AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ರಾಹುಲ್ ಗಾಂಧಿ, ಹೆಚ್​ಡಿ ಕುಮಾರಸ್ವಾಮಿಯನ್ನು ಭೇಟಿ ಮಾಡಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್

ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ದೇಶದ ಪ್ರಸ್ತುತ ರಾಜಕೀಯ ಪರಿಸ್ಥಿತಿ ಮತ್ತು ಪ್ರತಿಪಕ್ಷಗಳ ಏಕತೆಯನ್ನು ಖಚಿತಪಡಿಸಿಕೊಳ್ಳುವ ಮಾರ್ಗಗಳ ಬಗ್ಗೆ ಇಬ್ಬರೂ ಚರ್ಚಿಸಿದ್ದಾರೆ.

ದೆಹಲಿಯಲ್ಲಿ ರಾಹುಲ್ ಗಾಂಧಿ, ಹೆಚ್​ಡಿ ಕುಮಾರಸ್ವಾಮಿಯನ್ನು ಭೇಟಿ ಮಾಡಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್
ಜೆಡಿಯು ನಾಯಕ ನಿತೀಶ್ ಕುಮಾರ್Image Credit source: PTI
TV9 Web
| Edited By: |

Updated on:Sep 05, 2022 | 9:18 PM

Share

ದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ವಿಪಕ್ಷಗಳ ಬಳಿ ಒಗ್ಗಟ್ಟಿನ ಮಂತ್ರ ಜಮಿಸುತ್ತಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್(Nitish kumar) ಸೋಮವಾರ ದಿಲ್ಲಿ ತಲುಪಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಅವರನ್ನು ಭೇಟಿ ಮಾಡಿ ದೇಶದ ಪ್ರಸ್ತುತ ರಾಜಕೀಯ ಪರಿಸ್ಥಿತಿ ಮತ್ತು ಪ್ರತಿಪಕ್ಷಗಳ ಏಕತೆಯನ್ನು ಖಚಿತಪಡಿಸಿಕೊಳ್ಳುವ ಮಾರ್ಗಗಳ ಬಗ್ಗೆ ಇಬ್ಬರೂ ಚರ್ಚಿಸಿದ್ದಾರೆ.

ಬಿಹಾರ ಸಿಎಂ ನಿತೀಶ್, ಮಾಜಿ ಸಿಎಂ ಕುಮಾರಸ್ವಾಮಿ ಭೇಟಿ

ನಿತೀಶ್ ಕುಮಾರ್ ಅವರ ದೆಹಲಿ ಪ್ರವಾಸದಲ್ಲಿ ಅವರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಲಾಲನ್ ಸಿಂಗ್ ಮತ್ತು ರಾಜ್ಯ ಸಚಿವರಾದ ಸಂಜಯ್ ಝಾ ಮತ್ತು ಅಶೋಕ್ ಚೌಧರಿ ಸಾಥ್ ನೀಡಿದ್ದಾರೆ. ಇದರ ನಡುವೆ ದೆಹಲಿಯಲ್ಲಿರುವ ಹೆಚ್.ಡಿ.ದೇವೇಗೌಡರ ನಿವಾಸದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಬಿಹಾರ ಸಿಎಂ ನಿತೀಶ್ ಅವರನ್ನು ಭೇಟಿ ಮಾಡಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದ್ದಾರೆ. ಭೇಟಿ ವೇಳೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಉಪಸ್ಥಿತರಿದ್ದರು.

ಇನ್ನು ನಿತೀಶ್ ಕುಮಾರ್ ಭೇಟಿ ಬಳಿಕ ಮಾತನಾಡಿದ ಹೆಚ್​ಡಿ ಕುಮಾರಸ್ವಾಮಿ, ಜನತಾ ಪರಿವಾರ ಮತ್ತೆ ಒಗ್ಗೂಡಬೇಕೆಂದು ಎಲ್ಲರ ಆಶಯವಾಗಿದೆ. ದೇಶ, ರಾಜ್ಯಗಳಲ್ಲಿನ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ ನಡೆಸಿದ್ದೇವೆ. ಜಯಪ್ರಕಾಶ ನಾರಾಯಣರವರ ಆಂದೋಲದಿಂದ ಅಂದು ಆರಂಭವಾಗಿದ್ದ ಜನತಾ ಪಾರ್ಟಿ ಒಡೆದು ಹೋಗಿದೆ. ಜನತಾ ಪರಿವಾರ ಒಂದಾಗುವ ಬಗ್ಗೆ ಪ್ರಾಥಮಿಕ ಹಂತದ ಚರ್ಚೆ ನಡೆದಿದೆ. ಪ್ರಾರಂಭಿಕ ಹಂತವಾಗಿ ನಿತೀಶ್​ ಕುಮಾರ್ ಭೇಟಿಯಾಗಿ ಚರ್ಚಿಸಿದ್ದೇನೆ. ದೇಶವನ್ನು ರಕ್ಷಣೆ ಮಾಡುವ ದೃಷ್ಟಿಯಿಂದ ಒಗ್ಗೂಡುವುದು ಒಳ್ಳೆಯದು ಎಂದರು.

ನಿತೀಶ್ ಕುಮಾರ್ ಅವರು ಮಂಗಳವಾರ ದೆಹಲಿಯಲ್ಲಿ ಕೇಜ್ರಿವಾಲ್, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಎಡಪಕ್ಷಗಳ ನಾಯಕರಾದ ಡಿ ರಾಜಾ ಮತ್ತು ಸೀತಾರಾಮ್ ಯೆಚೂರಿ ಮತ್ತು ಇತರರನ್ನು ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬುಧವಾರ ರಾಷ್ಟ್ರಪತಿ ಹಾಗೂ ಉಪಾಧ್ಯಕ್ಷರನ್ನು ಭೇಟಿ ಮಾಡಲಿದ್ದಾರೆ. ಜೊತೆಗೆ ಶೀಘ್ರದಲ್ಲೇ ಮಹಾರಾಷ್ಟ್ರ, ಹರಿಯಾಣ ಮತ್ತು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ವಿರೋಧ ಪಕ್ಷದ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಿತೀಶ್ ಕುಮಾರ್ ಬಿಹಾರದಲ್ಲಿ ಎನ್‌ಡಿಎಯಿಂದ ಹೊರನಡೆದ ನಂತರ ಮತ್ತು ಆರ್‌ಜೆಡಿ, ಕಾಂಗ್ರೆಸ್ ಮತ್ತು ಎಡಪಕ್ಷಗಳ ಬೆಂಬಲದೊಂದಿಗೆ ಮಹಾಘಟಬಂಧನ್ ಸರ್ಕಾರವನ್ನು ರಚಿಸಿದ ನಂತರ ಇದು ಉಭಯ ನಾಯಕರ ನಡುವಿನ ಮೊದಲ ಭೇಟಿಯಾಗಿದೆ.

ರಾಷ್ಟ್ರದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:59 pm, Mon, 5 September 22

ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