AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿತೀಶ್​ ಕುಮಾರ್​ ಸಿಎಂ ಹುದ್ದೆಗಾಗಿ ದಾವೂದ್​ ಇಬ್ರಾಹಿಂ ಜತೆ ಬೇಕಾದರೂ ಕೈಜೋಡಿಸುತ್ತಾರೆ: ಬಿಜೆಪಿ ಸಂಸದನಿಂದ ಆರೋಪ

2020ರ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ ಸ್ಪರ್ಧಿಸಬೇಕು ಎಂದು ನಾವು ಹೇಳಿದ್ದೆವು. ಆದರೆ ನಮ್ಮ ಪಕ್ಷದ ವರಿಷ್ಠರು ಅದನ್ನು ತಿರಸ್ಕರಿಸಿದರು ಎಂದು

ನಿತೀಶ್​ ಕುಮಾರ್​ ಸಿಎಂ ಹುದ್ದೆಗಾಗಿ ದಾವೂದ್​ ಇಬ್ರಾಹಿಂ ಜತೆ ಬೇಕಾದರೂ ಕೈಜೋಡಿಸುತ್ತಾರೆ: ಬಿಜೆಪಿ ಸಂಸದನಿಂದ ಆರೋಪ
ನಿತೀಶ್ ಕುಮಾರ್
TV9 Web
| Updated By: Lakshmi Hegde|

Updated on:Feb 08, 2022 | 6:38 PM

Share

ಬಿಹಾರದಲ್ಲಿ ಜೆಡಿ-ಯು ಮತ್ತು ಬಿಜೆಪಿ ಮೈತ್ರಿಯಾಗಿ ಸರ್ಕಾರ ರಚನೆ ಮಾಡಿದ್ದು, ಇದೀಗ ಈ ಎರಡು ಪಕ್ಷಗಳ ನಡುವಿನ ಜಟಾಪಟಿ ಹೆಚ್ಚುತ್ತಿದೆ. ಬಿಹಾರ ಮುಖ್ಯಮಂತ್ರಿ  ನಿತೀಶ್​ ಕುಮಾರ್( Bihar Chief Minister Nitish Kumar)​ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಸಂಸದ ಛೆಡಿ ಪಾಸ್ವಾನ್​, ನಿತೀಶ್​ ಕುಮಾರ್​ ಅವರು ಮುಖ್ಯಮಂತ್ರಿ ಹುದ್ದೆಗಾಗಿ ಭೂಗತ ಪಾತಕಿ ದಾವೂದ್​ ಇಬ್ರಾಹಿಂ ಜತೆಗೂ ಕೈ ಜೋಡಿಸಬಹುದು ಎಂದು ಆರೋಪಿಸಿದ್ದಾರೆ.  ಅಷ್ಟೇ ಅಲ್ಲ, ಬಿಜೆಪಿ ವರಿಷ್ಠರು ಮುಖ್ಯಮಂತ್ರಿ ಹುದ್ದೆಯನ್ನು ನಿತೀಶ್​ ಕುಮಾರ್​ಗೆ ಕೊಟ್ಟು ಬಹುದೊಡ್ಡ ಪ್ರಮಾದ ಎಸಗಿದ್ದಾರೆ. ಬಿಹಾರದಲ್ಲಿ ಬಿಜೆಪಿ ಸಂಸದರು, ಶಾಸಕರು, ಎಂಎಲ್​ಸಿಗಳು, ಕಾರ್ಯಕರ್ತರಿಗೆ ಬೆಲೆಯೇ ಇಲ್ಲದಂತಾಗಿದೆ ಎಂದು ಹೇಳಿದ್ದಾರೆ.  

ನಿತೀಶ್ ಕುಮಾರ್ ಮತ್ತು ಅವರ ಪಕ್ಷದವರು  ಬಿಜೆಪಿಗರಿಗೆ ಬ್ಲ್ಯಾಕ್​ಮೇಲ್ ಮಾಡಲು, ಲಾಭ ಪಡೆಯಲು ವಿವಾದಾತ್ಮಕ ವಿಚಾರಗಳನ್ನು ಪ್ರಸ್ತಾಪ ಮಾಡುತ್ತಿದ್ದಾರೆ. ಇನ್ನಾದರೂ ಬಿಜೆಪಿ ವರಿಷ್ಠರು ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಜಾತಿ ಆಧಾರಿತ ಜನಗಣತಿ ನಡೆಸಬೇಕು ಎಂಬ ನಿತೀಶ್ ಕುಮಾರ್ ಬೇಡಿಕೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ ಬಳಿಕವೂ ಕೂಡ ಅವರ ಪಕ್ಷದವರು ಮತ್ತೆಮತ್ತೆ ಅದನ್ನೇ ಹೇಳುತ್ತಿದ್ದಾರೆ ಎಂದು ಪಾಸ್ವಾನ್​ ಆರೋಪಿಸಿದ್ದಾರೆ.

2020ರ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ ಸ್ಪರ್ಧಿಸಬೇಕು ಎಂದು ನಾವು ಹೇಳಿದ್ದೆವು. ಆದರೆ ನಮ್ಮ ಪಕ್ಷದ ವರಿಷ್ಠರು ಅದನ್ನು ತಿರಸ್ಕರಿಸಿದರು. ಇನ್ನು ಮುಂದೆ ಒಮ್ಮೆ ಮೈತ್ರಿ ಮಾಡಿಕೊಂಡೇ ಸ್ಪರ್ಧಿಸಿದರೂ, ಮುಖ್ಯಮಂತ್ರಿ ಹುದ್ದೆ ಎರಡೂ ಪಕ್ಷಗಳವರಿಗೆ ಎರಡೂವರೆ ವರ್ಷದ ಅವಧಿಗೆ ಸಿಗಲಿ ಎಂಬ ವಿನಂತಿಯನ್ನು ಮುಂದಿಡುತ್ತೇವೆ. ಅದರಂತೆ  ಜೆಡಿಯು ಎರಡೂವರೆ ವರ್ಷ ಮುಖ್ಯಮಂತ್ರಿ ಹುದ್ದೆ ನಿಭಾಯಿಸಿದೆ. ಹೀಗಾಗಿ ಮುಂದಿನ ಅವಧಿಗೆ ಬಿಜೆಪಿಯಿಂದ ಯಾರನ್ನಾದರೂ ನೇಮಕ ಮಾಡಬೇಕು ಎಂದು ಛೆಡಿ ಪಾಸ್ವಾನ್ ಆಗ್ರಹಿಸಿದರು.

ಇದನ್ನೂ ಓದಿ: ಭಾರತವೀಗ ತನ್ನ ವೈವಿಧ್ಯತೆಯನ್ನು ಸಂಭ್ರಮಿಸುವ ರಾಷ್ಟ್ರವಾಗಿ ಉಳಿದಿಲ್ಲ, ಮುಸ್ಲಿಮರ ಮೇಲಿನ ದ್ವೇಷ ಸಾಮಾನ್ಯವಾಗಿಬಿಟ್ಟಿದೆ: ಒಮರ್ ಅಬ್ದುಲ್ಲಾ

Published On - 8:51 am, Tue, 8 February 22

ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