AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಯಾವ ಪ್ರಜೆಯನ್ನೂ ಪರಕೀಯ ಎಂದು ಕರೆಯುವಂತಿಲ್ಲ: ಜಗದೀಪ್​ ಧನ್​ಕರ್

ಸರ್ಕಾರಿ ಉದ್ಯೋಗಿಗಳು ಮತ್ತು ಪೊಲೀಸರು ತಮ್ಮ ಕರ್ತವ್ಯವನ್ನು ಪಾಲಿಸಬೇಕು. ಅದರ ಹೊರತಾಗಿ ರಾಜಕಾರಣಿಗಳು, ತಮಗೆ ವೈಯಕ್ತಿಕವಾಗಿ ಆಪ್ತರಾದವರು ಹೇಳಿದಂತೆ ವರ್ತಿಸುವುದು ಸರಿಯಲ್ಲ. ನಮ್ಮ ಮುಂದೆ ಪ್ರಜಾಪ್ರಭುತ್ವವನ್ನು ರಕ್ಷಿಸುವ ಹೊಣೆಗಾರಿಕೆ ಇದೆ ಎಂಬುದನ್ನು ಮರೆಯಬಾರದು.

ಭಾರತದ ಯಾವ ಪ್ರಜೆಯನ್ನೂ ಪರಕೀಯ ಎಂದು ಕರೆಯುವಂತಿಲ್ಲ: ಜಗದೀಪ್​ ಧನ್​ಕರ್
ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್​ ಧನ್​ಕರ್​
Skanda
| Edited By: |

Updated on: Jan 06, 2021 | 6:08 PM

Share

ಕೋಲ್ಕತ್ತಾ: ಭಾರತದ ಯಾವುದೇ ಪ್ರಜೆಯನ್ನು ಯಾವುದೇ ರಾಜ್ಯದಲ್ಲಿ ‘ಪರಕೀಯ’ ಎಂದು ನೋಡುವುದು ಸಂವಿಧಾನದ ಆಶಯಗಳ ಉಲ್ಲಂಘನೆ ಎಂದು ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್​ ಧನ್​ಕರ್​ ಅಭಿಪ್ರಾಯಪಟ್ಟಿದ್ದಾರೆ. ಪೂರ್ವ ಮೇದಿನಿಪುರ ಜಿಲ್ಲೆಯ ಕೋಲಾಘಾಟ್​ನಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಭಾರತದ ಯಾವುದೇ ಭಾಗಕ್ಕೆ ಸೇರಿದ ಪ್ರಜೆಯನ್ನು ಪರಕೀಯ ಎಂದು ಪರಿಗಣಿಸುವುದು ಸಂವಿಧಾನಕ್ಕೆ ವಿರುದ್ಧ ಎಂದು ಹೇಳಿದ್ದಾರೆ.

ಟಿಎಂಸಿ ಪಕ್ಷದವರ ಹೇಳಿಕೆಗೆ ಸಂಬಂಧಿಸಿ ಪ್ರತಿಕ್ರಿಯಿಸಿದ ಅವರು, ಪಶ್ಚಿಮ ಬಂಗಾಳದ ಕೆಲವರು ಹೊರ ರಾಜ್ಯಗಳಿಂದ ಬರುವವರನ್ನು ಪರಕೀಯ ಎಂದು ಕರೆದಿರುವುದು ವಿಷಾದನೀಯ. ದೇಶದ ಯಾವುದೇ ಮೂಲೆಯಲ್ಲಿದ್ದರೂ ಅವರು ಈ ದೇಶದವರೇ ಆಗಿರುತ್ತಾರೆಯೇ ವಿನಃ ಹೊರಗಿನವರಾಗುವುದಿಲ್ಲ. ಒಂದುವೇಳೆ ಹಾಗೆ ಕರೆದರೆ ಅದು ಸಂವಿಧಾನದ ಆಶಯವನ್ನೇ ಬುಡಮೇಲು ಮಾಡಿದಂತೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಂತೆಯೇ, ಪ.ಬಂಗಾಳದ ಚುನಾವಣೆ ಕುರಿತು ಮಾತನಾಡಿ ಯಾವುದೇ ಗೊಂದಲಗಳಿಲ್ಲದೇ ಶಾಂತಿಯುತ ಚುನಾವಣೆ ನಡೆಸುವುದು ಸಾಧ್ಯವಿದೆ. ಮುಂಬರುವ ಚುನಾವಣೆಯಲ್ಲಿ ಗಲಾಟೆ, ಘರ್ಷಣೆ, ರಕ್ತಪಾತ ಆಗದಂತೆ ನಿಗಾ ವಹಿಸಬೇಕಿದೆ. ಒಬ್ಬ ರಾಜ್ಯಪಾಲನಾಗಿ ಹೀಗೆ ಕೋರಿಕೊಳ್ಳುವುದು ತಪ್ಪೇ? ಶಾಂತಿಯುತ ಚುನಾವಣೆಗಾಗಿ ಶ್ರಮಿಸುವುದು ನನ್ನ ಮತ್ತು ನಮ್ಮೆಲ್ಲರ ಕರ್ತವ್ಯ ಎಂಬ ಕಾರಣಕ್ಕೆ ಈ ಮನವಿ ಮಾಡುತ್ತಿದ್ದೇನೆ. ಜನರು ಯಾವುದೇ ರಾಜಕೀಯ ದ್ವೇಷಗಳನ್ನಿಟ್ಟುಕೊಳ್ಳದೇ ಸಮಚಿತ್ತರಾಗಿರಬೇಕೆಂದು ಬಯಸುತ್ತೇನೆ ಎಂದು ತಿಳಿಸಿದ್ದಾರೆ.

ಸರ್ಕಾರಿ ಉದ್ಯೋಗಿಗಳು ಮತ್ತು ಪೊಲೀಸರು ತಮ್ಮ ಕರ್ತವ್ಯವನ್ನು ಪಾಲಿಸಬೇಕು. ಅದರ ಹೊರತಾಗಿ ರಾಜಕಾರಣಿಗಳು, ತಮಗೆ ವೈಯಕ್ತಿಕವಾಗಿ ಆಪ್ತರಾದವರು ಹೇಳಿದಂತೆ ವರ್ತಿಸುವುದು ಸರಿಯಲ್ಲ. ನಮ್ಮ ಮುಂದೆ ಪ್ರಜಾಪ್ರಭುತ್ವವನ್ನು ರಕ್ಷಿಸುವ ಹೊಣೆಗಾರಿಕೆ ಇದೆ ಎಂಬುದನ್ನು ಮರೆಯಬಾರದು ಎಂದು ತಿಳಿಸಿದ್ದಾರೆ.

ಪ.ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೊವಿಡ್​ಗಾಗಿ ಖರೀದಿಸಿದ ಎರಡು ಸಾವಿರ ಕೋಟಿ ರೂಪಾಯಿ ಮೌಲ್ಯದ ವಸ್ತುಗಳ ಕುರಿತಾಗಿ ಸ್ಪಷ್ಟನೆ ನೀಡಬೇಕು ಎಂದು ಇದೇ ಸಂದರ್ಭದಲ್ಲಿ ಹೇಳಿಕೆ ನೀಡಿದ್ದಾರೆ.

ಜೆ.ಪಿ.ನಡ್ಡಾ ಪ್ರವಾಸದ ವೇಳೆ ಬಿಜೆಪಿ ಮುಖಂಡರ ವಾಹನಗಳ ಮೇಲೆ ಕಲ್ಲು ತೂರಾಟ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