AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್​​ನಿಂದ ಬಂದಿರುವ ವೈದ್ಯಕೀಯ ವಿದ್ಯಾರ್ಥಿಗಳಿಗೆ ಎನ್​ಎಂಸಿಯಿಂದ ಗುಡ್​ನ್ಯೂಸ್​; ಇಂಟರ್ನ್​ಶಿಪ್​ ಮಾಡಲು ಅವಕಾಶ

ಇಂಟರ್ನ್​ಶಿಪ್​ಗೆ ಭಾರತದಲ್ಲಿ ನೋಂದಣಿ ಬಯಸುವ ವಿದ್ಯಾರ್ಥಿಗಳು ನ್ಯಾಶನಲ್​ ಬೋರ್ಡ್​ ಆಫ್​ ಎಕ್ಸಾಮಿನೇಶನ್​​ ನಡೆಸುವ ವಿದೇಶಿ ಮೆಡಿಕಲ್​ ಗ್ರಾಜ್ಯುಯೇಟ್​ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರಾ ಎಂಬುದನ್ನು ರಾಜ್ಯ ಮೆಡಿಕಲ್​ ಕೌನ್ಸಿಲ್​ಗಳು ಖಚಿತಪಡಿಸಿಕೊಳ್ಳಬೇಕು.

ಉಕ್ರೇನ್​​ನಿಂದ ಬಂದಿರುವ ವೈದ್ಯಕೀಯ ವಿದ್ಯಾರ್ಥಿಗಳಿಗೆ ಎನ್​ಎಂಸಿಯಿಂದ ಗುಡ್​ನ್ಯೂಸ್​; ಇಂಟರ್ನ್​ಶಿಪ್​ ಮಾಡಲು ಅವಕಾಶ
ಉಕ್ರೇನ್​​ನಿಂದ ಬಂದ ವಿದ್ಯಾರ್ಥಿಗಳು
TV9 Web
| Edited By: |

Updated on: Mar 05, 2022 | 3:57 PM

Share

ಉಕ್ರೇನ್​​ನಿಂದ ವೈದ್ಯಕೀಯ ಶಿಕ್ಷಣ ಅರ್ಧಕ್ಕೆ ನಿಲ್ಲಿಸಿ ಇದೀಗ ಭಾರತಕ್ಕೆ ಬಂದಿರುವ ವಿದ್ಯಾರ್ಥಿಗಳಿಗೆ ಭಾರತದಲ್ಲೇ ಇಂಟರ್ನ್​ಶಿಪ್​ ಮಾಡಲು ರಾಷ್ಟ್ರೀಯ ವೈದ್ಯಕೀಯ ಕಮಿಷನ್​ (ರಾಷ್ಟ್ರೀಯ ವೈದ್ಯಕೀಯ ಆಯೋಗ-NMC) ಅವಕಾಶ ನೀಡಿದೆ. ವೈದ್ಯಕೀಯ ಪದವೀಧರ ವಿದ್ಯಾರ್ಥಿ 12 ತಿಂಗಳು ಇಂಟರ್ನ್​ಶಿಪ್​ ಮಾಡುವುದು ಕಡ್ಡಾಯವಾಗಿರುತ್ತದೆ. ಈಗ ಭಾರತಕ್ಕೆ ಬಂದಿರುವ ವಿದೇಶಿ ವೈದ್ಯಕೀಯ ಪದವೀಧರರು ಇಲ್ಲಿಯೇ ಆ ಇಂಟರ್ನ್​ಶಿಪ್​ ಮಾಡಬಹುದು ಎಂದು ಎನ್​ಎಂಸಿ ತನ್ನ ವೆಬ್​ಸೈಟ್​ http://nmc.org.in. ಯಲ್ಲಿ ಸುತ್ತೋಲೆ ಹೊರಡಿಸಿದೆ. ಉಕ್ರೇನ್​​ನಿಂದ ಭಾರತಕ್ಕೆ ಬಂದ ವಿದೇಶಿ ವೈದ್ಯಕೀಯ ಪದವೀಧರರಲ್ಲಿ ಹಲವರಿಗೆ ಅವರ ಇಂಟರ್ನ್​ಶಿಪ್​ ಪೂರ್ಣಗೊಂಡಿಲ್ಲ. ಕೊವಿಡ್​ 19 ಪರಿಸ್ಥಿತಿ, ಯುದ್ಧಗಳಂಥ ಕಾರಣದಿಂದ ಅವರಿಗೆ ಇಂಟರ್ನ್​ಶಿಪ್​ ಪೂರ್ತಿ ಮಾಡಲು ಸಾಧ್ಯವಾಗಲಿಲ್ಲ. ಈ ವಿಚಾರದಲ್ಲಿ ಅವರು ತುಂಬ ಒತ್ತಡ ಮತ್ತು ಕಷ್ಟ ಅನುಭವಿಸಿದ್ದಾರೆ. ಹೀಗಾಗಿ ಅವರು ತಮ್ಮ ಇಂಟರ್ನ್​ಶಿಪ್​ ಪೂರ್ತಿ ಮುಗಿಸಲು ಭಾರತದಲ್ಲಿ ಅವಕಾಶ ನೀಡಲಾಗುವುದು. ಅವರ ಅರ್ಜಿಯನ್ನು ಅರ್ಹ ಎಂದು ಪರಿಗಣಿಸಲಾಗುವುದು ಎಂದು ಎನ್​ಎಂಸಿ ತನ್ನ ಸುತ್ತೋಲೆಯಲ್ಲಿ ತಿಳಿಸಿದೆ.

