ಅವಿಶ್ವಾಸ ನಿರ್ಣಯ: ಇಂದು ಲೋಕಸಭೆಯಲ್ಲಿ ಉತ್ತರ ನೀಡಲಿದ್ದಾರೆ ಪ್ರಧಾನಿ ಮೋದಿ

ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ತಂದಿರುವ ಅವಿಶ್ವಾಸ ನಿರ್ಣಯಕ್ಕೆ ಪ್ರಧಾನಿ ಮೋದಿ ಇಂದು ಉತ್ತರ ನೀಡಲಿದ್ದಾರೆ.

ಅವಿಶ್ವಾಸ ನಿರ್ಣಯ: ಇಂದು ಲೋಕಸಭೆಯಲ್ಲಿ ಉತ್ತರ ನೀಡಲಿದ್ದಾರೆ ಪ್ರಧಾನಿ ಮೋದಿ
ನರೇಂದ್ರ ಮೋದಿ
Follow us
|

Updated on: Aug 10, 2023 | 9:54 AM

ಮಣಿಪುರ ಹಿಂಸಾಚಾರ(Manipur Violence)ಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ತಂದಿರುವ ಅವಿಶ್ವಾಸ ನಿರ್ಣಯ(No-Confidence Motion)ಕ್ಕೆ ಪ್ರಧಾನಿ ಮೋದಿ ಇಂದು ಉತ್ತರ ನೀಡಲಿದ್ದಾರೆ. ಜುಲೈ 26 ರಂದು ಮಣಿಪುರ ಹಿಂಸಾಚಾರದ ವಿಷಯದ ಬಗ್ಗೆ ಪ್ರತಿಪಕ್ಷಗಳು ಅವಿಶ್ವಾಸ ನಿರ್ಣಯವನ್ನು ಮಂಡಿಸಿದ್ದವು, ಅದನ್ನು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಅಂಗೀಕರಿಸಿದ್ದರು.

ಮಂಗಳವಾರದಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಅವರು ಮಸೂದೆಯ ಮೇಲಿನ ಚರ್ಚೆಯನ್ನು ಆರಂಭಿಸಿದರು. ಇದನ್ನು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಒಪ್ಪಿಕೊಂಡಿದ್ದಾರೆ.

ಅವಿಶ್ವಾಸ ನಿರ್ಣಯಕ್ಕೆ ಉತ್ತರ ನೀಡಲು ಪ್ರಧಾನಿ ಇಂದು ಸದನಕ್ಕೆ ಹಾಜರಾಗಲಿದ್ದು, ನಿರ್ಣಯದ ಕುರಿತು ಮಾತನಾಡಲಿದ್ದಾರೆ ಎಂದು ಕೇಂದ್ರ ಸಚಿವರು ಕೆಳಮನೆಗೆ ತಿಳಿಸಿದ್ದಾರೆ.

ಮತ್ತಷ್ಟು ಓದಿ: 2023ರಲ್ಲಿಯೂ ಅವಿಶ್ವಾಸ ನಿರ್ಣಯ ಮಂಡಿಸಲು ಅವಕಾಶ ಸಿಗಲಿ: 5 ವರ್ಷಗಳ ಹಿಂದೆ ಮೋದಿ ಹೇಳಿದ್ದ ವಿಡಿಯೊ ವೈರಲ್

ಪ್ರಧಾನಿ ನರೇಂದ್ರ ಮೋದಿ ಅವರು ಅವಿಶ್ವಾಸ ನಿರ್ಣಯವನ್ನು ಎದುರಿಸುತ್ತಿರುವುದು ಇದು ಎರಡನೇ ಬಾರಿ. ಆಂಧ್ರಪ್ರದೇಶಕ್ಕೆ ವಿಶೇಷ ವರ್ಗದ ಸ್ಥಾನಮಾನ ನೀಡುವ ಕುರಿತು 2018 ರಲ್ಲಿ ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಾಗಿತ್ತು.

ವಿಪಕ್ಷಗಳಿಂದ ಪ್ರಧಾನಿಗೆ ಮೂರು ಪ್ರಶ್ನೆ

ಮೋದಿ ಮಣಿಪುರಕ್ಕೆ ಏಕೆ ಹೋಗಿಲ್ಲ?” ರಾಹುಲ್ ಗಾಂಧಿ, ವಿವಿಧ ಪಕ್ಷಗಳ ಸಂಸದರು, ಅಲ್ಲಿಗೆ ಹೋದರು, ಕೇಂದ್ರ ಗೃಹ ಸಚಿವರು ಅಲ್ಲಿಗೆ ಹೋದರು, ರಾಜ್ಯ ಗೃಹ ಸಚಿವರೂ ಅಲ್ಲಿಗೆ ಹೋಗಿದ್ದರು, ಆದರೆ ದೇಶದ ಪ್ರಧಾನಿಯಾಗಿರುವ ಮೋದಿ ಏಕೆ ಮಣಿಪುರಕ್ಕೆ ಹೋಗಲಿಲ್ಲ.

ಎರಡನೆಯ ಪ್ರಶ್ನೆ: ಮಣಿಪುರದ ಬಗ್ಗೆ ಮಾತನಾಡಲು ಮೋದಿ ಅವರು 80 ದಿನಗಳನ್ನು ಏಕೆ ತೆಗೆದುಕೊಂಡರು?

ಮೂರನೇ ಪ್ರಶ್ನೆ: ಮಣಿಪುರದ ಮುಖ್ಯಮಂತ್ರಿಯನ್ನು ಏಕೆ ವಜಾ ಮಾಡಿಲ್ಲ?ಗುಜರಾತಿನಲ್ಲಿ ನೀವು ರಾಜಕೀಯ ಮಾಡಬೇಕಾದಾಗ ನೀವು ಎರಡು ಬಾರಿ ಸಿಎಂ ಬದಲಾಯಿಸಿದ್ದೀರಿ. ಉತ್ತರಾಖಂಡದಲ್ಲಿ ಚುನಾವಣೆ ನಡೆದಾಗ ಹಲವು ಬಾರಿ ಸಿಎಂ ಬದಲಾಯಿಸಿದ್ದೀರಿ. ತ್ರಿಪುರಾದಲ್ಲಿ ಚುನಾವಣೆ ಹತ್ತಿರವಾದಾಗ ಅಲ್ಲಿಯೂ ಸಿಎಂ ಬದಲಾಯಿಸಿದ್ದೀರಿ. ಮಣಿಪುರ ಸಿಎಂಗೆ ನೀವೇಕೆ ಆಶೀರ್ವಾದ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್