Nitish Kumar Swearing-In: ಹತ್ತನೇ ಬಾರಿಗೆ ಬಿಹಾರದ ಸಿಎಂ ಆಗಿ ನಿತೀಶ್ ಕುಮಾರ್ ಇಂದು ಪ್ರಮಾಣವಚನ, ಪ್ರಧಾನಿ ಮೋದಿ ಭಾಗಿ
ನಿತೀಶ್ ಕುಮಾರ್ ಇಂದು 10 ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಭಾರಿ ಗೆಲುವಿನ ನಂತರ, ಎನ್ಡಿಎ ಹೊಸ ಸರ್ಕಾರ ರಚಿಸಲಿದೆ. ಇಂದು ಪಾಟ್ನಾದ ಗಾಂಧಿ ಮೈದಾನದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಹಿರಿಯ ಎನ್ಡಿಎ ನಾಯಕರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ಬುಧವಾರ ರಾತ್ರಿ ಪಾಟ್ನಾ ತಲುಪಿದ್ದಾರೆ. ಪ್ರಧಾನಿ ನರೇಂದ್ರ ಇಂದು ಪಾಟ್ನಾ ತಲುಪಲಿದ್ದಾರೆ.

ಪಾಟ್ನಾ,ನವೆಂಬರ್ 20: ಬಿಹಾರ ರಾಜಕೀಯಕ್ಕೆ ಇಂದು ಐತಿಹಾಸಿಕ ದಿನ. ನಿತೀಶ್ ಕುಮಾರ್(Nitish Kumar) 10 ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಎನ್ಡಿಎ ಭರ್ಜರಿ ಗೆಲುವಿನ ನಂತರ, ಪಾಟ್ನಾದ ಐತಿಹಾಸಿಕ ಗಾಂಧಿ ಮೈದಾನವು ಈ ಭವ್ಯ ಪ್ರಮಾಣ ವಚನ ಸಮಾರಂಭಕ್ಕೆ ಸಾಕ್ಷಿಯಾಗಲು ಸಜ್ಜಾಗಿದೆ. ಇಂದು ಬೆಳಗ್ಗೆ 11.30 ಕ್ಕೆ ಸಮಾರಂಭ ಆರಂಭವಾಗಲಿದೆ. ದೇಶಾದ್ಯಂತದ ಹಿರಿಯ ಎನ್ಡಿಎ ನಾಯಕರು ಭಾಗವಹಿಸಲು ಈಗಾಗಲೇ ಪಾಟ್ನಾದಲ್ಲಿ ಜಮಾಯಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಬುಧವಾರ ತಡರಾತ್ರಿ ಪಾಟ್ನಾಕ್ಕೆ ಆಗಮಿಸಿ ಆತ್ಮೀಯ ಸ್ವಾಗತ ಪಡೆದರು. ಪ್ರಧಾನಿ ನರೇಂದ್ರ ಮೋದಿ ಕೂಡ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ, ಬೆಳಗ್ಗೆ 11.15 ಕ್ಕೆ ಗಾಂಧಿ ಮೈದಾನಕ್ಕೆ ಆಗಮಿಸಲಿದ್ದಾರೆ.