ಹೀಗೆ ಇಂಟರ್ನ್​ಶಿಪ್​ಗೆ ಭಾರತದಲ್ಲಿ ನೋಂದಣಿ ಬಯಸುವ ವಿದ್ಯಾರ್ಥಿಗಳು ನ್ಯಾಶನಲ್​ ಬೋರ್ಡ್​ ಆಫ್​ ಎಕ್ಸಾಮಿನೇಶನ್​​ ನಡೆಸುವ ವಿದೇಶಿ ಮೆಡಿಕಲ್​ ಗ್ರಾಜ್ಯುಯೇಟ್​ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರಾ ಎಂಬುದನ್ನು ರಾಜ್ಯ ಮೆಡಿಕಲ್​ ಕೌನ್ಸಿಲ್​ಗಳು ಖಚಿತಪಡಿಸಿಕೊಳ್ಳಬೇಕು. ನೋಂದಣಿಗೆ ಇರುವ ಮಾನದಂಡಗಳನ್ನು ಪೂರೈಸಿರುವ ಅಭ್ಯರ್ಥಿಗೆ 12 ತಿಂಗಳ ಅಥವಾ ಅವರಿಗೆ ಬಾಕಿ ಇರುವ ಅವಧಿಯ ಇಂಟರ್ನ್​ಶಿಪ್​ಗೆ ಅವಕಾಶ ನೀಡಬಹುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಅಷ್ಟೇ ಅಲ್ಲ, ಈ ವಿದ್ಯಾರ್ಥಿಗಳು ಇಂಟರ್ನ್​ಶಿಪ್​ ಪಡೆಯುವ ಕಾಲೇಜು ಇವರಿಂದ ಯಾವುದೇ ಶುಲ್ಕ ಪಡೆದಿಲ್ಲ/ಪಡೆಯುವುದಿಲ್ಲ ಎಂಬುದಕ್ಕೆ ರಾಜ್ಯ ಮೆಡಿಕಲ್ ಕೌನ್ಸಿಲ್​ಗಳು ಆ ಕಾಲೇಜುಗಳಿಂದ ಭರವಸೆ ಪಡೆಯಬೇಕು. ಈ ವಿದೇಶಿ ವೈದ್ಯಕೀಯ ಪದವೀಧರ ವಿದ್ಯಾರ್ಥಿಗಳಿಗೆ, ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ತರಬೇತಿ ಪಡೆಯುತ್ತಿರುವ ಭಾರತೀಯ ವೈದ್ಯಕೀಯ ಪದವೀಧರರಿಗೆ ನೀಡಲಾಗುತ್ತಿರುವಷ್ಟೇ ಸ್ಟೈಫಂಡ್​ ಮತ್ತು ಇತರ ಸೌಲಭ್ಯಗಳನ್ನು ನೀಡಬೇಕು ಎಂದೂ ಎನ್​ಎಂಸಿ ಹೇಳಿದೆ.

ರಷ್ಯಾ-ಉಕ್ರೇನ್ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಅನಿವಾರ್ಯ ಪರಿಸ್ಥಿತಿಯಲ್ಲಿ ಭಾರತಕ್ಕೆ ಹಿಂದಿರುಗಿರುವ ವಿದ್ಯಾರ್ಥಿಗಳಿಗೆ ಇಲ್ಲಿನ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿಯೇ ಪ್ರವೇಶ ಕಲ್ಪಿಸಬೇಕು ಎಂದು ಭಾರತೀಯ ವೈದ್ಯಕೀಯ ಒಕ್ಕೂಟ (ಐಎಂಎ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿತ್ತು. ಸದ್ಯದ ಮಟ್ಟಿಗಂತೂ ಉಕ್ರೇನ್​ ಪರಿಸ್ಥಿತಿ ಸರಿಯಾಗಲಿದೆ ಎಂಬುದು ಅನುಮಾನ. ಇದೀಗ ಬಂದಿರುವ ವಿದ್ಯಾರ್ಥಿಗಳು ಮತ್ತೆ ಅಲ್ಲಿ ಹೋಗಿ ಶಿಕ್ಷಣ ಮುಂದುವರಿಸಲು ಸಾಧ್ಯವೇ ಎಂಬ ಪ್ರಶ್ನೆಗೆ ಉತ್ತರ ಅಸ್ಪಷ್ಟ. ಹೀಗಾಗಿ ವಿದ್ಯಾರ್ಥಿಗಳಿಗೆ ಇಲ್ಲಿಯೇ ಅನುಕೂಲ ಮಾಡಿಕೊಡಬೇಕೆಂಬ ಬೇಡಿಕೆ ಕೇಳಿಬಂದಿತ್ತು.

ಇದನ್ನೂ ಓದಿ: ಉಕ್ರೇನ್​ನಿಂದ ಬಂದ ವಿದ್ಯಾರ್ಥಿಗಳಿಗೆ ಇಲ್ಲಿನ ಮೆಡಿಕಲ್ ಕಾಲೇಜುಗಳಲ್ಲಿ ಪ್ರವೇಶ ಕೊಡಿ: ಐಎಂಎ ಸಲಹೆ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