AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Niyaz Khan: ಮುಸ್ಲಿಮರು ಸಸ್ಯಾಹಾರಿಯಾಗಬೇಕು, ಬ್ರಾಹ್ಮಣ ಪರ ನಿಂತ ಐಎಎಸ್ ಅಧಿಕಾರಿ ನಿಯಾಜ್ ಖಾನ್

ಮಧ್ಯಪ್ರದೇಶ ಕೇಡರ್‌ನ ಐಎಎಸ್ ಅಧಿಕಾರಿ ನಿಯಾಜ್ ಖಾನ್ ಭಾರತದಲ್ಲಿ ನಡೆಯುತ್ತಿರುವ ಧಾರ್ಮಿಕ ಮತಾಂತರಕ್ಕೆ ಬಾಲಿವುಡ್ ಕಾರಣ ಎಂದು ಹೇಳಿದ್ದಾರೆ

Niyaz Khan: ಮುಸ್ಲಿಮರು ಸಸ್ಯಾಹಾರಿಯಾಗಬೇಕು, ಬ್ರಾಹ್ಮಣ ಪರ ನಿಂತ ಐಎಎಸ್ ಅಧಿಕಾರಿ ನಿಯಾಜ್ ಖಾನ್
ನಿಯಾಜ್ ಖಾನ್
ಅಕ್ಷಯ್​ ಪಲ್ಲಮಜಲು​​
|

Updated on:Jun 10, 2023 | 2:25 PM

Share

ಭಾರತದಲ್ಲಿ ನಡೆಯುತ್ತಿರುವ ಧಾರ್ಮಿಕ ವಿಚಾರಗಳಿಗೆ ಸಂಬಂಧಿಸಿದಂತೆ ಭಾರತೀಯ ಆಡಳಿತ ಸೇವೆಯ ಅಧಿಕಾರಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಐಎಎಸ್ (IAS) ಅಧಿಕಾರಿ, ನಿಯಾಜ್ ಖಾನ್ (Niyaz Khan) ಅವರು ಸಾಹಿತ್ಯ ಕ್ಷೇತ್ರದಲ್ಲಿ ಹೆಸರುವಾಸಿ, ಅವರು ಭಾರತದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಧಾರ್ಮಿಕ ಮತಾಂತರಗಳ ಬಗ್ಗೆ ಮಾತನಾಡಿದ್ದಾರೆ. ಮಧ್ಯಪ್ರದೇಶ ಕೇಡರ್‌ನ ಐಎಎಸ್ ಅಧಿಕಾರಿ ನಿಯಾಜ್ ಖಾನ್ ಭಾರತದಲ್ಲಿ ನಡೆಯುತ್ತಿರುವ ಧಾರ್ಮಿಕ ಮತಾಂತರಕ್ಕೆ ಬಾಲಿವುಡ್ ಕಾರಣ ಎಂದು ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ANI ಉಲ್ಲೇಖಿಸಿದೆ. ಮತಾಂತರದ ವಿಷಯದ ಬಗ್ಗೆ ನಿಯಾಜ್ ಖಾನ್ ಅವರು ಟ್ವೀಟ್ ಮಾಡಿದ್ದಾರೆ. ಟ್ವಿಟರ್‌ನಲ್ಲಿ ಅವರು ಮುಸ್ಲಿಂ ಬಾಂಧವರು ಹಸುಗಳನ್ನು ಸಾಕಬೇಕು ಮತ್ತು ಸಸ್ಯಾಹಾರವನ್ನು ನಮ್ಮ ಆಹಾರದಲ್ಲಿ ಅಳವಡಿಸಿಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಮುಸ್ಲಿಮೇತರರನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡುವಂತೆ ಒತ್ತಾಯಿಸಬಾರದು ಎಂದು ಹೇಳಿದರು. ಈ ಕುರಿತು ಹಲವು ಟ್ವೀಟ್‌ಗಳನ್ನು ಪೋಸ್ಟ್ ಮಾಡಿದ್ದಾರೆ.

ಐಎಎಸ್ ಅಧಿಕಾರಿ ನಿಯಾಜ್ ಖಾನ್ ಯಾರು?