ಪ್ರಧಾನಿ ಮೋದಿ ಜೊತೆಗೆ, 11 ರಾಜ್ಯಗಳ ಹಲವಾರು ಕೇಂದ್ರ ಸಚಿವರು ಮತ್ತು ಮುಖ್ಯಮಂತ್ರಿಗಳು ಸಹ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಸೇರಿದಂತೆ 20 ಸಚಿವರು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಮತ್ತಷ್ಟು ಓದಿ: ಹತ್ತನೇ ಬಾರಿಗೆ ಬಿಹಾರ ಸಿಎಂ ಆಗಿ ನಾಳೆ ನಿತೀಶ್ ಕುಮಾರ್ ಪ್ರಮಾಣವಚನ, ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ ಒಟ್ಟು 202 ಸ್ಥಾನಗಳನ್ನು ಗೆದ್ದುಕೊಂಡಿತು. ಬಿಜೆಪಿ 89 ಸ್ಥಾನಗಳನ್ನು ಗೆದ್ದಿತು. ನಿತೀಶ್ ಕುಮಾರ್ ಅವರ ಜನತಾದಳ (ಯುನೈಟೆಡ್) 85 ಸ್ಥಾನಗಳೊಂದಿಗೆ ಎರಡನೇ ಸ್ಥಾನದಲ್ಲಿತ್ತು. ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷ (R) 19 ಸ್ಥಾನಗಳನ್ನು ಗೆದ್ದಿತು. ಹಿಂದೂಸ್ತಾನಿ ಅವಾಮ್ ಮೋರ್ಚಾ (HAM) ಐದು ಸ್ಥಾನಗಳನ್ನು ಗೆದ್ದಿತು ಮತ್ತು ರಾಷ್ಟ್ರೀಯ ಲೋಕ ಮೋರ್ಚಾ ನಾಲ್ಕು ಸ್ಥಾನಗಳನ್ನು ಗೆದ್ದಿತ್ತು.
ನಿತೀಶ್ ಕುಮಾರ್ ಪ್ರಮಾಣವಚನ ಸಮಾರಂಭ ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆಯಲಿದೆ. ನಿತೀಶ್ ಕುಮಾರ್ ನೇತೃತ್ವದ ಈ ಸರ್ಕಾರದಲ್ಲಿ ಹೆಚ್ಚಾಗಿ ಹಳೆಯ ಮುಖಗಳೇ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಬಿಜೆಪಿ ಸಾಮ್ರಾಟ್ ಚೌಧರಿ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಮತ್ತು ವಿಜಯ್ ಕುಮಾರ್ ಸಿನ್ಹಾ ಅವರನ್ನು ಉಪ ನಾಯಕರನ್ನಾಗಿ ಆಯ್ಕೆ ಮಾಡಿರುವುದರಿಂದ ಇಬ್ಬರೂ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸುವುದು ಖಚಿತವಾಗಿದೆ. ಇದಲ್ಲದೆ, ಬಿಜೆಪಿ ತನ್ನ ಸಂಪುಟದಲ್ಲಿ ಹೆಚ್ಚಿನ ಬದಲಾವಣೆಗಳನ್ನು ಮಾಡುವ ಮನಸ್ಥಿತಿಯಲ್ಲಿಲ್ಲ.
ಸಚಿವ ಸಂಪುಟದಲ್ಲಿ ಮುಖಗಳು ಚಿರಾಗ್ ಪಾಸ್ವಾನ್ ಅವರ ಎಲ್ಜೆಪಿ(ಆರ್), ಉಪೇಂದ್ರ ಕುಶ್ವಾಹ ಅವರ ಆರ್ಎಲ್ಎಸ್ಪಿ ಮತ್ತು ಜಿತನ್ ರಾಮ್ ಮಾಂಝಿ ಅವರ ಎಚ್ಎಎಂ. ಪಾಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ನಿತೀಶ್ ಸರ್ಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಹಲವಾರು ಕೇಂದ್ರ ಸಚಿವರು, ಎಲ್ಲಾ ಎನ್ಡಿಎ ಘಟಕಗಳ ಮುಖ್ಯಸ್ಥರು ಮತ್ತು ಎನ್ಡಿಎ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ, ಎನ್ಡಿಎ ತನ್ನ ಬಲವನ್ನು ಪ್ರದರ್ಶಿಸಲು ಇದು ಒಂದು ದೊಡ್ಡ ಅವಕಾಶವಾಗಿದೆ. ಇದಕ್ಕೂ ಮೊದಲು, ಬುಧವಾರ, ಎನ್ಡಿಎ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿತೀಶ್ ಕುಮಾರ್ ಅವರನ್ನು ಸರ್ವಾನುಮತದಿಂದ ನಾಯಕರಾಗಿ ಮರು ಆಯ್ಕೆ ಮಾಡಲಾಯಿತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:31 am, Thu, 20 November 25




