AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nitin Gadkari: ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದೇನು?

ನಾನು ಬಾವಿಗೆ ಹಾರಿ ಸಾಯುತ್ತೇನೆಯೇ ಹೊರತು ಕಾಂಗ್ರೆಸ್‌ಗೆ ಸೇರುವುದಿಲ್ಲ. ಏಕೆಂದರೆ ನನಗೆ ಕಾಂಗ್ರೆಸ್ ಪಕ್ಷದ ಸಿದ್ಧಾಂತ ಇಷ್ಟವಿಲ್ಲ ಎಂದು ಹೇಳಿದ್ದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

Nitin Gadkari: ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದೇನು?
ನಿತಿನ್ ಗಡ್ಕರಿ
ಸುಷ್ಮಾ ಚಕ್ರೆ
|

Updated on:Aug 29, 2022 | 1:18 PM

Share

ನವದೆಹಲಿ: ತಾವು ವಿದ್ಯಾರ್ಥಿ ನಾಯಕರಾಗಿದ್ದಾಗ ಕಾಂಗ್ರೆಸ್ ಮುಖಂಡ ಶ್ರೀಕಾಂತ್ ಜಿಚ್ಕರ್ ಉತ್ತಮ ಭವಿಷ್ಯಕ್ಕಾಗಿ ಕಾಂಗ್ರೆಸ್ ಸೇರುವಂತೆ ಕೇಳಿಕೊಂಡಿದ್ದರು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹಳೆಯ ಘಟನೆಯನ್ನು ನೆನಪಿಸಿಕೊಂಡಿದ್ದಾರೆ. ಆಗ ಶ್ರೀಕಾಂತ್‌ಗೆ, ನಾನು ಬಾವಿಗೆ ಹಾರಿ ಸಾಯುತ್ತೇನೆಯೇ ಹೊರತು ಕಾಂಗ್ರೆಸ್‌ಗೆ ಸೇರುವುದಿಲ್ಲ. ಏಕೆಂದರೆ ನನಗೆ ಕಾಂಗ್ರೆಸ್ ಪಕ್ಷದ ಸಿದ್ಧಾಂತ ಇಷ್ಟವಿಲ್ಲ ಎಂದು ಹೇಳಿದ್ದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಉದ್ಯಮಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ನಿತಿನ್ ಗಡ್ಕರಿ, ವ್ಯಾಪಾರ, ಸಾಮಾಜಿಕ ಕೆಲಸ ಅಥವಾ ರಾಜಕೀಯದಲ್ಲಿರುವ ಯಾರಿಗಾದರೂ ಮಾನವನ ಸಂಬಂಧವೇ ದೊಡ್ಡ ಶಕ್ತಿಯಾಗಿದೆ. ಆದ್ದರಿಂದ, ಒಳ್ಳೆಯ ದಿನಗಳು ಅಥವಾ ಕೆಟ್ಟ ದಿನಗಳಲ್ಲಿ ಒಮ್ಮೆ ನೀವು ಯಾರದ್ದಾದರೂ ಕೈಯನ್ನು ಹಿಡಿದರೆ ಆ ಕೈಯನ್ನು ಯಾವಾಗಲೂ ಹಿಡಿದುಕೊಳ್ಳಿ ಎಂದು ಹೇಳಿದ್ದಾರೆ.

ರಿಚರ್ಡ್ ನಿಕ್ಸನ್ ಅವರನ್ನೂ ಉಲ್ಲೇಖಿಸಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ, ಒಬ್ಬ ವ್ಯಕ್ತಿಯು ಸೋತಾಗ ಅವನ ಕತೆ ಅಲ್ಲಿಗೇ ಮುಗಿಯುವುದಿಲ್ಲ. ಆದರೆ, ಆತ ಸೋತ ಮೇಲೆ ಇನ್ನಾಗದು ಎಂದು ಕೈಚೆಲ್ಲಿದಾಗ ಆತನ ಕತೆ ಅಂತ್ಯ ಕಾಣುತ್ತದೆ ಎಂಬ ಅಮೆರಿಕಾದ ಮಾಜಿ ಅಧ್ಯಕ್ಷ ರಿಚರ್ಡ್ ನಿಕ್ಸನ್ ಅವರ ಆತ್ಮಚರಿತ್ರೆಯ ವಾಕ್ಯವನ್ನು ಯುವ ಉದ್ಯಮಿಗಳು ನೆನಪಿಟ್ಟುಕೊಳ್ಳಬೇಕು ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.

