AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿತೀಶ್​ ಕುಮಾರ್​ ಸಿಎಂ ಹುದ್ದೆಗಾಗಿ ದಾವೂದ್​ ಇಬ್ರಾಹಿಂ ಜತೆ ಬೇಕಾದರೂ ಕೈಜೋಡಿಸುತ್ತಾರೆ: ಬಿಜೆಪಿ ಸಂಸದನಿಂದ ಆರೋಪ

2020ರ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ ಸ್ಪರ್ಧಿಸಬೇಕು ಎಂದು ನಾವು ಹೇಳಿದ್ದೆವು. ಆದರೆ ನಮ್ಮ ಪಕ್ಷದ ವರಿಷ್ಠರು ಅದನ್ನು ತಿರಸ್ಕರಿಸಿದರು ಎಂದು

ನಿತೀಶ್​ ಕುಮಾರ್​ ಸಿಎಂ ಹುದ್ದೆಗಾಗಿ ದಾವೂದ್​ ಇಬ್ರಾಹಿಂ ಜತೆ ಬೇಕಾದರೂ ಕೈಜೋಡಿಸುತ್ತಾರೆ: ಬಿಜೆಪಿ ಸಂಸದನಿಂದ ಆರೋಪ
ನಿತೀಶ್ ಕುಮಾರ್
TV9 Web
| Edited By: |

Updated on:Feb 08, 2022 | 6:38 PM

Share

ಬಿಹಾರದಲ್ಲಿ ಜೆಡಿ-ಯು ಮತ್ತು ಬಿಜೆಪಿ ಮೈತ್ರಿಯಾಗಿ ಸರ್ಕಾರ ರಚನೆ ಮಾಡಿದ್ದು, ಇದೀಗ ಈ ಎರಡು ಪಕ್ಷಗಳ ನಡುವಿನ ಜಟಾಪಟಿ ಹೆಚ್ಚುತ್ತಿದೆ. ಬಿಹಾರ ಮುಖ್ಯಮಂತ್ರಿ  ನಿತೀಶ್​ ಕುಮಾರ್( Bihar Chief Minister Nitish Kumar)​ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಸಂಸದ ಛೆಡಿ ಪಾಸ್ವಾನ್​, ನಿತೀಶ್​ ಕುಮಾರ್​ ಅವರು ಮುಖ್ಯಮಂತ್ರಿ ಹುದ್ದೆಗಾಗಿ ಭೂಗತ ಪಾತಕಿ ದಾವೂದ್​ ಇಬ್ರಾಹಿಂ ಜತೆಗೂ ಕೈ ಜೋಡಿಸಬಹುದು ಎಂದು ಆರೋಪಿಸಿದ್ದಾರೆ.  ಅಷ್ಟೇ ಅಲ್ಲ, ಬಿಜೆಪಿ ವರಿಷ್ಠರು ಮುಖ್ಯಮಂತ್ರಿ ಹುದ್ದೆಯನ್ನು ನಿತೀಶ್​ ಕುಮಾರ್​ಗೆ ಕೊಟ್ಟು ಬಹುದೊಡ್ಡ ಪ್ರಮಾದ ಎಸಗಿದ್ದಾರೆ. ಬಿಹಾರದಲ್ಲಿ ಬಿಜೆಪಿ ಸಂಸದರು, ಶಾಸಕರು, ಎಂಎಲ್​ಸಿಗಳು, ಕಾರ್ಯಕರ್ತರಿಗೆ ಬೆಲೆಯೇ ಇಲ್ಲದಂತಾಗಿದೆ ಎಂದು ಹೇಳಿದ್ದಾರೆ.  

