AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂದು ಪಾಕ್​ ಸೇನಾ ಮುಖ್ಯಸ್ಥ ಬಜ್ವಾರನ್ನು ತಬ್ಬಿದ್ದ ನವಜೋತ್​ ಸಿಂಗ್ ಸಿಧು, ಇಂದು ಬಿಪಿನ್​ ರಾವತ್​ ನಿಧನಕ್ಕೆ ಸಂತಾಪ ಸೂಚಿಸಿಲ್ಲ-ಬಿಜೆಪಿ ಆಕ್ಷೇಪ

ನವಜೋತ್​ ಸಿಂಗ್​ ಸಿಧು ಹೆಚ್ಚಾಗಿ ಸುದ್ದಿಯಾಗಿದ್ದು ಅವರ ವಿವಾದಗಳಿಂದ. ಅದರಲ್ಲೂ ಪಾಕಿಸ್ತಾನವನ್ನು ಹೊಗಳುವ ಮೂಲಕವೇ ಜಾಸ್ತಿ ಸುದ್ದಿಯಾಗುತ್ತಿದ್ದಾರೆ.  ಅದರಲ್ಲೂ 2018ರಲ್ಲಿ ಪಾಕಿಸ್ತಾನ ಸೇನಾ ಮುಖ್ಯಸ್ಥ ಖಾಮರ್ ಜಾವೇದ್ ಬಾಜ್ವಾರನ್ನು ಅಪ್ಪಿಕೊಂಡಿದ್ದು ದೊಡ್ಡ ಸುದ್ದಿಯಾಗಿತ್ತು

ಅಂದು ಪಾಕ್​ ಸೇನಾ ಮುಖ್ಯಸ್ಥ ಬಜ್ವಾರನ್ನು ತಬ್ಬಿದ್ದ ನವಜೋತ್​ ಸಿಂಗ್ ಸಿಧು, ಇಂದು ಬಿಪಿನ್​ ರಾವತ್​ ನಿಧನಕ್ಕೆ ಸಂತಾಪ ಸೂಚಿಸಿಲ್ಲ-ಬಿಜೆಪಿ ಆಕ್ಷೇಪ
ನವಜೋತ್​ ಸಿಂಗ್ ಸಿಧು
TV9 Web
| Edited By: |

Updated on: Dec 09, 2021 | 3:50 PM

Share

ದೆಹಲಿ: ತಮಿಳುನಾಡಿನ ಕೂನೂರ್​ ಬಳಿ ನಡೆದ ಹೆಲಿಕಾಪ್ಟರ್​ ಪತನ ದುರಂತದಲ್ಲಿ ಮೃತಪಟ್ಟ ಸಿಡಿಎಸ್​ ಬಿಪಿನ್​ ರಾವತ್​ ಮತ್ತು ಇತರ ಸೇನಾಧಿಕಾರಿಗಳಿಗೆ ಇಡೀ ದೇಶವೇ ಸಂತಾಪ ಸೂಚಿಸುತ್ತಿದೆ. ಅದರಲ್ಲೂ ಎಲ್ಲ ಪಕ್ಷಗಳ ರಾಜಕೀಯ ಗಣ್ಯರೂ ಟ್ವೀಟ್ ಮೂಲಕ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ. ಯುಎಸ್​, ರಷ್ಯಾ, ಚೀನಾ, ಪಾಕಿಸ್ತಾನ ದೇಶಗಳ ರಕ್ಷಣಾ ಅಧಿಕಾರಿಗಳೂ ಸಂತಾಪ ಸೂಚಿಸಿದ್ದಾರೆ. ಅಷ್ಟೆಲ್ಲ ಆದರೂ ಪಂಜಾಬ್​ ಕಾಂಗ್ರೆಸ್​​ನ ಅಧ್ಯಕ್ಷ ನವಜೋತ್​ ಸಿಂಗ್ ಸಿಧು ಒಂದೇ ಒಂದು ಶಬ್ದವನ್ನೂ ಈ ಬಗ್ಗೆ ಮಾತನಾಡಿಲ್ಲ. ಬಿಪಿನ್​ ರಾವತ್​ ಸೇರಿ ಉಳಿದ ಸೇನಾಧಿಕಾರಿಗಳ ನಿಧನಕ್ಕೆ ಸಂತಾಪ ಸೂಚಿಸಿಲ್ಲ.  ಇಂದು ಕೂಡ ಸೋನಿಯಾ ಗಾಂಧಿಯವರೊಂದಿಗೆ ಇರುವ ಫೋಟೋ ಶೇರ್ ಮಾಡಿಕೊಂಡು, ಅವರಿಗೆ ಜನ್ಮ ದಿನದ ಶುಭ ಕೋರಿದ್ದಾರೆ ಬಿಟ್ಟರೆ ಬಿಪಿನ್​ ರಾವತ್​ ನಿಧನದ ಬಗ್ಗೆ ಟ್ವೀಟ್​ ಆಗಲಿ, ಸಂತಾಪದ ಪೋಸ್ಟ್ ಆಗಲೀ ಹಾಕಿಲ್ಲ.  

