ಲೋಕಸಭೆ: ಅವಿಶ್ವಾಸ ನಿರ್ಣಯದಲ್ಲಿ ‘ಇಂಡಿಯಾ’ಗೆ ಸೋಲು

No-Confidence Motion: ಲೋಕಸಭೆಯಲ್ಲಿ ವಿಪಕ್ಷಗಳ ಅವಿಶ್ವಾಸ ಗೊತ್ತುವಳಿ ಮೇಲಿನ ಚರ್ಚೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ನೀಡಿದ್ದಾರೆ. ವಿಪಕ್ಷ ನಾಯಕರು ಕೇಳಿದ ಪ್ರಶ್ನೆಗಳಿಗೆ ಸುದೀರ್ಘ ಭಾಷಣದ ಮೂಲಕ ಮೋದಿ ಉತ್ತರ ನೀಡಿದ ನಂತರ ಧ್ವನಿ ಮತ ಮೂಲಕ ಮತದಾನ ನಡೆದಿದ್ದು ವಿಪಕ್ಷಗಳ ಒಕ್ಕೂಟಕ್ಕೆ ಸೋಲುಂಟಾಗಿದೆ.

ಲೋಕಸಭೆ: ಅವಿಶ್ವಾಸ ನಿರ್ಣಯದಲ್ಲಿ 'ಇಂಡಿಯಾ'ಗೆ ಸೋಲು
ಲೋಕಸಭೆ
Follow us
|

Updated on:Aug 10, 2023 | 8:16 PM

ದೆಹಲಿ ಆಗಸ್ಟ್ 10:ಲೋಕಸಭೆಯಲ್ಲಿ (Lok sabha) ಅವಿಶ್ವಾಸ ನಿರ್ಣಯದ ಮೇಲೆ ಚರ್ಚೆಗಳಿಗೆ ಪ್ರಧಾನಿ ನರೇಂದ್ರ ಮೋದಿ(Narenda Modi) ಪ್ರತಿಕ್ರಿಯೆ ನೀಡಿದ ನಂತರ ಮತದಾನ ನಡೆದಿದೆ. ಮೋದಿ ಭಾಷಣ ನಡೆಯುತ್ತಿದ್ದಂತೆ ವಿಪಕ್ಷ ಸಂಸದರು ಸಭಾತ್ಯಾಗ ಮಾಡಿದ್ದಾರೆ. ಧ್ವನಿ ಮತದಲ್ಲಿ ವಿಪಕ್ಷದ ಅವಿಶ್ವಾಸ ಗೊತ್ತುವಳಿಗೆ (No Confidence Motion) ಸೋಲುಂಟಾಗಿದೆ. ಎನ್‌ಡಿಎ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಮಂಡಿಸಿದ ಅವಿಶ್ವಾಸ ನಿರ್ಣಯಕ್ಕೆ ಪ್ರತಿಯಾಗಿ ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಅವರ ಭಾಷಣ 2 ಗಂಟೆ 20 ನಿಮಿಷದ್ದಾಗಿತ್ತು.

ಪ್ರತಿಪಕ್ಷಗಳು ಜುಲೈ 26 ರಂದು ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಮಂಡಿಸಿದ್ದು ಅದನ್ನು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಅಂಗೀಕರಿಸಿದ್ದರು. ಮೋದಿಯವರು ಅವಿಶ್ವಾಸ ನಿರ್ಣಯವನ್ನು ಎದುರಿಸುತ್ತಿರುವುದು ಇದು ಎರಡನೇ ಬಾರಿ. ಮಂಗಳವಾರ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಅವರು ಈ ಮಸೂದೆಯ ಮೇಲಿನ ಚರ್ಚೆಯನ್ನು ಪ್ರಾರಂಭಿಸಿದ್ದರು.

