AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nitish Kumar: ರಾಹುಲ್ ಗಾಂಧಿ, ಅರವಿಂದ ಕೇಜ್ರಿವಾಲ್ ಭೇಟಿಯಾದ ನಿತೀಶ್ ಕುಮಾರ್; ಪ್ರತಿಪಕ್ಷಗಳ ಒಗ್ಗೂಡಿಸುವ ಹೊಣೆ

ದೆಹಲಿ ಮುಖ್ಯಮಂತ್ರಿ, ಎಎಪಿ ವರಿಷ್ಠ ಅರವಿಂದ ಕೇಜ್ರಿವಾಲ್ ಅವರು ಬುಧವಾರ ದೆಹಲಿಯಲ್ಲಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

Nitish Kumar: ರಾಹುಲ್ ಗಾಂಧಿ, ಅರವಿಂದ ಕೇಜ್ರಿವಾಲ್ ಭೇಟಿಯಾದ ನಿತೀಶ್ ಕುಮಾರ್; ಪ್ರತಿಪಕ್ಷಗಳ ಒಗ್ಗೂಡಿಸುವ ಹೊಣೆ
ನಿತೀಶ್ ಕುಮಾರ್ ಮತ್ತು ಅರವಿಂದ ಕೇಜ್ರಿವಾಲ್
Ganapathi Sharma
|

Updated on: Apr 12, 2023 | 9:32 PM

Share

ನವದೆಹಲಿ: ದೆಹಲಿ ಮುಖ್ಯಮಂತ್ರಿ, ಎಎಪಿ ವರಿಷ್ಠ ಅರವಿಂದ ಕೇಜ್ರಿವಾಲ್ (Arvind Kejriwal) ಅವರು ಬುಧವಾರ ದೆಹಲಿಯಲ್ಲಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಮತ್ತು ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ವೇಳೆ, ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯನ್ನು ಎದುರಿಸಲು ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಬಗ್ಗೆ ಮಾತುಕತೆ ನಡೆಯಿತು. ನಿತೀಶ್ ಅವರು ಎಲ್ಲಾ ವಿರೋಧ ಪಕ್ಷಗಳನ್ನು ಒಂದೇ ಸೂರಿನಡಿ ಒಟ್ಟುಗೂಡಿಸುವ ಉತ್ತಮ ಕ್ರಮ ಕೈಗೊಳ್ಳುತ್ತಿದ್ದಾರೆ. ನಾವು ಕೂಡ ಇದರಲ್ಲಿ ಕೈಜೋಡಿಸಲಿದ್ದೇವೆ ಎಂದು ಮಾತುಕತೆ ಬಳಿಕ ಕೇಜ್ರಿವಾಲ್ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ದೇಶ ಅತ್ಯಂತ ಕಷ್ಟದ ಕಾಲವನ್ನು ಎದುರಿಸುತ್ತಿದೆ. ಕೇಂದ್ರದಲ್ಲಿ ಅತ್ಯಂತ ಭ್ರಷ್ಟ ಸರ್ಕಾರವಿದೆ ಎಂದು ನಾನು ಹಲವು ಬಾರಿ ಹೇಳಿದ್ದೇನೆ ಎಂದು ಕೇಜ್ರಿವಾಲ್ ಟೀಕಿಸಿದರು.

ಇದಕ್ಕೂ ಮುನ್ನ ಲಾಲು ಪ್ರಸಾದ್ ಯಾದವ್ ಅವರನ್ನು ನಿತೀಶ್ ಭೇಟಿ ಮಾಡಿದ್ದರು. ಜತೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದರು. ನಿತೀಶ್ ಅವರ ದೆಹಲಿ ಭೇಟಿಯು ಪ್ರತಿಪಕ್ಷಗಳನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಒಂದು ದೊಡ್ಡ ಹೆಜ್ಜೆ ಎಂದೇ ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.

ನಾನು ನಿತೀಶ್ ಜತೆಗಿದ್ದೇನೆ ಎಂದ ಕೇಜ್ರಿ

ಸಭೆಯ ನಂತರ ಮಾತನಾಡಿದ ಕೇಜ್ರಿವಾಲ್, ನಾನು ನಿತೀಶ್ ಕುಮಾರ್ ಜೊತೆಗಿದ್ದೇನೆ. ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ. ಸಾಮಾನ್ಯರಿಗೆ ಖರ್ಚು ಭರಿಸುವುದೇ ಕಷ್ಟವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಎಲ್ಲ ಪ್ರತಿಪಕ್ಷಗಳು ಹಾಗೂ ಇಡೀ ದೇಶ ಒಗ್ಗೂಡಬೇಕಿದೆ. ನಿತೀಶ್ ಕುಮಾರ್ ನೇತೃತ್ವದಲ್ಲಿ ಇದು ನಡೆಯುತ್ತಿದೆ. ನಾವು ಸಂಪೂರ್ಣವಾಗಿ ಅವರೊಂದಿಗೆ ಇದ್ದೇವೆ ಮತ್ತು ಅವರು ಎಲ್ಲರನ್ನು ಸಂಪರ್ಕಿಸುವ ರೀತಿಯಲ್ಲಿ ಅವರಿಗೆ ನೆರವಾಗಲಿದ್ದೇವೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನೂ ಓದಿ: Odisha: ಒಡಿಶಾದ ಝಮು ಜಾತ್ರೆಯಲ್ಲಿ ಕೆಂಡದ ಮೇಲೆ ನಡೆದು ಪ್ರಾರ್ಥನೆ ಸಲ್ಲಿಸಿದ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಜೊತೆಗೂ ನಿತೀಶ್ ಕುಮಾರ್ ಚರ್ಚೆ ನಡೆಸಲಿದ್ದಾರೆ. ಉದ್ಧವ್ ಠಾಕ್ರೆಯಿಂದ ತೊಡಗಿ ಎಂಕೆ ಸ್ಟಾಲಿನ್ ವರೆಗೆ ಹಲವು ನಾಯಕರನ್ನು ಭೇಟಿಯಾಗಲು ನಿತೀಶ್ ಉದ್ದೇಶಿಸಿದ್ದಾರೆ. ಜತೆ ಮಾತನಾಡುವ ಬಗ್ಗೆಯೂ ನಿತೀಶ್​​ಗೆ ರಾಹುಲ್ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​