ಇದನ್ನೂ ಓದಿ: Nitin Gadkari: ಸರ್ಕಾರ ಸರಿಯಾದ ಸಮಯದಲ್ಲಿ ತೀರ್ಮಾನ ತೆಗೆದುಕೊಳ್ಳುತ್ತಿಲ್ಲ; ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿಕೆ

ಈ ಹಿಂದೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಬಿಜೆಪಿ ಅಧಿಕಾರಕ್ಕೆ ಬರಲು ಅಟಲ್ ಬಿಹಾರಿ ವಾಜಪೇಯಿ, ಎಲ್.ಕೆ ಅಡ್ವಾಣಿ ಮತ್ತು ದೀನದಯಾಳ್ ಉಪಾಧ್ಯಾಯ ಮಾಡಿದ ಕೆಲಸಗಳು ಕಾರಣ ಎಂದು ಹೇಳಿದ್ದರು. ಮುಂಬೈನಲ್ಲಿ 1980ರ ಬಿಜೆಪಿಯ ಸಮಾವೇಶದಲ್ಲಿ ವಾಜಪೇಯಿ ಅವರ ಭಾಷಣವನ್ನು ನಾನು ಕೇಳಿದ್ದೆ. ಮುಂಬೈನಲ್ಲಿ 1980ರ ಬಿಜೆಪಿಯ ಸಮಾವೇಶದಲ್ಲಿ ಅಟಲ್ ಬಿಹಾರಿ ವಾಜಪೇಯಿ ಮಾಡಿದ್ದ ಭಾಷಣವನ್ನು ಉಲ್ಲೇಖಿಸಿದ್ದರು. ಅಟಲ್ ಜಿ ಅವರು ‘ಅಂಧೇರಾ ಛಟೇಗಾ, ಸೂರಜ್ ನಿಕ್ಲೇಗಾ, ಕಮಲ ಖಿಲೇಗಾ’ (ಕತ್ತಲು ಮಾಯವಾಗುತ್ತದೆ, ಸೂರ್ಯ ಹೊರಬರುತ್ತಾನೆ ಮತ್ತು ಕಮಲ ಅರಳುತ್ತದೆ) ಎಂದು ಹೇಳಿದ್ದರು ಎಂದು ಗಡ್ಕರಿ ಹೇಳಿದ್ದರು.

ಆ ದಿನ ಅಟಲ್ ಬಿಹಾರಿ ವಾಜಪೇಯಿ ಭಾಷಣದ ವೇಳೆ ನಾನು ಅಲ್ಲಿದ್ದೆ. ಆ ಭಾಷಣ ಕೇಳಿದವರೆಲ್ಲರೂ ಇಂತಹ ದಿನ ಬರುತ್ತದೆ ಎಂದು ಆಗಲೇ ನಂಬಿದ್ದರು. ಅಟಲ್ ಜಿ, ಅಡ್ವಾಣಿ ಜಿ, ದೀನದಯಾಳ್ ಉಪಾಧ್ಯಾಯ ಮತ್ತು ಅನೇಕ ಕಾರ್ಯಕರ್ತರು ಬಿಜೆಪಿ ಅಧಿಕಾರಕ್ಕೆ ಬರಲು ಅಗತ್ಯವಿರುವ ಕೆಲಸವನ್ನು ಮಾಡಿದ್ದಾರೆ. ಇಂದು ನಾವು ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ದೇಶದಲ್ಲಿ ಮತ್ತು ಅನೇಕ ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದೇವೆ ಎಂದು ನಿತಿನ್ ಗಡ್ಕರಿ ಹೇಳಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:16 pm, Mon, 29 August 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?