ಜುಲೈ 20ರಂದು ಮುಂಗಾರು ಅಧಿವೇಶನ ಆರಂಭವಾದಾಗಿನಿಂದ ಮಣಿಪುರದಲ್ಲಿ ನಡೆದ ಹಿಂಸಾಚಾರ ಸೇರಿದಂತೆ ಹಲವು ವಿಷಯಗಳ ಕುರಿತು ಸಂಸತ್ತಿನಲ್ಲಿ ಗದ್ದಲ ನಡೆಯುತ್ತಿದೆ. ಚರ್ಚೆಯ ಸಂದರ್ಭದಲ್ಲಿ, ಕಾಂಗ್ರೆಸ್ ನಾಯಕರು ಪ್ರಧಾನಿ ಮೋದಿ ಯಾಕೆ ಮಣಿಪುರಕ್ಕೆ ಭೇಟಿ ನೀಡಿಲ್ಲ ಎಂದು ಪ್ರಶ್ನಿಸಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಮಣಿಪುರ ವಿಷಯ ಪ್ರಸ್ತಾಪಿಸಿ ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ

ಈಶಾನ್ಯದ ಎಲ್ಲಾ ಸಮಸ್ಯೆಗಳಿಗೆ ಕಾಂಗ್ರೆಸ್ ತಾಯಿ ಎಂದು ನಾನು ಇದನ್ನು ಸಂಪೂರ್ಣ ಗಂಭೀರತೆಯಿಂದ ಹೇಳಲು ಬಯಸುತ್ತೇನೆ. ಈಶಾನ್ಯದ ಜನರು ಇದಕ್ಕೆ ಜವಾಬ್ದಾರರಲ್ಲ, ಇದು ಅವರ (ಕಾಂಗ್ರೆಸ್) ರಾಜಕೀಯ ಎಂದು ಮೋದಿ ಹೇಳಿದ್ದಾರೆ. ಮಣಿಪುರದಲ್ಲಿ ಬಂಡಾಯ ಸಂಘಟನೆಗಳ ಅಪೇಕ್ಷೆಯಂತೆ ಎಲ್ಲವೂ ನಡೆಯುತ್ತಿದ್ದಾಗ ಮಣಿಪುರದಲ್ಲಿ ಯಾರ ಸರ್ಕಾರವಿತ್ತು? ಸರ್ಕಾರಿ ಕಚೇರಿಗಳಲ್ಲಿ ಮಹಾತ್ಮ ಗಾಂಧಿಯವರ ಚಿತ್ರಕ್ಕೆ ಅವಕಾಶ ನೀಡದಿದ್ದಾಗ ಮಣಿಪುರದಲ್ಲಿ ಯಾರ ಸರ್ಕಾರ ಇತ್ತು? ಶಾಲೆಗಳಲ್ಲಿ ರಾಷ್ಟ್ರಗೀತೆಗೆ ಅವಕಾಶ ನೀಡದಿರಲು ನಿರ್ಧಾರ ತೆಗೆದುಕೊಳ್ಳಲಾಗಿದೆಯೇ. ವಿಪಕ್ಷಗಳದ್ದು ಸೆಲೆಕ್ಟಿವ್ ನೋಲು. ಅವರು ರಾಜಕೀಯವನ್ನು ಮೀರಿ ಯೋಚಿಸಲು ಸಾಧ್ಯವಿಲ್ಲ ಎಂದಿದ್ದಾರೆ

ಈಶಾನ್ಯದವರ ಭಾವನೆಗಳನ್ನು ಅರ್ಥಮಾಡಿಕೊಳ್ಳಲು ಕಾಂಗ್ರೆಸ್ ಎಂದಿಗೂ ಪ್ರಯತ್ನಿಸಲಿಲ್ಲ

ನೀವು (ಕಾಂಗ್ರೆಸ್) ಈಶಾನ್ಯದ ಭಾವನೆಗಳನ್ನು ಅರ್ಥಮಾಡಿಕೊಳ್ಳಲು ಎಂದಿಗೂ ಪ್ರಯತ್ನಿಸಲಿಲ್ಲ. ನಾನು (ಈಶಾನ್ಯ) 50 ಬಾರಿ ಭೇಟಿ ನೀಡಿದ್ದೇನೆ. ಇದು ಕೇವಲ ದತ್ತಾಂಶವಲ್ಲ, ಇದು ಈಶಾನ್ಯದ ಕಡೆಗೆ ಸಮರ್ಪಣೆಯಾಗಿದೆ. 1956 ರ ಮಾರ್ಚ್ 5 ರಂದು, ಕಾಂಗ್ರೆಸ್ ಮಿಜೋರಾಂನ ಮುಗ್ಧ ಜನರ ಮೇಲೆ ವಾಯುಪಡೆಯ ಮೂಲಕ ದಾಳಿ ನಡೆಸಿತು. ಆ ನೋವನ್ನು ರಾಜ್ಯವು ಇನ್ನೂ ಮರೆಯಲು ಸಾಧ್ಯವಿಲ್ಲ ಎಂದು ಲೋಕಸಭೆಯಲ್ಲಿ ಮಾತನಾಡಿದ ಮೋದಿ ಹೇಳಿದ್ದಾರೆ.

