AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bahubali Cattle Fence: ಹೆದ್ದಾರಿಗಳಲ್ಲಿ ಜಾನುವಾರುಗಳಿಂದಾಗುವ ಅಪಘಾತಗಳನ್ನು ತಪ್ಪಿಸಲು ‘ಬಾಹುಬಲಿ ಬೇಲಿ’ : ನಿತಿನ್ ಗಡ್ಕರಿ

ಹೆದ್ದಾರಿಗಳಲ್ಲಿ ವಾಹನಗಳು ತುಂಬಾ ವೇಗವಾಗಿ ಬರುತ್ತಿರುತ್ತವೆ ಆಗ ರಸ್ತೆ ದಾಟಲು ಪ್ರಯತ್ನಿಸುವ ಸಾಕಷ್ಟು ಜಾನುವಾರುಗಳು ವಾಹನಗಳಿಗೆ ಡಿಕ್ಕಿ ಹೊಡೆದು ಸಾವನ್ನಪ್ಪುತ್ತವೆ.

Bahubali Cattle Fence: ಹೆದ್ದಾರಿಗಳಲ್ಲಿ ಜಾನುವಾರುಗಳಿಂದಾಗುವ ಅಪಘಾತಗಳನ್ನು ತಪ್ಪಿಸಲು ‘ಬಾಹುಬಲಿ ಬೇಲಿ’ : ನಿತಿನ್ ಗಡ್ಕರಿ
ಬಾಹುಬಲಿ ಬೇಲಿ
Follow us
ನಯನಾ ರಾಜೀವ್
|

Updated on: Jul 06, 2023 | 11:48 AM

ಹೆದ್ದಾರಿಗಳಲ್ಲಿ ವಾಹನಗಳು ತುಂಬಾ ವೇಗವಾಗಿ ಬರುತ್ತಿರುತ್ತವೆ ಆಗ ರಸ್ತೆ ದಾಟಲು ಪ್ರಯತ್ನಿಸುವ ಸಾಕಷ್ಟು ಜಾನುವಾರುಗಳು ವಾಹನಗಳಿಗೆ ಡಿಕ್ಕಿ ಹೊಡೆದು ಸಾವನ್ನಪ್ಪುತ್ತವೆ. ಹೀಗಾಗಿ ಜಾನುವಾರುಗಳು ಹೆದ್ದಾರಿಗೆ ಬಾರದಂತೆ ತಡೆಯಲು ಬಾಹುಬಲಿ ಬೇಲಿ(Bahubali Fence) ನಿಮಿರ್ಸುವುದಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹೆದ್ದಾರಿಗಳಲ್ಲಿ ಬಾಹುಬಲಿ ದನಗಳ ಬೇಲಿ ಅಳವಡಿಸುವ ಯೋಜನೆ ರೂಪಿಸಿದ್ದಾರೆ. ಇದರಿಂದ ಹೆದ್ದಾರಿಗಳಲ್ಲಿ ಜಾನುವಾರುಗಳು ರಸ್ತೆ ದಾಟುವುದು ತಪ್ಪಲಿದೆ. ಇದರಿಂದ ಅಪಘಾತಗಳನ್ನು ಕಡಿಮೆ ಮಾಡಬಹುದು ಎಂಬುದು ಸರ್ಕಾರದ ನಂಬಿಕೆ.

ಈ ಕುರಿತು ನಿತಿನ್ ಗಡ್ಕರಿ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ. ಈ ಬೇಲಿ 1.20 ಮೀಟರ್ ಎತ್ತರವಿರಲಿದೆ. ದನ್ನು NH-30 ನ ವಿಭಾಗ 23 ರಲ್ಲಿ ಸ್ಥಾಪಿಸಲಾಗುವುದು, ಇದನ್ನು ತಯಾರಿಸಲು ಬಿದಿರನ್ನು ಬಳಕೆ ಮಾಡಲಾಗುತ್ತದೆ. ಈ ಬೇಲಿಗಳು ಕಡಿಮೆ ವೆಚ್ಚದಲ್ಲಿ ಹಾಗೂ ಪರಿಸರ ಸ್ನೇಹಿಯಾಗಿ ನಿರ್ಮಿಸಲಾಗುವುದು.

ಮತ್ತಷ್ಟು ಓದಿ: ಮೃತಪಟ್ಟಿದ್ದ ಜಾನುವಾರುಗಳನ್ನು ವಾಹನಕ್ಕೆ ಕಟ್ಟಿಹಾಕಿ ಎಳೆದೊಯ್ದ ಐಆರ್‌ಬಿ‌ ಟೋಲ್ ಸಿಬ್ಬಂದಿ; ಅಮಾನವೀಯ ವಿಡಿಯೋ ವೈರಲ್

ಈ ಬಿದಿರುಗಳನ್ನು ಕ್ರಿಯೋಸೋಟ್ ಎಣ್ಣೆಯಿಂದ ಸಂಸ್ಕರಿಸಲಾಗುತ್ತದೆ. ಬಾಹುಬಲಿಯಷ್ಟೇ ಗಟ್ಟಿಮುಟ್ಟಾಗಿರಲಿದೆ ಹಾಗಾಗಿ ಇದಕ್ಕೆ ಬಾಹುಬಲಿ ಬೇಲಿ ಎಂದು ಹೆಸರಿಡಲಾಗಿದೆ.

ಜಾನುವಾರುಗಳು ರಸ್ತೆ ದಾಟುವುದನ್ನು ತಡೆಯಲು ಹಾಗೂ ಮಾನವ ಜೀವಕ್ಕೆ ಅಪಾಯವನ್ನುಂಟು ಮಾಡುವ ಅಪಾಯಕಾರಿ ಅಪಘಾತಗಳನ್ನು ತಡೆಯುವ ಉದ್ದೇಶದಿಂದ ಈ ಬೇಲಿಯನ್ನು ನಿರ್ಮಿಸಲಾಗುತ್ತಿದೆ. ಹೀಗಾಗಿ ನಾವು ಭಾರತದ ಹೆದ್ದಾರಿಗಳುದ್ದಕ್ಕೂ ಜಾನುವಾರು ಬೇಲಿಗಳನ್ನು ನಿರ್ಮಿಸಲು ಮುಂದಾಗಿದ್ದೇವೆ ಎಂದು ಗಡ್ಕರಿ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