ನಿಯಾಜ್ ಖಾನ್ ಮಧ್ಯಪ್ರದೇಶ ಕೇಡರ್‌ನ ಐಎಎಸ್ ಅಧಿಕಾರಿ. ಅನೇಕ ಸಂಘಟನೆಗಳು ಮುಸ್ಲಿಂ ಧರ್ಮವನ್ನು ಕೆಟ್ಟದಾಗಿ ಚಿತ್ರಿಸುತ್ತಿದ್ದಾರೆ. ಇಸ್ಲಾಂ ಧರ್ಮದ ಪ್ರತಿಷ್ಠೆಯನ್ನು ಹಾಳು ಮಾಡಿವೆ ಎಂದು ಅವರು ಹೇಳಿದ್ದಾರೆ. ನಿಯಾಜ್ ಖಾನ್ ಹಲವು ಪುಸ್ತಕಗಳನ್ನು ಬರೆದಿದ್ದಾರೆ. ಅನೇಕ ಇಂತಹ ಧರ್ಮ ವಿಚಾರವಾಗಿ ಪುಸ್ತಕಗಳನ್ನು ಬರೆದಿದ್ದಾರೆ. ಕಳೆದ ವರ್ಷ ಕಾಶ್ಮೀರ ಫೈಲ್ಸ್ ಚಿತ್ರದ ಕುರಿತಾದ ಟೀಕೆಯಿಂದ ಅವರ ಬಗ್ಗೆ ಅಕ್ರೋಶ ಕೂಡ ವ್ಯಕ್ತವಾಗಿತ್ತು.

ಈ ಹಿಂದೆ ನಿಯಾಜ್ ಖಾನ್ ತಮ್ಮ ಉಪನಾಮದ ಬಗ್ಗೆ ಟ್ವೀಟ್ ಮಾಡಿದ್ದರು. 2019ರಲ್ಲಿ, ತಮ್ಮ ಹೆಸರಿನಿಂದ ತಮ್ಮ ಸೇವೆಗೂ ಕೂಡ ತೊಂದರೆ ಆಗಿತ್ತು ಎಂದು ಹೇಳಿದ್ದರು. ನನ್ನ ಉಪನಾಮವು ಭೂತದಂತೆ ಕಾಡುತ್ತಿದೆ ಎಂದು ಬರೆದಿದ್ದಾರೆ. ನಿಯಾಜ್ ಖಾನ್ ಅವರು ಹಿಜಾಬ್ ವಿವಾದದ ಬಗ್ಗೆ ತಮ್ಮ ಅಭಿಪ್ರಾಯವನ್ನು ನೀಡಿದರು ಮತ್ತು ಹಿಜಾಬ್ ನಮ್ಮ ಜೀವನವನ್ನು ರಕ್ಷಿಸುತ್ತದೆ ಹಾಗೂ ಮಾಲಿನ್ಯದಿಂದ ನಮ್ಮನ್ನು ರಕ್ಷಿಸುತ್ತದೆ ಎಂದು ಬರೆದಿದ್ದಾರೆ.

ಇದನ್ನೂ ಓದಿ:‘ದಿ ಕಾಶ್ಮೀರ್ ಫೈಲ್ಸ್​​’ನಿಂದ ಬಂದ ಹಣವನ್ನೆಲ್ಲಾ ದಾನ ಮಾಡಿ ಎಂದ ಐಎಎಸ್ ಆಫೀಸರ್; ವಿವೇಕ್ ಅಗ್ನಿಹೋತ್ರಿ ಪ್ರತಿಕ್ರಿಯೆ ಏನು?

ಬ್ರಾಹ್ಮಿನ್ ದಿ ಗ್ರೇಟ್, ಇದು ಬ್ರಾಹ್ಮಣರ ಮೇಲಿನ ಅಭಿಮಾನ

ನಿಯಾಜ್ ಖಾನ್ ಇದುವರೆಗೆ ಎಂಟು ಕಾದಂಬರಿಗಳನ್ನು ಪ್ರಕಟಿಸಿದ್ದಾರೆ. ಅವರ ಇತ್ತೀಚಿನ ಪುಸ್ತಕ ‘ಬ್ರಾಹ್ಮಿನ್ ದಿ ಗ್ರೇಟ್’ ಸಾಕಷ್ಟು ವಿವಾದವನ್ನು ಸೃಷ್ಟಿಸಿತ್ತು. ತಮ್ಮ ಪುಸ್ತಕದಲ್ಲಿ ಬ್ರಾಹ್ಮಣರಿಗೆ ಸೂಪರ್ ಬ್ರೈನ್ ಇದೆ ಎಂದು ಬರೆದಿದ್ದಾರೆ. ಪ್ರತಿಯೊಂದು ಕ್ಷೇತ್ರದಲ್ಲೂ ಬ್ರಾಹ್ಮಣರಿಗೆ ಬೌದ್ಧಿಕ ನಾಯಕತ್ವ ನೀಡಿದರೆ, ಸಲಹೆಗಾರರನ್ನಾಗಿ ಮಾಡಿದರೆ ದೇಶದೊಳಗೆ ಸುಧಾರಣೆ ಸಾಧ್ಯ, ಇದು ಒಂದು ಕ್ರಾಂತಿಕಾರಿ ಬದಲಾವಣೆ ಎಂದು ಈ ಪುಸ್ತಕದಲ್ಲಿ ಹೇಳಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:19 pm, Sat, 10 June 23

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