AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದಲ್ಲಿ ಹೊಸ ರಾಜಕೀಯ ಸಂಚಲನ: ಎನ್​ಡಿಎ ಬಿಟ್ಟುಹೋಗಿದ್ದ ಉಪೇಂದ್ರ ಕುಶ್ವಾಹಾ ಜೊತೆ ನಿತೀಶ್​ ಚರ್ಚೆ

ನಿತೀಶ್​ ಕುಮಾರ್​ರ ವೈಯಕ್ತಿಕ ವಿಚಾರ ಇಟ್ಟುಕೊಂಡು ಟೀಕಿಸಿದ್ದ ತೇಜಸ್ವಿ ಯಾದವ್​ ವಿರುದ್ಧ ಉಪೇಂದ್ರ ಕುಶ್ವಾಹಾ ವಾಗ್ದಾಳಿ ನಡೆಸಿದ್ದರು. ತಮ್ಮ ಪರ ಮಾತನಾಡಿದ ಉಪೇಂದ್ರ ಕುಶ್ವಾಹಾ ಬಗ್ಗೆ ನಿತೀಶ್​ ಕುಮಾರ್ ಸಂತೋಷ ವ್ಯಕ್ತಪಡಿಸಿದ್ದರು.

ಬಿಹಾರದಲ್ಲಿ ಹೊಸ ರಾಜಕೀಯ ಸಂಚಲನ: ಎನ್​ಡಿಎ ಬಿಟ್ಟುಹೋಗಿದ್ದ ಉಪೇಂದ್ರ ಕುಶ್ವಾಹಾ ಜೊತೆ ನಿತೀಶ್​ ಚರ್ಚೆ
ನಿತೀಶ್​ ಕುಮಾರ್​ ಮತ್ತು ಉಪೇಂದ್ರ ಕುಶ್ವಾಹಾ
Lakshmi Hegde
|

Updated on:Dec 06, 2020 | 11:39 AM

Share

ಪಾಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ RLSP (ರಾಷ್ಟ್ರೀಯ ಲೋಕ ಸಮತಾ ಪಾರ್ಟಿ) ಮುಖ್ಯಸ್ಥ ಉಪೇಂದ್ರ ಕುಶ್ವಾಹಾ ಪಾಟ್ನಾದಲ್ಲಿ ಭೇಟಿಯಾಗಿ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದಾರೆ. ಇವರಿಬ್ಬರೂ ಭೇಟಿಯಾಗಿದ್ದನ್ನು RLSP ವಕ್ತಾರ ಭೋಲಾ ಶರ್ಮಾ ದೃಢಪಡಿಸಿದ್ದಾರೆ.

ಮೊದಲು ಎನ್​ಡಿಎ ಒಕ್ಕೂಟದಲ್ಲೇ ಇದ್ದ ಆರ್​ಎಲ್​ಎಸ್​ಪಿ 2018ರಲ್ಲಿಯೇ ಮೈತ್ರಿಯಿಂದ ಹೊರಬಿದ್ದಿತ್ತು. 2019ರ ಲೋಕಸಭಾ ಚುನಾವಣೆಯಲ್ಲಿ RLSPಗೆ ಎರಡಕ್ಕಿಂತ ಜಾಸ್ತಿ ಸ್ಥಾನ ಕೊಡಲು ಸಾಧ್ಯವಿಲ್ಲ ಎಂದು ಬಿಜೆಪಿ ಪ್ರತಿಪಾದಿಸಿತ್ತು. ಆಗ ತೀವ್ರ ಅಸಮಾಧಾನಗೊಂಡಿದ್ದ ಉಪೇಂದ್ರ ಕುಶ್ವಾಹಾ,​ ಬಿಹಾರದ ಮುಖ್ಯಮಂತ್ರಿ ನಿತೀಶ್​ ಕುಮಾರ್ ವಿರುದ್ಧ ಕೂಡ ಬೇಸರ ವ್ಯಕ್ತಪಡಿಸಿದ್ದರು. ಜೆಡಿಯು ಎನ್​ಡಿಎ ಒಕ್ಕೂಟಕ್ಕೆ ಸೇರಿದ ಮೇಲೆ, ಆ ಪಕ್ಷಕ್ಕೇ ಜಾಸ್ತಿ ಮಹತ್ವ ನೀಡಲಾಗುತ್ತಿದೆ ಎಂದು ಆಪಾದಿಸಿದ್ದರು. ಆ ಸಮಯದಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆಯ ರಾಜ್ಯ ಸಚಿವರಾಗಿದ್ದ ಕುಶ್ವಾಹಾ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಎನ್​ಡಿಎ ಒಕ್ಕೂಟದಿಂದ ಬೇರೆಯಾಗಿದ್ದರು.

