಾರ ಸರಿಯಾದ ಸಮಯದಲ್ಲಿ ತೀರ್ಮಾನ ತೆಗೆದುಕೊಳ್ಳುತ್ತಿಲ್ಲ; ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿಕೆ

ಸಮಯವು ಅತಿ ದೊಡ್ಡ ಬಂಡವಾಳವಾಗಿದೆ. ಸರ್ಕಾರವು ಸಮಯಕ್ಕೆ ಸರಿಯಾಗಿ ನಿರ್ಧಾರಗಳನ್ನು ತೆಗೆದುಕೊಳ್ಳದಿರುವುದು ದೊಡ್ಡ ಸಮಸ್ಯೆಯಾಗಿದೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.

Nitin Gadkari: ಸರ್ಕಾರ ಸರಿಯಾದ ಸಮಯದಲ್ಲಿ ತೀರ್ಮಾನ ತೆಗೆದುಕೊಳ್ಳುತ್ತಿಲ್ಲ; ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿಕೆ
ನಿತಿನ್ ಗಡ್ಕರಿ Image Credit source: NDTV
TV9 Web
| Edited By: |

Updated on: Aug 24, 2022 | 11:10 AM

Share

ನವದೆಹಲಿ: ಮಾತಿನ ಭರದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಆಗಾಗ ತಮ್ಮದೇ ಸರ್ಕಾರದ ಬಗ್ಗೆಯೂ ಹೇಳಿಕೆಗಳನ್ನು ನೀಡುತ್ತಾರೆ. ಇದೀಗ ನಿತಿನ್ ಗಡ್ಕರಿ ಬಿಜೆಪಿಯ ಉನ್ನತ ನಿರ್ಧಾರ ತೆಗೆದುಕೊಳ್ಳುವ ಮಂಡಳಿಯಲ್ಲಿ ತಮ್ಮ ಸ್ಥಾನವನ್ನು ಕಳೆದುಕೊಂಡಿದ್ದಾರೆ. ನಿತಿನ್ ಗಡ್ಕರಿ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿಗೆ (Narendra Modi) ಮೊದಲಿದ್ದ ಸಂಬಂಧ ಈಗಿಲ್ಲ ಎನ್ನಲಾಗುತ್ತಿದೆ. ತಮ್ಮ ಸಂದರ್ಶನವೊಂದರಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ, ತಮ್ಮ ಸರ್ಕಾರವು ಸಕಾಲದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿಲ್ಲ. ಇದೇ ಒಂದು ಸಮಸ್ಯೆಯಾಗಿದೆ ಎಂದು ಹೇಳಿದ್ದಾರೆ.

ನಾವು ಉತ್ತಮ ತಂತ್ರಜ್ಞಾನ, ಆವಿಷ್ಕಾರಗಳು, ಸಂಶೋಧನೆಯಲ್ಲಿ ವಿಶ್ವ ಮಟ್ಟದಲ್ಲಿ ಮುನ್ನುಗ್ಗಬೇಕು. ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳದೆ ವೆಚ್ಚವನ್ನು ಕಡಿಮೆ ಮಾಡುವ ಪರ್ಯಾಯ ಸಾಮಗ್ರಿಗಳನ್ನು ನಾವು ಹೊಂದಬೇಕು. ಸಮಯವು ಅತಿ ದೊಡ್ಡ ಬಂಡವಾಳವಾಗಿದೆ. ಸರ್ಕಾರವು ಸಮಯಕ್ಕೆ ಸರಿಯಾಗಿ ನಿರ್ಧಾರಗಳನ್ನು ತೆಗೆದುಕೊಳ್ಳದಿರುವುದು ದೊಡ್ಡ ಸಮಸ್ಯೆಯಾಗಿದೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.

ಮುಂಬೈನ ಅಸೋಸಿಯೇಷನ್ ​​ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಆಯೋಜಿಸಿದ್ದ NATCON 2022 ಅನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ, ತಂತ್ರಜ್ಞಾನ ಅಥವಾ ಸಂಪನ್ಮೂಲಗಳಿಗಿಂತ ಸಮಯವು ಹೆಚ್ಚು ಮುಖ್ಯವಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Nitin Gadkari: 5 ವರ್ಷಗಳಲ್ಲಿ ಭಾರತದಲ್ಲಿ ಪೆಟ್ರೋಲ್ ಬಳಕೆಗೆ ಇರುವುದಿಲ್ಲ ಎಂದ ನಿತಿನ್ ಗಡ್ಕರಿ

