AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನ್ 4ರ ನಂತರ ನಿತೀಶ್ ಕುಮಾರ್ ದೊಡ್ಡ ನಿರ್ಧಾರ; ಭವಿಷ್ಯ ನುಡಿದ ತೇಜಸ್ವಿ ಯಾದವ್

ಜೂನ್ 4ರಂದು ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಲಿದ್ದು, ಇದಾದ ನಂತರ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ "ದೊಡ್ಡ ನಿರ್ಧಾರ" ತೆಗೆದುಕೊಳ್ಳುತ್ತಾರೆ ಎಂದು ತೇಜಸ್ವಿ ಯಾದವ್ ಪ್ರತಿಪಾದಿಸಿದ್ದಾರೆ.

ಜೂನ್ 4ರ ನಂತರ ನಿತೀಶ್ ಕುಮಾರ್ ದೊಡ್ಡ ನಿರ್ಧಾರ; ಭವಿಷ್ಯ ನುಡಿದ ತೇಜಸ್ವಿ ಯಾದವ್
ನಿತೀಶ್ ಕುಮಾರ್
ಸುಷ್ಮಾ ಚಕ್ರೆ
|

Updated on: May 28, 2024 | 8:49 PM

Share

ಪಾಟ್ನಾ: ಲೋಕಸಭೆ ಚುನಾವಣೆ ಫಲಿತಾಂಶದ ನಂತರ ತಮ್ಮ ಮಾಜಿ ಮಿತ್ರ ನಿತೀಶ್ ಕುಮಾರ್ (Nitish Kumar) ಅವರು “ದೊಡ್ಡ ನಿರ್ಧಾರ” ತೆಗೆದುಕೊಳ್ಳುತ್ತಾರೆ ಎಂದು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್ (Tejaswi Yadav) ಇಂದು ಹೇಳಿದ್ದಾರೆ. ಬಿಹಾರ ಮುಖ್ಯಮಂತ್ರಿ ಜೂನ್ 4ರ ನಂತರ ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ತೇಜಸ್ವಿ ಯಾದವ್ ಭವಿಷ್ಯ ನುಡಿದಿದ್ದಾರೆ.

ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ತೇಜಸ್ವಿ ಯಾದವ್, ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ಅಧಿಕಾರಕ್ಕೆ ಬರುವುದಿಲ್ಲ. ಲೋಕಸಭಾ ಚುನಾವಣೆಯ ಫಲಿತಾಂಶದ ನಂತರ ನಮ್ಮ ದೇಶವು ಹೊಸ ಆಡಳಿತವನ್ನು ನೋಡಲಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: PM Narendra Modi: ಚುನಾವಣಾ ಫಲಿತಾಂಶಕ್ಕೂ ಮುನ್ನ ಕನ್ಯಾಕುಮಾರಿಯಲ್ಲಿ ಪ್ರಧಾನಿ ಮೋದಿಯಿಂದ ಧ್ಯಾನ

ಚುನಾವಣೆಯಲ್ಲಿ ಪ್ರಧಾನಿ ಮೋದಿ ಸೋತಿದ್ದಾರೆ. ಜೂನ್ 4ರ ನಂತರ ಅವರು ಪ್ರಧಾನಿಯಾಗುವುದಿಲ್ಲ. ದೇಶವು ಹೊಸ ಸರ್ಕಾರವನ್ನು ಹೊಂದಲಿದೆ ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ.

ನಿತೀಶ್ ಕುಮಾರ್ ಅವರ ಹಠಾತ್ ಯು-ಟರ್ನ್ ಮತ್ತು ಜನವರಿಯಲ್ಲಿ ಎನ್‌ಡಿಎಗೆ ಹಿಂತಿರುಗಿದ ನಂತರ ಉಪ ಮುಖ್ಯಮಂತ್ರಿ ಹುದ್ದೆಯನ್ನು ಕಳೆದುಕೊಂಡಿದ್ದ ತೇಜಸ್ವಿ ಯಾದವ್, ಲೋಕಸಭಾ ಚುನಾವಣೆಯ ಫಲಿತಾಂಶಗಳು ಹೊರಬಂದ ನಂತರ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅಚ್ಚರಿಯ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ: ಸಂಸದ ತೇಜಸ್ವಿ ಸೂರ್ಯ ಭಾವಚಿತ್ರದ ನಕಲಿ ಎಟಿಎಂ ಕಾರ್ಡ್ ವಿತರಿಸಿ ಕಾಂಗ್ರೆಸ್‌ನಿಂದ ವಿನೂತನ ಪ್ರಚಾರ

ನಿತೀಶ್ ಕುಮಾರ್ ಕೇಂದ್ರದಲ್ಲಿ ಎನ್‌ಡಿಎ ಅಧಿಕಾರದಿಂದ ಹೊರಗುಳಿದ ನಂತರ ದೊಡ್ಡ ಹೆಜ್ಜೆ ಇಡಬಹುದು ಎಂದು ಯಾದವ್ ಹೇಳಿದ್ದಾರೆ. ಕೆಲವು ತಿಂಗಳ ಹಿಂದೆ ನಿಮಗೆ ದ್ರೋಹ ಮಾಡಿದ ಜೆಡಿಯು ಮುಖ್ಯಸ್ಥರೊಂದಿಗೆ ನೀವು ಮರು ಹೊಂದಾಣಿಕೆ ಮಾಡಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ತೇಜಸ್ವಿ ಯಾದವ್, ಅವರ ಪಕ್ಷ ಮತ್ತು ಅವರ ಒಬಿಸಿ ಪರ ರಾಜಕೀಯವನ್ನು ಉಳಿಸುವ ಹಿತಾಸಕ್ತಿಯಿಂದ ಅವರ ದೊಡ್ಡ ನಿರ್ಧಾರವನ್ನು ನಾನು ನಿರೀಕ್ಷಿಸುತ್ತೇನೆ ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!