ಯೇ ಹೈ ಲೂಟ್ ಕಿ ದುಕಾನ್, ಝೂಟ್ ಕಾ ಬಜಾರ್

ಕಾಂಗ್ರೆಸ್‌ನ ಸಮಸ್ಯೆಗಳನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ಅವರು ವರ್ಷಗಳಿಂದ, ಅವರು ಮತ್ತೆ ಮತ್ತೆ ವಿಫಲ ಉತ್ಪನ್ನವನ್ನು ಪ್ರಾರಂಭಿಸುತ್ತಿದ್ದಾರೆ. ಪ್ರತಿ ಬಾರಿ ಬಿಡುಗಡೆ ವಿಫಲವಾಗಿದೆ. ಇದರ ಪರಿಣಾಮವೆಂದರೆ ಮತದಾರರ ಮೇಲಿನ ಅವರ ದ್ವೇಷವು ಉತ್ತುಂಗಕ್ಕೇರಿದೆ.ಉಡಾವಣೆ ವಿಫಲವಾಗಿದೆ ಮತ್ತು ಅವರು ಮತದಾರರ ಮೇಲೆ ದ್ವೇಷ ತೋರಿಸುತ್ತಿದ್ದಾರೆ. ಆದರೆ PR ಜನರು ‘ಮೊಹಬ್ಬತ್ ಕಿ ದುಕಾನ್’ ಎಂದು ಪ್ರಚಾರ ಮಾಡುತ್ತಾರೆ. ಅದಕ್ಕಾಗಿಯೇ, ದೇಶದ ಜನರು ‘ಯೇ ಹೈ ಲೂಟ್ ಕಿ ದುಕಾನ್, ಝೂಟ್ ಕಾ ಬಜಾರ್’ ಎಂದು ಹೇಳುತ್ತಿದ್ದಾರೆ.

ಇದನ್ನೂ ಓದಿ: ಭಾರತದ ಆರ್ಥಿಕತೆ ಮುಳುಗಿಸುವ ಗ್ಯಾರಂಟಿ ನೀಡುತ್ತಿದ್ದಾರೆ; ಕಾಂಗ್ರೆಸ್ ಖಾತರಿಗಳ ಬಗ್ಗೆ ಪ್ರಧಾನಿ ಮೋದಿ ಟೀಕೆ

ಮಣಿಪುರದಲ್ಲಿ ಮುಂದಿನ ದಿನಗಳಲ್ಲಿ ಶಾಂತಿ ನೆಲೆಸಲಿದೆ: ಪ್ರಧಾನಿ ಮೋದಿ

“ಮಣಿಪುರದಲ್ಲಿ ಆರೋಪಿಗಳನ್ನು ಶಿಕ್ಷಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರವು ಪ್ರಯತ್ನಗಳನ್ನು ನಡೆಸುತ್ತಿದೆ. ಮುಂದಿನ ದಿನಗಳಲ್ಲಿ ಮಣಿಪುರದಲ್ಲಿ ಶಾಂತಿ ನೆಲೆಸುತ್ತದೆ ಎಂದು ನಾನು ದೇಶದ ಜನರಿಗೆ ಭರವಸೆ ನೀಡಲು ಬಯಸುತ್ತೇನೆ” ಎಂದು ಪ್ರಧಾನಿ ಮೋದಿ ಹೇಳಿದರು. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವುದನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳೆರಡೂ ಸಾಧ್ಯವಿರುವ ಎಲ್ಲವನ್ನೂ ಮಾಡುತ್ತಿವೆ. ಮುಂಬರುವ ಸಮಯದಲ್ಲಿ ಮಣಿಪುರದಲ್ಲಿ ಶಾಂತಿಯನ್ನು ಪುನಃಸ್ಥಾಪಿಸಲಾಗುವುದು..ದೇಶವು ನಿಮ್ಮೊಂದಿಗಿದೆ ಎಂದು ಮಣಿಪುರದ ಮಹಿಳೆಯರು ಮತ್ತು ಹೆಣ್ಣುಮಕ್ಕಳಿಗೆ ನಾನು ಭರವಸೆ ನೀಡುತ್ತಿದ್ದೇನೆ ಎಂದಿದ್ದಾರೆ ಮೋದಿ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:38 pm, Thu, 10 August 23