ಕಳೆದ ವಾರ, 2024ರ ರಾಷ್ಟ್ರೀಯ ಚುನಾವಣೆ ಸೇರಿದಂತೆ ಮುಂಬರುವ ಚುನಾವಣೆಗಳ ನೇತೃತ್ವದ ವಿಚಾರದಲ್ಲಿ ನಿತಿನ್ ಗಡ್ಕರಿ ಅವರನ್ನು ಬಿಜೆಪಿ ಸಂಸದೀಯ ಮಂಡಳಿಯಿಂದ ಕೈಬಿಡಲಾಗಿತ್ತು. ಬಿಜೆಪಿಯ ಮಾಜಿ ರಾಷ್ಟ್ರಾಧ್ಯಕ್ಷರಾಗಿರುವ ನಿತಿನ್ ಗಡ್ಕರಿ ಅವರನ್ನು ಸಂಸದೀಯ ಮಂಡಳಿಯಿಂದ ಕೈಬಿಟ್ಟಿದ್ದು ಅಚ್ಚರಿ ಉಂಟುಮಾಡಿತ್ತು. ನಾಗ್ಪುರದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ನಿತಿನ್ ಗಡ್ಕರಿ ಇಂದಿನ ರಾಜಕೀಯವು ಪವರ್‌ ಪ್ಲೇಗೆ ಸಂಬಂಧಿಸಿದೆ. ಕೆಲವೊಮ್ಮೆ ನಾನು ರಾಜಕೀಯವನ್ನು ತೊರೆಯಲು ಯೋಚಿಸಿದ್ದೆ ಎಂದು ಹೇಳಿದ್ದರು.

ತಮ್ಮ ಸಂದರ್ಶನದಲ್ಲಿ ನಿತಿನ್ ಗಡ್ಕರಿ ಮುಂಬೈನಲ್ಲಿ 1980ರ ಬಿಜೆಪಿಯ ಸಮಾವೇಶದಲ್ಲಿ ಅಟಲ್ ಬಿಹಾರಿ ವಾಜಪೇಯಿ ಮಾಡಿದ್ದ ಭಾಷಣವನ್ನು ಉಲ್ಲೇಖಿಸಿದ್ದರು. ಅಟಲ್ ಜಿ ಅವರು ‘ಅಂಧೇರಾ ಛಟೇಗಾ, ಸೂರಜ್ ನಿಕ್ಲೇಗಾ, ಕಮಲ ಖಿಲೇಗಾ’ (ಕತ್ತಲು ಮಾಯವಾಗುತ್ತದೆ, ಸೂರ್ಯ ಹೊರಬರುತ್ತಾನೆ ಮತ್ತು ಕಮಲ ಅರಳುತ್ತದೆ) ಎಂದು ಹೇಳಿದ್ದರು ಎಂದು ಗಡ್ಕರಿ ಪ್ರಸ್ತಾಪಿಸಿದ್ದಾರೆ.

ಇದನ್ನೂ ಓದಿ: ಭಾರತದ ಮೊತ್ತ ಮೊದಲ ಎಲೆಕ್ಟ್ರಿಕ್ ಡಬಲ್ ಡೆಕ್ಕರ್ ಬಸ್ ಅನಾವರಣಗೊಳಿಸಿದ ನಿತಿನ್ ಗಡ್ಕರಿ

ಆ ದಿನ ಅಟಲ್ ಬಿಹಾರಿ ವಾಜಪೇಯಿ ಭಾಷಣದ ವೇಳೆ ನಾನು ಅಲ್ಲಿದ್ದೆ. ಆ ಭಾಷಣ ಕೇಳಿದವರೆಲ್ಲರೂ ಇಂತಹ ದಿನ ಬರುತ್ತದೆ ಎಂದು ಆಗಲೇ ನಂಬಿದ್ದರು. ಅಟಲ್ ಜಿ, ಅಡ್ವಾಣಿ ಜಿ, ದೀನದಯಾಳ್ ಉಪಾಧ್ಯಾಯ ಮತ್ತು ಅನೇಕ ಕಾರ್ಯಕರ್ತರು ಬಿಜೆಪಿ ಅಧಿಕಾರಕ್ಕೆ ಬರಲು ಅಗತ್ಯವಿರುವ ಕೆಲಸವನ್ನು ಮಾಡಿದ್ದಾರೆ. ಇಂದು ನಾವು ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ದೇಶದಲ್ಲಿ ಮತ್ತು ಅನೇಕ ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದೇವೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.

ನಮ್ಮ ಮೊದಲ ಆದ್ಯತೆ ಜಲಮಾರ್ಗಗಳು. ಎರಡನೆಯದು ರೈಲ್ವೆ ಮಾರ್ಗ. ಮೂರನೇ ಆದ್ಯತೆ ರಸ್ತೆ ಮಾರ್ಗ ಮತ್ತು ನಾಲ್ಕನೇ ಆದ್ಯತೆ ವಾಯುಯಾನವಾಗಿದೆ ಎಂದು ಹೇಳಿರುವ ಸಚಿವ ನಿತಿನ್ ಗಡ್ಕರಿ, ಎಲ್‌ಎನ್‌ಜಿ, ಬಯೋ-ಎಥೆನಾಲ್ ಮತ್ತು ಗ್ರೀನ್ ಹೈಡ್ರೋಜನ್‌ನಂತಹ ಪರ್ಯಾಯ ಇಂಧನಗಳ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. “ಎಥೆನಾಲ್, ಮೆಥನಾಲ್, ಬಯೋಡೀಸೆಲ್, ಬಯೋ-ಎಲ್‌ಎನ್‌ಜಿ, ಬಯೋ-ಸಿಎನ್‌ಜಿ, ಎಲೆಕ್ಟ್ರಿಕ್ ಮತ್ತು ಗ್ರೀನ್ ಹೈಡ್ರೋಜನ್ ಪರ್ಯಾಯ ಇಂಧನಗಳಾಗಿವೆ ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್