ನಿತೀಶ್ ಕುಮಾರ್ ಮತ್ತು ಅವರ ಪಕ್ಷದವರು  ಬಿಜೆಪಿಗರಿಗೆ ಬ್ಲ್ಯಾಕ್​ಮೇಲ್ ಮಾಡಲು, ಲಾಭ ಪಡೆಯಲು ವಿವಾದಾತ್ಮಕ ವಿಚಾರಗಳನ್ನು ಪ್ರಸ್ತಾಪ ಮಾಡುತ್ತಿದ್ದಾರೆ. ಇನ್ನಾದರೂ ಬಿಜೆಪಿ ವರಿಷ್ಠರು ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಜಾತಿ ಆಧಾರಿತ ಜನಗಣತಿ ನಡೆಸಬೇಕು ಎಂಬ ನಿತೀಶ್ ಕುಮಾರ್ ಬೇಡಿಕೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ ಬಳಿಕವೂ ಕೂಡ ಅವರ ಪಕ್ಷದವರು ಮತ್ತೆಮತ್ತೆ ಅದನ್ನೇ ಹೇಳುತ್ತಿದ್ದಾರೆ ಎಂದು ಪಾಸ್ವಾನ್​ ಆರೋಪಿಸಿದ್ದಾರೆ.

2020ರ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ ಸ್ಪರ್ಧಿಸಬೇಕು ಎಂದು ನಾವು ಹೇಳಿದ್ದೆವು. ಆದರೆ ನಮ್ಮ ಪಕ್ಷದ ವರಿಷ್ಠರು ಅದನ್ನು ತಿರಸ್ಕರಿಸಿದರು. ಇನ್ನು ಮುಂದೆ ಒಮ್ಮೆ ಮೈತ್ರಿ ಮಾಡಿಕೊಂಡೇ ಸ್ಪರ್ಧಿಸಿದರೂ, ಮುಖ್ಯಮಂತ್ರಿ ಹುದ್ದೆ ಎರಡೂ ಪಕ್ಷಗಳವರಿಗೆ ಎರಡೂವರೆ ವರ್ಷದ ಅವಧಿಗೆ ಸಿಗಲಿ ಎಂಬ ವಿನಂತಿಯನ್ನು ಮುಂದಿಡುತ್ತೇವೆ. ಅದರಂತೆ  ಜೆಡಿಯು ಎರಡೂವರೆ ವರ್ಷ ಮುಖ್ಯಮಂತ್ರಿ ಹುದ್ದೆ ನಿಭಾಯಿಸಿದೆ. ಹೀಗಾಗಿ ಮುಂದಿನ ಅವಧಿಗೆ ಬಿಜೆಪಿಯಿಂದ ಯಾರನ್ನಾದರೂ ನೇಮಕ ಮಾಡಬೇಕು ಎಂದು ಛೆಡಿ ಪಾಸ್ವಾನ್ ಆಗ್ರಹಿಸಿದರು.

ಇದನ್ನೂ ಓದಿ: ಭಾರತವೀಗ ತನ್ನ ವೈವಿಧ್ಯತೆಯನ್ನು ಸಂಭ್ರಮಿಸುವ ರಾಷ್ಟ್ರವಾಗಿ ಉಳಿದಿಲ್ಲ, ಮುಸ್ಲಿಮರ ಮೇಲಿನ ದ್ವೇಷ ಸಾಮಾನ್ಯವಾಗಿಬಿಟ್ಟಿದೆ: ಒಮರ್ ಅಬ್ದುಲ್ಲಾ

Published On - 8:51 am, Tue, 8 February 22

Follow Us
ರಾಯಚೂರಲ್ಲಿ ಪೊಲೀಸ್ ಶ್ವಾನಗಳಿಗೆ ಫ್ಯಾನ್, ಏರ್ ಕೂಲರ್​ ವ್ಯವಸ್ಥೆ
ರಾಯಚೂರಲ್ಲಿ ಪೊಲೀಸ್ ಶ್ವಾನಗಳಿಗೆ ಫ್ಯಾನ್, ಏರ್ ಕೂಲರ್​ ವ್ಯವಸ್ಥೆ
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು: ದಂಧೆಕೋರರಿಗೆ ಬಿಗ್​​ ಶಾಕ್​​
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು: ದಂಧೆಕೋರರಿಗೆ ಬಿಗ್​​ ಶಾಕ್​​
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?