ಭಾರತದ ಮೊದಲ ಸಿಡಿಎಸ್​, ದಕ್ಷ ಸೇನಾ ನಾಯಕ ಬಿಪಿನ್ ರಾವತ್​ ಸೇರಿ 11 ಮಂದಿ ಸೇನಾಧಿಕಾರಿಗಳು ಮೃತಪಟ್ಟಿದ್ದಾರೆ.  ಹೀಗಿದ್ದಾಗ್ಯೂ ನವಜೋತ್​ ಸಿಂಗ್ ಸಿಧು ಒಂದು ಸಂತಾಪ ಸೂಚಿಸಲಿಲ್ಲ ಎಂದು ಬಿಜೆಪಿಯ ವಕ್ತಾರ ನೂಪುರ್​ ಶರ್ಮಾ ವ್ಯಂಗ್ಯವಾಡಿದ್ದಾರೆ. ನವಜೋತ್​ ಸಿಂಗ್​ ಸಿಧು ತಾವು ಸೋನಿಯಾ ಗಾಂಧಿಯವರೊಂದಿಗೆ ಇರುವ ಫೋಟೋ ಶೇರ್​ ಮಾಡಿಕೊಂಡಿದ್ದನ್ನೇ ರೀಟ್ವೀಟ್ ಮಾಡಿರುವ ನೂಪುರ್ ಶರ್ಮಾ, ಜನರಲ್​ ಬಿಪಿನ್ ರಾವತ್ ಅಕಾಲಿಕ ಮರಣದ ಬಗ್ಗೆ ಒಂದು ಮಾತನಾಡಲಿಲ್ಲ, ರಾವತ್​ ಪತ್ನಿ ಮತ್ತು 11 ಸೇನಾಧಿಕಾರಿಗಳು ಮೃತಪಟ್ಟಿದ್ದರ ಬಗ್ಗೆ ಒಂದು ಶಬ್ದ ಇಲ್ಲ, ಅವಘಡದಲ್ಲಿ ಬದುಕುಳಿದ ಏಕೈಕ ಗ್ರೂಪ್​ ಕ್ಯಾಪ್ಟನ್​ ವರುಣ್​ ಸಿಂಗ್​ ಆರೋಗ್ಯ ಚೇತರಿಕೆಗೆ ಹಾರೈಕೆಯಿಲ್ಲ ಎಂದಿದ್ದಾರೆ.

ನವಜೋತ್​ ಸಿಂಗ್​ ಸಿಧು ಹೆಚ್ಚಾಗಿ ಸುದ್ದಿಯಾಗಿದ್ದು ಅವರ ವಿವಾದಗಳಿಂದ. ಅದರಲ್ಲೂ ಪಾಕಿಸ್ತಾನವನ್ನು ಹೊಗಳುವ ಮೂಲಕವೇ ಜಾಸ್ತಿ ಸುದ್ದಿಯಾಗುತ್ತಿದ್ದಾರೆ.  ಅದರಲ್ಲೂ 2018ರಲ್ಲಿ ಪಾಕಿಸ್ತಾನ ಸೇನಾ ಮುಖ್ಯಸ್ಥ ಖಾಮರ್ ಜಾವೇದ್ ಬಾಜ್ವಾರನ್ನು ಅಪ್ಪಿಕೊಂಡಿದ್ದು ದೊಡ್ಡ ಸುದ್ದಿಯಾಗಿತ್ತು. ಇದೇ ವಿಚಾರವಾಗಿಯೇ ಪಂಜಾಬ್​ನ ಅಂದಿನ ಮುಖ್ಯಮಂತ್ರಿ ಅಮರಿಂದರ್​ ಸಿಂಗ್​  ಕೂಡ ಸಿಧು ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದರು. ಈಗ ನಮ್ಮ ದೇಶದ ಸಿಡಿಎಸ್​ ಮತ್ತು ಇತರ ಪ್ರಮುಖ ಸೇನಾಧಿಕಾರಿಗಳು ಮೃತಪಟ್ಟರೆ ಒಂದೂ ಸಂತಾಪದ ನುಡಿಗಳಿಲ್ಲ ಎಂಬುದು ಬಿಜೆಪಿ ಆಕ್ರೋಶವಾಗಿದೆ.

ಇದನ್ನೂ ಓದಿ: Farmers Protest ಶನಿವಾರ ಅಂತ್ಯವಾಗಲಿದೆ 15 ತಿಂಗಳ ಸುದೀರ್ಘ ಪ್ರತಿಭಟನೆ; ದೆಹಲಿ ಗಡಿಯಿಂದ ತೆರಳುತ್ತಿರುವ ಪ್ರತಿಭಟನಾ ನಿರತ ರೈತರು

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