AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bahubali Cattle Fence: ಹೆದ್ದಾರಿಗಳಲ್ಲಿ ಜಾನುವಾರುಗಳಿಂದಾಗುವ ಅಪಘಾತಗಳನ್ನು ತಪ್ಪಿಸಲು ‘ಬಾಹುಬಲಿ ಬೇಲಿ’ : ನಿತಿನ್ ಗಡ್ಕರಿ

ಹೆದ್ದಾರಿಗಳಲ್ಲಿ ವಾಹನಗಳು ತುಂಬಾ ವೇಗವಾಗಿ ಬರುತ್ತಿರುತ್ತವೆ ಆಗ ರಸ್ತೆ ದಾಟಲು ಪ್ರಯತ್ನಿಸುವ ಸಾಕಷ್ಟು ಜಾನುವಾರುಗಳು ವಾಹನಗಳಿಗೆ ಡಿಕ್ಕಿ ಹೊಡೆದು ಸಾವನ್ನಪ್ಪುತ್ತವೆ.

Bahubali Cattle Fence: ಹೆದ್ದಾರಿಗಳಲ್ಲಿ ಜಾನುವಾರುಗಳಿಂದಾಗುವ ಅಪಘಾತಗಳನ್ನು ತಪ್ಪಿಸಲು ‘ಬಾಹುಬಲಿ ಬೇಲಿ’ : ನಿತಿನ್ ಗಡ್ಕರಿ
ಬಾಹುಬಲಿ ಬೇಲಿ
ನಯನಾ ರಾಜೀವ್
|

Updated on: Jul 06, 2023 | 11:48 AM

Share

ಹೆದ್ದಾರಿಗಳಲ್ಲಿ ವಾಹನಗಳು ತುಂಬಾ ವೇಗವಾಗಿ ಬರುತ್ತಿರುತ್ತವೆ ಆಗ ರಸ್ತೆ ದಾಟಲು ಪ್ರಯತ್ನಿಸುವ ಸಾಕಷ್ಟು ಜಾನುವಾರುಗಳು ವಾಹನಗಳಿಗೆ ಡಿಕ್ಕಿ ಹೊಡೆದು ಸಾವನ್ನಪ್ಪುತ್ತವೆ. ಹೀಗಾಗಿ ಜಾನುವಾರುಗಳು ಹೆದ್ದಾರಿಗೆ ಬಾರದಂತೆ ತಡೆಯಲು ಬಾಹುಬಲಿ ಬೇಲಿ(Bahubali Fence) ನಿಮಿರ್ಸುವುದಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹೆದ್ದಾರಿಗಳಲ್ಲಿ ಬಾಹುಬಲಿ ದನಗಳ ಬೇಲಿ ಅಳವಡಿಸುವ ಯೋಜನೆ ರೂಪಿಸಿದ್ದಾರೆ. ಇದರಿಂದ ಹೆದ್ದಾರಿಗಳಲ್ಲಿ ಜಾನುವಾರುಗಳು ರಸ್ತೆ ದಾಟುವುದು ತಪ್ಪಲಿದೆ. ಇದರಿಂದ ಅಪಘಾತಗಳನ್ನು ಕಡಿಮೆ ಮಾಡಬಹುದು ಎಂಬುದು ಸರ್ಕಾರದ ನಂಬಿಕೆ.

ಈ ಕುರಿತು ನಿತಿನ್ ಗಡ್ಕರಿ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ. ಈ ಬೇಲಿ 1.20 ಮೀಟರ್ ಎತ್ತರವಿರಲಿದೆ. ದನ್ನು NH-30 ನ ವಿಭಾಗ 23 ರಲ್ಲಿ ಸ್ಥಾಪಿಸಲಾಗುವುದು, ಇದನ್ನು ತಯಾರಿಸಲು ಬಿದಿರನ್ನು ಬಳಕೆ ಮಾಡಲಾಗುತ್ತದೆ. ಈ ಬೇಲಿಗಳು ಕಡಿಮೆ ವೆಚ್ಚದಲ್ಲಿ ಹಾಗೂ ಪರಿಸರ ಸ್ನೇಹಿಯಾಗಿ ನಿರ್ಮಿಸಲಾಗುವುದು.

ಮತ್ತಷ್ಟು ಓದಿ: ಮೃತಪಟ್ಟಿದ್ದ ಜಾನುವಾರುಗಳನ್ನು ವಾಹನಕ್ಕೆ ಕಟ್ಟಿಹಾಕಿ ಎಳೆದೊಯ್ದ ಐಆರ್‌ಬಿ‌ ಟೋಲ್ ಸಿಬ್ಬಂದಿ; ಅಮಾನವೀಯ ವಿಡಿಯೋ ವೈರಲ್

ಈ ಬಿದಿರುಗಳನ್ನು ಕ್ರಿಯೋಸೋಟ್ ಎಣ್ಣೆಯಿಂದ ಸಂಸ್ಕರಿಸಲಾಗುತ್ತದೆ. ಬಾಹುಬಲಿಯಷ್ಟೇ ಗಟ್ಟಿಮುಟ್ಟಾಗಿರಲಿದೆ ಹಾಗಾಗಿ ಇದಕ್ಕೆ ಬಾಹುಬಲಿ ಬೇಲಿ ಎಂದು ಹೆಸರಿಡಲಾಗಿದೆ.

ಜಾನುವಾರುಗಳು ರಸ್ತೆ ದಾಟುವುದನ್ನು ತಡೆಯಲು ಹಾಗೂ ಮಾನವ ಜೀವಕ್ಕೆ ಅಪಾಯವನ್ನುಂಟು ಮಾಡುವ ಅಪಾಯಕಾರಿ ಅಪಘಾತಗಳನ್ನು ತಡೆಯುವ ಉದ್ದೇಶದಿಂದ ಈ ಬೇಲಿಯನ್ನು ನಿರ್ಮಿಸಲಾಗುತ್ತಿದೆ. ಹೀಗಾಗಿ ನಾವು ಭಾರತದ ಹೆದ್ದಾರಿಗಳುದ್ದಕ್ಕೂ ಜಾನುವಾರು ಬೇಲಿಗಳನ್ನು ನಿರ್ಮಿಸಲು ಮುಂದಾಗಿದ್ದೇವೆ ಎಂದು ಗಡ್ಕರಿ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