ಇದೀಗ ಎನ್​ಡಿಎಯೊಟ್ಟಿಗೇ ಇದ್ದು, ಬಿಹಾರದಲ್ಲಿ ಈ ಬಾರಿಯೂ ಗೆದ್ದಿರುವ ಮುಖ್ಯಮಂತ್ರಿ ನಿತೀಶ್​ ಕುಮಾರ್​ರನ್ನು ಉಪೇಂದ್ರ ಕುಶ್ವಾಹಾ ಭೇಟಿಯಾಗಿದ್ದು, ರಾಜಕೀಯ ಸಮೀಕರಣಕ್ಕೆ ನಾಂದಿಯಾಗುತ್ತಿದೆಯಾ ಎಂಬುದೊಂದು ಚರ್ಚೆ ಎದ್ದಿದೆ. ಹೀಗಿರುವಾಗ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ವಕ್ತಾರ ಭೋಲಾ ಶರ್ಮಾ, ಈ ಹಿಂದೆ ನಿತೀಶ್​ ಕುಮಾರ್​ ಮತ್ತು ಉಪೇಂದ್ರ ಕುಶ್ವಾಹಾ ಎನ್​ಡಿಎ ಸರ್ಕಾರದಲ್ಲಿ ಒಟ್ಟಿಗೇ ಕೆಲಸ ಮಾಡಿದ್ದಾರೆ. ಇವರಿಬ್ಬರೂ ಬಿಹಾರ ಜನರ ಕಲ್ಯಾಣ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಶ್ರಮಿಸಿದವರು. ಗುರುವಾರ ಇಬ್ಬರೂ ಮುಖಂಡರು ಭೇಟಿಯಾಗಿ ಮಾತುಕತೆ ನಡೆಸಿದ್ದು, ರಾಜಕೀಯ ಸಮೀಕರಣಕ್ಕೆ ಕಾರಣ ಆಗಬಹುದು. ನಮಗಂತೂ ಎನ್​ಡಿಎಯೊಂದಿಗೆ ಯಾವುದೇ ಕಟ್ಟುಪಾಡು ಇಲ್ಲ ಎಂದು ತಿಳಿಸಿದ್ದಾರೆ. ಹಾಗಂತ, ಜೆಡಿಯು ಪಕ್ಷದೊಂದಿಗೆ RLSP ವಿಲೀನಗೊಳ್ಳಲಿದೆಯಾ ಎಂಬ ಪ್ರಶ್ನೆಗೆ, ಅದು ಸಾಧ್ಯವಿಲ್ಲ. ಹಾಗೇನೂ ಆಗುವುದಿಲ್ಲ ಎಂದು ಹೇಳಿದರು.

ಖುಷಿಯಾಗಿದ್ರು ಸಿಎಂ ಬಿಹಾರ ವಿಧಾನಸಭೆ ಅಧಿವೇಶನದ ಕೊನೇದಿನ ನವೆಂಬರ್​ 27ರಂದು ನಿತೀಶ್​ ಕುಮಾರ್​ ಮತ್ತು ಆರ್​ಜೆಡಿ ನಾಯಕ ತೇಜಸ್ವಿ ಯಾದವ್​ ನಡುವೆ ಪರಸ್ಪರ ಟೀಕಾಪ್ರಹಾರ ನಡೆದಿತ್ತು. ಅಂದು ಮುಖ್ಯಮಂತ್ರಿಯನ್ನು ವೈಯಕ್ತಿಕ ವಿಚಾರ ಇಟ್ಟುಕೊಂಡು ಟೀಕಿಸಿದ್ದ ತೇಜಸ್ವಿ ಯಾದವ್​ ವಿರುದ್ಧ ಉಪೇಂದ್ರ ಕುಶ್ವಾಹಾ ವಾಗ್ದಾಳಿ ನಡೆಸಿದ್ದರು. ಮುಖ್ಯಮಂತ್ರಿ ವಿರುದ್ಧ ಮಾತಾಡಿದ್ದು ಸರಿಯಲ್ಲ ಎಂದು ಹೇಳಿದ್ದರು. ತಮ್ಮ ಪರ ಮಾತನಾಡಿದ ಉಪೇಂದ್ರ ಕುಶ್ವಾಹಾ ಬಗ್ಗೆ ನಿತೀಶ್​ ಕುಮಾರ್ ಸಂತೋಷ ವ್ಯಕ್ತಪಡಿಸಿದ್ದರು. ಅದರ ಬೆನ್ನಲ್ಲೇ ಇವರಿಬ್ಬರ ಭೇಟಿಯೂ ಆಗಿದೆ.

‘ದೇವೇಗೌಡರ ಮಾತು ಕೇಳಿ ಕಾಂಗ್ರೆಸ್ ಸಹವಾಸ ಮಾಡಿದ್ದು ತಪ್ಪಾಯ್ತು.. BJP ಯಲ್ಲಿ ಇದ್ದಿದ್ರೆ ಈಗ ನಾನೇ CM ಆಗಿರ್ತಿದ್ದೆ..’

ಅಮಿತ್ ‘ಪಟೇಲ್’ ಶಾ ಆದ GHMC ಚುನಾವಣೆ

Published On - 11:39 am, Sun, 6 December 20

Follow Us
Lakshmi Hegde
Lakshmi Hegde
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು