AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆಯಾಗಿಲ್ಲ’; ಭಾರತೀಯ ಸೇನೆ ಸ್ಪಷ್ಟನೆ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ವಲಯದಲ್ಲಿ ಯಾವುದೇ ಕದನ ವಿರಾಮ ಉಲ್ಲಂಘನೆಯಾಗಿಲ್ಲ ಎಂದು ಭಾರತೀಯ ಸೇನೆ ಸ್ಪಷ್ಟನೆ ನೀಡಿದೆ. ಪೂಂಚ್ ಬಳಿ ಗಡಿಯಲ್ಲಿ ಪಾಕಿಸ್ತಾನದಿಂದ ಅಪ್ರಚೋದಿತ ಗುಂಡಿನ ದಾಳಿ ನಡೆದಿದೆ ಎಂದು ಸೇನಾ ಅಧಿಕಾರಿ ಹೇಳಿದ್ದಾಗಿ ವರದಿಯಾಗಿತ್ತು. ಆದರೆ, ಆ ಸುದ್ದಿ ಬಂದ ಕೆಲವೇ ನಿಮಿಷಗಳಲ್ಲಿ ಭಾರತೀಯ ಸೇನೆ ಆ ರೀತಿಯ ಯಾವುದೇ ದಾಳಿ ನಡೆದಿಲ್ಲ ಎಂದು ನಿರಾಕರಿಸಿದೆ.

‘ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆಯಾಗಿಲ್ಲ’; ಭಾರತೀಯ ಸೇನೆ ಸ್ಪಷ್ಟನೆ
Indian Border
ಸುಷ್ಮಾ ಚಕ್ರೆ
|

Updated on:Aug 05, 2025 | 10:24 PM

Share

ನವದೆಹಲಿ, ಆಗಸ್ಟ್ 5: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಬಳಿಯ ಪೂಂಚ್ ವಲಯದ ಎಲ್​ಒಸಿಯಲ್ಲಿ ಪಾಕಿಸ್ತಾನದ (Pakistan) ಅಪ್ರಚೋದಿತ ಗುಂಡಿನ ದಾಳಿ ನಡೆಸುವ ಮೂಲಕ ಕದನವಿರಾಮ (Ceasefire) ಉಲ್ಲಂಘಿಸಿದೆ ಎಂದು ಸೇನಾ ಅಧಿಕಾರಿ ಹೇಳಿರುವುದಾಗಿ ಮಾಹಿತಿ ಲಭ್ಯವಾಗಿತ್ತು. ಆದರೆ, ಆ ಸುದ್ದಿಯನ್ನು ಭಾರತೀಯ ಸೇನೆ ನಿರಾಕರಿಸಿದೆ. ಇಂದು ಸಂಜೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ವಲಯದಲ್ಲಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಕದನ ವಿರಾಮ ಉಲ್ಲಂಘನೆಯ ವರದಿಗಳನ್ನು ಭಾರತೀಯ ಸೇನೆ ತಳ್ಳಿ ಹಾಕಿದೆ.

ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಯಾವುದೇ ಕದನ ವಿರಾಮ ಉಲ್ಲಂಘನೆಯಾಗಿಲ್ಲ ಎಂದು ಭಾರತೀಯ ಸೇನೆ ಸ್ಪಷ್ಟನೆ ನೀಡಿದೆ. ಈ ಹಿಂದೆ ವರದಿಗಳ ಪ್ರಕಾರ, ಪೂಂಚ್‌ನ ಕೃಷ್ಣ ಘಾಟಿ ವಲಯದಲ್ಲಿ ಪಾಕಿಸ್ತಾನದ ಕದನ ವಿರಾಮ ಉಲ್ಲಂಘನೆಗೆ ಭಾರತೀಯ ಸೇನೆಯು ಪ್ರತಿದಾಳಿ ನಡೆಸಿದೆ ಎನ್ನಲಾಗಿತ್ತು. ಗುಂಡಿನ ಚಕಮಕಿ 15 ನಿಮಿಷಗಳ ಕಾಲ ಮುಂದುವರೆದಿದ್ದು, ಯಾವುದೇ ಸಾವುನೋವು ಸಂಭವಿಸಿಲ್ಲ ಎನ್ನಲಾಗಿತ್ತು. ಆದರೆ, “ಗಡಿ ನಿಯಂತ್ರಣ ರೇಖೆಯಲ್ಲಿ ಯಾವುದೇ ಕದನ ವಿರಾಮ ಉಲ್ಲಂಘನೆಯಾಗಿಲ್ಲ” ಎಂದು ಭಾರತೀಯ ಸೇನೆ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಭಾರತ-ಪಾಕ್ ನಡುವೆ ನೇರ ಮಾತುಕತೆ ಮೂಲಕ ಕದನವಿರಾಮ; ಮತ್ತೊಮ್ಮೆ ಜೈಶಂಕರ್ ಸ್ಪಷ್ಟನೆ

ಭಾರತ ಮತ್ತು ಪಾಕಿಸ್ತಾನ ನಡುವಿನ ಮಿಲಿಟರಿ ಸಂಘರ್ಷದ ನಡುವೆ ಈ ಹಿಂದಿನ ಕದನ ವಿರಾಮ ಉಲ್ಲಂಘನೆ ಮೇ ತಿಂಗಳಲ್ಲಿ ಸಂಭವಿಸಿತ್ತು. ಪಾಕಿಸ್ತಾನ ರೇಂಜರ್‌ಗಳು ಮೇ 9ರಂದು ತಡರಾತ್ರಿ ಜಮ್ಮು ಸೆಕ್ಟರ್‌ನ ಅಂತಾರಾಷ್ಟ್ರೀಯ ಗಡಿಯಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಪೋಸ್ಟ್‌ಗಳ ಮೇಲೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದರು. ಮೇ 10ರ ಘಟನೆಯು 3,323 ಕಿ.ಮೀ ಭಾರತ-ಪಾಕಿಸ್ತಾನ ಗಡಿಯನ್ನು ಕಾಯಲು ನಿಯೋಜಿಸಲಾದ ಭಾರತದ ಗಡಿ ಕಾವಲು ಪಡೆ ಬಿಎಸ್‌ಎಫ್‌ನಿಂದ ತೀಕ್ಷ್ಣ ಪ್ರತಿಕ್ರಿಯೆಯನ್ನು ಪಡೆಯಿತು.

ಏಪ್ರಿಲ್ 22ರಂದು ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದಕ್ಕೆ ಪ್ರತೀಕಾರವಾಗಿ ಭಾರತೀಯ ಸಶಸ್ತ್ರ ಪಡೆಗಳು ಮೇ 7ರಂದು ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಪಾಕ್ ಮನವಿಯ ಮೇರೆಗೆ ಕದನ ವಿರಾಮ ಘೋಷಿಸಲಾಗಿತ್ತು. ಈ ದಾಳಿಯಲ್ಲಿ ಪಾಕಿಸ್ತಾನದೊಂದಿಗೆ ಸಂಪರ್ಕ ಹೊಂದಿದ್ದ ಭಯೋತ್ಪಾದಕರು ಪಹಲ್ಗಾಮ್​ನಲ್ಲಿ 26 ಜನರನ್ನು ಕೊಂದಿದ್ದರು. ಆ ದಾಳಿಯ ಸಂಚು ರೂಪಿಸಿದ್ದ ಮೂವರು ಉಗ್ರರನ್ನು ಈಗಾಗಲೇ ಎನ್​ಕೌಂಟರ್ ಮಾಡಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 10:18 pm, Tue, 5 August 25

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!