AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ಎದೆಯೆತ್ತರ ನಿಂತ ನೀರಿನಲ್ಲಿ ಹೆಗಲ ಮೇಲೆ ಶವ ಹೊತ್ತು ನದಿ ದಾಟಿದ ಗ್ರಾಮಸ್ಥರು

ಅನಾರೋಗ್ಯದಿಂದ ಮೃತಪಟ್ಟ ಸಾಂತಾ ರಾಣಾ ಎಂಬ ವ್ಯಕ್ತಿಯ ಸಂಬಂಧಿಕರು ಅವರ ಮೃತದೇಹವನ್ನು ಎದೆಯ ಎತ್ತರ ನಿಂತಿದ್ದ ನದಿ ನೀರಿನಲ್ಲಿ ಸ್ಮಶಾನದ ಮೈದಾನಕ್ಕೆ ಸಾಗಿಸಿದ್ದಾರೆ.

Viral Photo: ಎದೆಯೆತ್ತರ ನಿಂತ ನೀರಿನಲ್ಲಿ ಹೆಗಲ ಮೇಲೆ ಶವ ಹೊತ್ತು ನದಿ ದಾಟಿದ ಗ್ರಾಮಸ್ಥರು
ಶವವನ್ನು ನದಿಯಲ್ಲಿ ಹೆಗಲ ಮೇಲೆ ಹೊತ್ತು ಸಾಗಿದ ಜನರು
TV9 Web
| Updated By: ಸುಷ್ಮಾ ಚಕ್ರೆ|

Updated on:Aug 12, 2022 | 3:09 PM

Share

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಒಡಿಶಾದ (Odisha Rain) ನದಿಗಳು ಉಕ್ಕಿ ಹರಿಯುತ್ತಿವೆ. ಮಳೆಯಿಂದ ತುಂಬಿ ನಿಂತಿರುವ ಒಡಿಶಾದ ಕಲಹಂಡಿ ಜಿಲ್ಲೆಯ ಗೋಲಮುಂಡಾ ಬ್ಲಾಕ್‌ನಲ್ಲಿರುವ ನದಿಯಲ್ಲಿ ಗ್ರಾಮಸ್ಥರು ಶವವನ್ನು (Dead body) ಹೆಗಲ ಮೇಲೆ ಹೊತ್ತು ಸಾಗುತ್ತಿರುವ ದೃಶ್ಯ ಕಂಡುಬಂದಿತು. ಬೆಹೆರಗುಡ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಅವರ ಅಂತ್ಯಸಂಸ್ಕಾರ (Cremation) ಮಾಡಲು ಗ್ರಾಮಸ್ಥರು ಮಳೆಯಲ್ಲಿ ಪರದಾಡಬೇಕಾಯಿತು. ಕೊನೆಗೆ ಎದೆಯ ಮಟ್ಟಕ್ಕೆ ನಿಂತ ನದಿಯ ನೀರಿನಲ್ಲೇ ಹೆಗಲ ಮೇಲೆ ಆ ಶವವನ್ನು ಹೊತ್ತು ಸಾಗಲಾಯಿತು.

ಅನಾರೋಗ್ಯದಿಂದ ಮೃತಪಟ್ಟ ಸಾಂತಾ ರಾಣಾ ಎಂಬ ವ್ಯಕ್ತಿಯ ಸಂಬಂಧಿಕರು ಅವರ ಮೃತದೇಹವನ್ನು ಎದೆಯ ಎತ್ತರ ನಿಂತಿದ್ದ ನದಿ ನೀರಿನಲ್ಲಿ ಸ್ಮಶಾನದ ಮೈದಾನಕ್ಕೆ ಸಾಗಿಸಿದ್ದಾರೆ. ಬಹಳ ದಿನಗಳಿಂದ ಪಾರ್ಶ್ವವಾಯು ಪೀಡಿತರಾಗಿದ್ದ ಸಾಂತಾ ರಾಣಾ ಮಂಗಳವಾರ ಇಹಲೋಕ ತ್ಯಜಿಸಿದ್ದರು. ಜೋರು ಮಳೆಗೆ ಉಕ್ಕಿ ಹರಿಯುತ್ತಿದ್ದ ಹೊಳೆಯ ಇನ್ನೊಂದು ಬದಿಯಲ್ಲಿ ಶವ ಸಂಸ್ಕಾರ ಮಾಡಬೇಕಾಗಿತ್ತು.

No bridge, Odisha villagers carry Dead Body on shoulders through chest deep water for cremation

ಇದನ್ನೂ ಓದಿ: Viral Fever: ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ವೈರಲ್ ಜ್ವರ; ಬಿರುಗಾಳಿಯಿಂದಾಗಿ ಇನ್ನಷ್ಟು ಹದಗೆಡಲಿದೆ ಆರೋಗ್ಯ

ಆದರೆ, ನದಿಗೆ ಅಡ್ಡಲಾಗಿ ಸೇತುವೆಯಿಲ್ಲದ ಕಾರಣ, ರಾಣಾ ಅವರ ಸಂಬಂಧಿಕರು ಅವರ ಶವವನ್ನು ತಮ್ಮ ಹೆಗಲ ಮೇಲೆ ಹೊತ್ತುಕೊಂಡು ನದಿಯನ್ನು ದಾಟಿದರು. ಸುರಿಯುವ ಮಳೆಯಿಂದ ಶವವನ್ನು ರಕ್ಷಿಸಲು ಅದರ ಮೇಲೆ ಬಾಳೆ ಎಲೆಗಳನ್ನು ಹಾಸಿದ್ದರು. ಈ ಘಟನೆಯ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: ಭಾರತೀಯ ಗ್ರಾಹಕರಿಗೆ 5ಜಿ ವಲಯದಲ್ಲಿ ಕ್ರಾಂತಿಕಾರಕ ಸೇವೆ ಒದಗಿಸುವ ನಿಟ್ಟಿನಲ್ಲಿ 19,867.8 ಮೆಗಾಹರ್ಟ್ಸ್‌ ಸ್ಪೆಕ್ಟ್ರಮ್‌ ಖರೀದಿಸಿದ ಏರ್‌ಟೆಲ್‌

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:08 pm, Fri, 12 August 22

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್